ʼದಿ ಕೇರಳ ಸ್ಟೋರಿʼ ಚಿತ್ರಕ್ಕೆ ತೆರಿಗೆ ವಿನಾಯಿತಿ ಘೋಷಿಸಿದ ಯೋಗಿ ಸರ್ಕಾರ

Date:

Advertisements

ವಿವಾದಿತ ಚಿತ್ರ ಪಶ್ಚಿಮ ಬಂಗಾಳದಲ್ಲಿ ನಿಷೇಧ

ತಮಿಳುನಾಡಿನಲ್ಲೂ ಚಿತ್ರದ ಪ್ರದರ್ಶನಗಳು ರದ್ದು

ವಿವಾದಾತ್ಮಕ ʼದಿ ಕೇರಳ ಸ್ಟೋರಿʼ ಚಿತ್ರಕ್ಕೆ ದೇಶಾದ್ಯಂತ ವ್ಯಾಪಕ ಟೀಕೆ ವ್ಯಕ್ತವಾಗುತ್ತಿರುವಾಗಲೇ ಮಧ್ಯಪ್ರದೇಶ ಮತ್ತು ಉತ್ತರಪ್ರದೇಶ ಸರ್ಕಾರಗಳು ಚಿತ್ರಕ್ಕೆ ಬೆಂಬಲ ಸೂಚಿಸಿ, ತೆರಿಗೆ ವಿನಾಯಿತಿ ಘೋಷಿಸಿವೆ.

Advertisements

ತಿರುಚಿದ ಕಥಾಹಂದರವನ್ನು ಹೊಂದಿರುವ ʼದಿ ಕೇರಳ ಸ್ಟೋರಿʼ ಚಿತ್ರದ ಮೂಲಕ ದೇಶವ್ಯಾಪಿಯಾಗಿ ಒಂದು ನಿರ್ದಿಷ್ಟ ಸಮುದಾಯವನ್ನು ಗುರಯಾಗಿಸಿ ದ್ವೇಷ ಹರಡುವ ಪ್ರಯತ್ನಗಳು ನಡೆಯುತ್ತಿವೆ ಎಂಬ ಆಕ್ಷೇಪಗಳು ಕೇಳಿ ಬರುತ್ತಿರುವಾಗಲೇ ಟ್ವೀಟ್‌ ಮಾಡಿರುವ ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌, “ಉತ್ತರಪ್ರದೇಶದಲ್ಲಿ ʼದಿ ಕೇರಳ ಸ್ಟೋರಿʼ ಚಿತ್ರಕ್ಕೆ ತೆರಿಗೆ ವಿನಾಯಿತಿ ನೀಡಲಾಗುವುದು” ಎಂದು ಘೋಷಿಸಿದ್ದಾರೆ. ಈ ಹಿಂದೆ ಮಧ್ಯಪ್ರದೇಶ ಸರ್ಕಾರ ಕೂಡ ವಿವಾದಿತ ಚಿತ್ರಕ್ಕೆ ತೆರಿಗೆ ವಿನಾಯಿತಿ ಘೋಷಿಸಿತ್ತು.

ಬಿಜೆಪಿ ಆಡಳಿತವಿರುವ ಎರಡು ರಾಜ್ಯಗಳಲ್ಲಿ ಈ ವಿವಾದಿತ ಚಿತ್ರಕ್ಕೆ ತೆರಿಗೆ ವಿನಾಯಿತಿ ಘೋಷಿಸಿದರೆ, ಪಶ್ಷಿಮ ಬಂಗಾಳ ಸರ್ಕಾರ ಚಿತ್ರದ ಪ್ರದರ್ಶನಕ್ಕೆ ರಾಜ್ಯದಲ್ಲಿ ನಿಷೇಧ ಹೇರಿದೆ. ತಿರುಚಿದ ಕಥೆಯನ್ನು ಹೊಂದಿರುವ ಈ ಚಿತ್ರ ಕೇರಳದ ಘನತೆಗೆ ಧಕ್ಕೆ ತರುವಂಥದ್ದು, ಈ ಚಿತ್ರ ರಾಜ್ಯದಲ್ಲಿ ಪ್ರದರ್ಶನ ಕಂಡರೆ ದ್ವೇಷ ಹರಡುವ ಸಾಧ್ಯತೆ ಇದೆ. ಶಾಂತಿಯನ್ನು ಕಾಪಾಡುವ ನಿಟ್ಟಿನಲ್ಲಿ ʼದಿ ಕೇರಳ ಸ್ಟೋರಿʼ ಪ್ರದರ್ಶನವನ್ನು ನಿಷೇಧಗೊಳಿಸಲಾಗಿದೆ” ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ಇನ್ನು ತಮಿಳುನಾಡಿನಲ್ಲೂ ʼದಿ ಕೇರಳ ಸ್ಟೋರಿʼ ಪ್ರದರ್ಶನಗಳು ರದ್ದಾಗುತ್ತಿವೆ. ರಾಜ್ಯದೆಲ್ಲೆಡೆ ಚಿತ್ರಮಂದಿರದ ಮಾಲೀಕರೇ ಸ್ವಯಂ ಪ್ರೇರಿತರಾಗಿ ಪ್ರದರ್ಶನಗಳನ್ನು ರದ್ದು ಪಡಿಸಿದ್ದಾರೆ. ಕೇರಳದಲ್ಲಂತೂ ಈ ಚಿತ್ರಕ್ಕೆ ಭಾರೀ ವಿರೋಧ ವ್ಯಕ್ತವಾಗುತ್ತಿದ್ದು, ಇದೇ ಸಂದರ್ಭದಲ್ಲಿ 2018ರ ಕೇರಳ ಪ್ರವಾಹದ ಸುತ್ತ ಮೂಡಿಬಂದಿರುವ ಮಲಯಾಳಂನ ʼ2018ʼ ಚಿತ್ರವನ್ನು ಬೆಂಬಲಿಸಿ, ಇದು ನಿಜವಾದ ಕೇರಳ ಸ್ಟೋರಿ ಎಂದು ನೆಟ್ಟಿಗರು ಹೊಸ ಅಭಿಯಾನ ಪ್ರಾರಂಭಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಪಶ್ಚಿಮ ಬಂಗಾಳದಲ್ಲಿ ʼದಿ ಕೇರಳ ಸ್ಟೋರಿʼ ಸಿನಿಮಾ ಪ್ರದರ್ಶನ ನಿಷೇಧ

