ಹರಿಯಾಣ ಚುನಾವಣೆ | ಎಂದಿಗೂ ಅತಿಯಾದ ಆತ್ಮವಿಶ್ವಾಸ ಇರಬಾರದು: ಅರವಿಂದ್ ಕೇಜ್ರಿವಾಲ್

Date:

Advertisements

ಹರಿಯಾಣ ಚುನಾವಣೆಯ ಫಲಿತಾಂಶ ಬಹುತೇಕ ಹೊರಬೀಳುತ್ತಿದ್ದಂತೆ, “ಎಂದಿಗೂ ಅತಿಯಾದ ಆತ್ಮವಿಶ್ವಾಸ ಇರಬಾರದು, ಯಾವುದೇ ಚುನಾವಣೆಯನ್ನು ಕೇವಲವಾಗಿ ಪರಿಗಣಿಸಬಾರದು” ಎಂದು ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.

ಹರಿಯಾಣ ಚುನಾವಣೆಯಲ್ಲಿ ಬಿಜೆಪಿ ಕಾಂಗ್ರೆಸ್‌ಗಿಂತ ಮುನ್ನಡೆಸ ಸಾಧಿಸಿದ್ದು, ಎಕ್ಸಿಟ್ ಪೋಲ್ ಫಲಿತಾಂಶ ತಲೆಕೆಳಗಾಗಿದೆ. ಈ ಬೆನ್ನಲ್ಲೇ ಎಎಪಿ ಮುನ್ಸಿಪಲ್ ಕೌನ್ಸಿಲರ್‌ಗಳ ಸಭೆಯನ್ನುದ್ದೇಶಿಸಿ ಮಾತನಾಡಿದ ಅರವಿಂದ್ ಕೇಜ್ರಿವಾಲ್ ಅವರು “ಎಂದಿಗೂ ಅತಿಯಾದ ಆತ್ಮವಿಶ್ವಾಸ ಇರಬಾರದು” ಎಂದಿದ್ದಾರೆ.

“ದೆಹಲಿ ಚುನಾವಣೆ ಸಮೀಪಿಸುತ್ತಿದೆ. ಮೊದಲನೆಯದಾಗಿ ನಾವು ಯಾವುದೇ ಚುನಾವಣೆಯನ್ನು ಲಘುವಾಗಿ ಪರಿಗಣಿಸಬಾರದು. ಈಗ ಫಲಿತಾಂಶ ಏನೆಂದು ತಿಳಿದಿಲ್ಲ. ಆದರೆ ಎಂದಿಗೂ ಅತಿಯಾದ ಆತ್ಮವಿಶ್ವಾಸ ಇರಬಾರದು ಎಂಬುದು ಇಂದಿನ ಚುನಾವಣೆಯಿಂದ ಎಲ್ಲರಿಗೂ ಸಿಕ್ಕ ಪಾಠವಾಗಿದೆ” ಎಂದು ಹೇಳಿದ್ದಾರೆ.

Advertisements

ಇದನ್ನು ಓದಿದ್ದೀರಾ? ಎಎಪಿ ಹರಿಯಾಣದಲ್ಲಿ ಸ್ಪರ್ಧಿಸಿದ್ದೇ ಕಾಂಗ್ರೆಸ್ ಸೋಲಿಸಲು; ರಾಜ್ಯಸಭಾ ಸದಸ್ಯೆ ಸ್ವಾತಿ ಮಲಿವಾಲ್ ಆರೋಪ

“ಯಾವುದೇ ಚುನಾವಣೆಯನ್ನು ನಾವು ಲಘುವಾಗಿ ಪರಿಗಣಿಸಬಾರದು. ಎಲ್ಲಾ ಚುನಾವಣೆಗಳೂ ಕಠಿಣವಾಗಿರುತ್ತದೆ. ಪ್ರತಿ ಚುನಾವಣೆಯಲ್ಲಿ ಪ್ರತಿ ಕ್ಷೇತ್ರದಲ್ಲಿ ಸ್ಪರ್ಧೆಯೂ ಕಠಿಣವಾಗಿರುತ್ತದೆ. ನಾವು ಅದಕ್ಕಾಗಿ ಕಷ್ಟಪಟ್ಟು ಪ್ರಯತ್ನ ಮಾಡಬೇಕು. ನಿಮ್ಮ ಶಾಸಕರ ಜೊತೆಗೆ ಗಲಾಟೆ ಮಾಡಬೇಡಿ” ಎಂದು ಹರಿಯಾಣದಲ್ಲಿ ಕಾಂಗ್ರೆಸ್ ಒಳಜಗಳದ ಬಗ್ಗೆ ವ್ಯಂಗ್ಯವಾಡಿದ್ದಾರೆ.

ಹಾಗೆಯೇ ಜೊತೆಗೆ ಯಾವುದೇ ವಿಚಾರದಲ್ಲಿ ಜಗಳ ಮಾಡಿಕೊಳ್ಳದಂತೆ, ಸದ್ಯ ಚುನಾವಣೆಯತ್ತ ಗಮನ ಹರಿಸುವಂತೆ ತಮ್ಮ ಕಾರ್ಯಕರ್ತರಿಗೆ ತಿಳಿಸಿದ್ದಾರೆ. ಹಾಗೆಯೇ ಪರಿವಾರದ ಒಳಗೆ ಜಗಳ ಸಾಮಾನ್ಯ, ಚುನಾವಣೆಯಲ್ಲಿ ಗೆದ್ದ ಬಳಿಕ ನಾವು ಅದನ್ನೆಲ್ಲ ನೋಡಿಕೊಳ್ಳುವ ಎಂದರು.

ಹರಿಯಾಣದಲ್ಲಿ ಬಿಜೆಪಿ 49 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದರೆ ಕಾಂಗ್ರೆಸ್ 35 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

Download Eedina App Android / iOS

X