ಬೆಳಗಾವಿ | ಕರಾಳ ದಿನಾಚರಣೆಗೆ ಅವಕಾಶವಿಲ್ಲ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್

Date:

Advertisements

ಕರ್ನಾಟಕ ರಾಜ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸುವ ಸಲುವಾಗಿ ಬೆಳಗಾವಿ ನಗರದಲ್ಲಿ ನಡೆದ ಸಭೆಯಲ್ಲಿ ಕರಾಳ ದಿನಾಚರಣೆಗೆ ಅವಕಾಶವಿಲ್ಲ ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ತಿಳಿಸಿದ್ದಾರೆ.

ದೀಪಾವಳಿ ಹಬ್ಬ ಮತ್ತು ಕರ್ನಾಟಕ ರಾಜ್ಯೋತ್ಸವ ನವೆಂಬರ್ 1ರಂದೇ ಬಂದಿರುವುದರಿಂದ ಅಂದು ಸಾಂಕೇತಿಕವಾಗಿ ಕಾರ್ಯಕ್ರಮ ನಡೆಸಿ, ನವೆಂಬರ್‌ 3ರಂದು ಮೆರವಣಿಗೆ ಆಯೋಜಿಸಬೇಕೆಂಬುದು ಕೆಲವು ಯುವಕ ಸಂಘಟನೆಗಳ ಮುಖಂಡರು ಒತ್ತಾಯವಾಗಿತ್ತು. ಆದರೆ ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಕನ್ನಡ ಹೋರಾಟಗಾರರು ಯಾವ ಕಾರಣಕ್ಕೂ ರಾಜ್ಯೋತ್ಸವದ ಮೆರವಣಿಗೆ ದಿನಾಂಕ ಮುಂದೂಡುವಂತಿಲ್ಲ. ಬೇಕಿದ್ದರೆ ಮೆರವಣಿಗೆ ಸಮಯ ವಿಸ್ತರಿಸಿ ಎಂದರು. ನಂತರ ಈ ಕುರಿತು ಚರ್ಚಿಸಿದ ನಂತರ, ನವೆಂಬರ್‌ 1ರಂದೇ ರಾಜ್ಯೋತ್ಸವದ ಭವ್ಯ ಮೆರವಣಿಗೆ ನಡೆಸುವ ನಿರ್ಧಾರವನ್ನು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಪ್ರಕಟಿಸಿದರು.

ಈ ಸುದ್ದಿ ಓದಿದ್ದೀರಾ? ಹಾಸನ | ವ್ಯಾಪಾರಕ್ಕೆಂದು ತಂದಿದ್ದ ₹1.50 ಲಕ್ಷ ಮೌಲ್ಯದ ಹಂದಿಗಳ ಕಳ್ಳತನ

Advertisements

“ದೀಪಾವಳಿ ಮತ್ತು ರಾಜ್ಯೋತ್ಸವ ಜತೆಯಾಗಿ ಬಂದಿದ್ದರಿಂದ ಅದ್ದೂರಿಯಾಗಿ ಮೆರವಣಿಗೆ ನಡೆಸಲಾಗುವುದು. ವೀಕ್ಷಣೆಗಾಗಿ ಮಹಿಳೆಯರಿಗಾಗಿ ಪ್ರತ್ಯೇಕ ಗ್ಯಾಲರಿ ಮಾಡಲಾಗುವುದು. ಬೆಳಗಾವಿಯನ್ನು ಕರ್ನಾಟಕದಲ್ಲೇ ಉಳಿಸಿಕೊಳ್ಳಲು ಹೋರಾಡಿದ ಮಹನೀಯರ ಭಾವಚಿತ್ರಗಳನ್ನು ಪ್ರದರ್ಶಿಸಲಾಗುವುದು ಹಾಗೂ ಕರ್ನಾಟಕ ರಾಜ್ಯೋತ್ಸವದಂದು ಕರಾಳ ದಿನಾಚರಣೆಗೆ ಅವಕಾಶವಿಲ್ಲ” ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಭಾರತದಲ್ಲಿ ಪ್ರಜಾಪ್ರಭುತ್ವದ ಅಧಪತನ – ಶ್ಯಾಮರಾಜ್ ಬಿರ್ತಿ

ಭಾರತದಲ್ಲಿ ಅಘೋಷಿತ ತುರ್ತುಪರಿಸ್ಥಿತಿ ಜಾರಿಯಲ್ಲಿದೆ. ಅಭಿವ್ಯಕ್ತಿ ಸ್ವಾತಂತ್ರ್ಯ ವೂ ಶ್ರೇಣಿಕೃತ ವ್ಯವಸ್ಥೆಯಲ್ಲಿದೆ....

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

Download Eedina App Android / iOS

X