ಕೇರಳದ ಯುವತಿಯರನ್ನು ಬಲವಂತವಾಗಿ ಮತಾಂತರಿಸಿ ಭಯೋತ್ಪಾದಕ ಸಂಘಟನೆ ʼಐಸಿಸ್‌ʼಗೆ ಸೇರ್ಪಡೆ ಮಾಡಲಾಗಿದೆ ಎಂಬ ಎಳೆಯ ಸುತ್ತ ʼದಿ ಕೇರಳ ಸ್ಟೋರಿʼ ಚಿತ್ರದ ಕಥೆ ಮೂಡಿಬಂದಿದೆ. ಆದರೆ, 32 ಸಾವಿರ ಯುವತಿಯರು ಮತಾಂತರಕ್ಕೊಳಗಾಗಿ ಭಯೋತ್ಪಾದನೆಗೆ ಬಲವಂತವಾಗಿ ತಳ್ಳಲ್ಪಟ್ಟಿದ್ದಾರೆ ಎಂದು ತಿರುಚಿದ ಕಥೆಯನ್ನು ಟೀಸರ್‌ನಲ್ಲಿ ತೋರಿಸಲಾಗಿತ್ತು. ಟೀಸರ್‌ ವಿವಾದಕ್ಕೆ ಸಿಲುಕಿಕೊಂಡು, ಸಿನಿಮಾ ನಿಷೇಧಿಸುವಂತೆ ಜನ ಕೋರ್ಟ್‌ ಮೆಟ್ಟಿಲೇರುತ್ತಲೇ ವರಸೆ ಬದಲಿಸಿದ್ದ ಚಿತ್ರತಂಡ, ಮತಾಂತರಕ್ಕೊಳಗಾಗಿದ್ದ ಮೂರು ಜನ ಮಹಿಳೆಯರʼ ಕಥೆ ಇದು ಎಂದು ಹೇಳಿಕೊಂಡಿತ್ತು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಟ ,ನಿರ್ದೇಶಕ ಮುರಳಿ ಮೋಹನ್ ನಿಧನ; ಓಂ, ಶ್‌ ಸೇರಿ ಹಲವು ಚಿತ್ರಗಳಿಗೆ ಸಂಭಾಷಣೆ

ಕನ್ನಡ ಚಿತ್ರರಂಗದಲ್ಲಿ ನಿರ್ದೇಶಕನಾಗಿ ಗುರುತಿಸಿಕೊಂಡಿದ್ದ ಮುರಳಿ ಮೋಹನ್ ಅವರು ನಿಧನರಾಗಿದ್ದಾರೆ. ಹಲವು...

ನಾವು ಬಾಯಿ ಮುಚ್ಚಿಕೊಂಡಿದ್ದರೆ ಮತದಾನದ ಹಕ್ಕು ಕಸಿದುಕೊಳ್ಳುವ ದಿನ ದೂರವಿಲ್ಲ: ನಟ ಕಿಶೋರ್ ಕುಮಾರ್

ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ನಡೆದಿದೆ ಎನ್ನಲಾದ ಮತಗಳ್ಳತನದ ಬಗ್ಗೆ ಲೋಕಸಭೆಯ ವಿಪಕ್ಷ...

Download Eedina App Android / iOS

X