ಉಡುಪಿ | ಭತ್ತ ಕಟಾವು ಯಂತ್ರದ ಮಾಲೀಕರಿಂದ ರೈತರ ಸುಲಿಗೆ: ರೈತ ಸಂಘ ಆರೋಪ

Date:

Advertisements

ಉಡುಪಿ ಜಿಲ್ಲೆಯಾದ್ಯಂತ ಭತ್ತದ ಬೆಳೆ ಕಟಾವು ಆರಂಭವಾಗಿದ್ದು, ಭತ್ತ ಕಟಾವು ಯಂತ್ರದ ಮಾಲೀಕರು ಹಾಗೂ ದಲ್ಲಾಳಿಗಳು ಪ್ರತಿ ಘಂಟೆಗೆ ₹2400ಕ್ಕೂ ಅಧಿಕ ಹಣವನ್ನು ವಸೂಲಿ ಮಾಡಿ ರೈತರನ್ನು ಸುಲಿಗೆ ಮಾಡಲಾಗುತ್ತಿದೆ ಎಂದು ಕರ್ನಾಟಕ ಪ್ರಾಂತ ರೈತ ಸಂಘ ಆರೋಪಿಸಿದೆ.

ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಸಂಚಲನ ಸಮಿತಿ ನಿಯೋಗವು ಇಂದು ಅಪರ ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿ ಮನವಿ ನೀಡಿತು.

“ಕಷ್ಟದಲ್ಲಿ ಭತ್ತ ಬೆಳೆದ ರೈತರು ಜಿಲ್ಲೆಗಳಿಗೆ ಬರುವ ಕಟಾವು ಯಂತ್ರಗಳ ವಸೂಲಿಯಿಂದ ಸಂಕಷ್ಟಕ್ಕೀಡಾಗಿದ್ದಾರೆ. ಜಿಲ್ಲಾಧಿಕಾರಿಗಳು ನಿಗದಿತ ದರ ವಿಧಿಸಿ ಪ್ರಕಟಣೆ ಹೊರಡಿಸಬೇಕು. ಅಲ್ಲದೇ ರೈತರು, ಕಟಾವು ಯಂತ್ರದ ಮಾಲೀಕರು ಹಾಗೂ ಕೃಷಿ ಇಲಾಖೆ ಜತೆಗೆ ಜಂಟಿಸಭೆ ನಡೆಸಿ ಸಮಸ್ಯೆಗಳನ್ನು ಪರಿಹರಿಸಬೇಕು” ಎಂದು ರೈತ ಸಂಘದ ಮುಖಂಡರು ಒತ್ತಾಯಿಸಿದರು.

Advertisements

ಅಕ್ಟೋಬರ್ ತಿಂಗಳಲ್ಲಿ ಖರೀದಿ ಕೇಂದ್ರಕ್ಕೆ ಆಗ್ರಹ

“ಬಹುತೇಕ ರೈತರಿಗೆ ಅನುಕೂಲವಾಗುವ ಅಕ್ಟೋಬರ್ ತಿಂಗಳಲ್ಲೇ ಬೆಂಬಲ ಬೆಲೆ ಘೋಷಿಸಿ ಭತ್ತದ ಖರೀದಿ ಕೇಂದ್ರಗಳನ್ನು ಆರಂಭಿಸಬೇಕು” ಎಂದು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ವಿದ್ಯುತ್ ಪರಿವರ್ತಕದಿಂದ ಬೆಂಕಿ; ಆತಂಕದಲ್ಲೇ ದಿನದೂಡುತ್ತಿರುವ ಸ್ಥಳೀಯರು

ರೈತ ಸಂಘದ ನಿಯೋಗದಲ್ಲಿ ಜಿಲ್ಲಾ ಸಂಚಾಲಕ ಚಂದ್ರಶೇಖರ ವಿ, ರೈತರಾದ ಅನಿಲ್ ಬಾರ್ಕೂರು, ಗಣೇಶ್ ಪೂಜಾರಿ, ಜಲಂಧರ್, ಕಾರ್ಮಿಕ ಮುಖಂಡರಾದ ಸುರೇಶ್ ಕಲ್ಲಾಗರ, ಶಶಿಧರ ಗೊಲ್ಲ, ಕೃಷಿಕೂಲಿಕಾರ ಮುಖಂಡ ಕವಿರಾಜ್ ಎಸ್ ಮೋಹನ್ ಇದ್ದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಳ್ಳಾರಿ | ನಶಿಸಿ ಹೋಗುತ್ತಿರುವ ತೊಗಲುಗೊಂಬೆ ಪ್ರದರ್ಶನ ಉಳಿಸಿ ಬೆಳೆಸಬೇಕು: ಜೋಳದರಾಶಿ ತಿಮ್ಮಪ್ಪ

ನಶಿಸಿ ಹೋಗುತ್ತಿರುವ ತೊಗಲು ಗೊಂಬೆ ಪ್ರದರ್ಶನ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ...

ಭಟ್ಕಳ | ಮಗಳ ಅಶ್ಲೀಲ ವಿಡಿಯೊ ವೈರಲ್ ಮಾಡುವುದಾಗಿ ಬೆದರಿಕೆ: ಮೂವರ ಬಂಧನ

ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ನಗರದ ಕಿದ್ವಾಯಿ ರಸ್ತೆಯೊಂದರ ತರಕಾರಿ ವ್ಯಾಪಾರಿಯನ್ನು...

ಮಂಗಳೂರು | ಸ್ನಾತಕೋತ್ತರದತ್ತ ಮುಖಮಾಡದ ಪದವೀಧರರು: ಪ್ರವೇಶಾತಿ ಗಡುವು ವಿಸ್ತರಣೆ

ನಾಲ್ಕು ದಶಕಗಳಷ್ಟು ಹಳೆಯದಾದ ಮಂಗಳೂರು ವಿಶ್ವವಿದ್ಯಾಲಯ(MU), ನಿರೀಕ್ಷಿತ ಸಂಖ್ಯೆಯ ಪ್ರವೇಶಗಳನ್ನು ಪಡೆಯಲು...

ತುಮಕೂರು | ಅಧಿವೇಶನದಲ್ಲಿ ಆರ್‌ಎಸ್ಎಸ್ ಗೀತೆ : ಡಿಕೆಶಿ ವಿರುದ್ಧ ಕೆ. ಎನ್ ರಾಜಣ್ಣ ವಾಗ್ದಾಳಿ

ಡಿ.ಕೆ.ಶಿವಕುಮಾ‌ರ್ ಅಧಿವೇಶನದಲ್ಲಿ ಆರ್‌ಎಸ್ಎಸ್ ಗೀತೆ ಹಾಡಿದ ಬಗ್ಗೆ  ಮಾಜಿ ಸಚಿವ ಕೆ...

Download Eedina App Android / iOS

X