ನನ್ನ ಅಧಿಕಾರಾವಧಿಯನ್ನು ಇತಿಹಾಸ ಹೇಗೆ ನಿರ್ಣಯಿಸಬಹುದು ಎಂಬ ಆತಂಕವಿದೆ: ಸಿಜೆಐ ಚಂದ್ರಚೂಡ್

Date:

Advertisements

ಸುಪ್ರೀಂ ಕೋರ್ಟ್‌ನ ಮುಖ್ಉ ನ್ಯಾಯಮೂರ್ತಿಯಾಗಿರುವ ಡಿ.ವೈ ಚಂದ್ರಚೂಡ್ ಅವರು ಇನ್ನೊಂದು ತಿಂಗಳಲ್ಲಿ ನಿವೃತ್ತರಾಗಲಿದ್ದಾರೆ. ಚುನಾವಣಾ ಬಾಂಡ್, ಒಳಮೀಸಲಾತಿ ವಿಚಾರದಲ್ಲಿ ಅವರು ನೀಡಿರುವ ತೀರ್ಪು ದೇಶದ ಗಮನ ಸೆಳೆದಿದೆ. ಅಲ್ಲದೆ, ಗಣಪತಿ ಪೂಜೆಗಾಗಿ ತಮ್ಮ ನಿವಾಸಕ್ಕೆ ಪ್ರಧಾನಿ ಮೋದಿ ಅವರನ್ನು ಕರೆಸಿಕೊಂಡಿದ್ದಕ್ಕಾಗಿ ಟೀಕೆಗೂ ಗುರಿಯಾಗಿದ್ದಾರೆ. ಇದೀಗ, ಅವರು ತಮ್ಮ ಅಧಿಕಾರಾವಧಿಯ ಬಗ್ಗೆ ಮಾತನಾಡಿದ್ದು, ಮುಂದಿನ ಇತಿಹಾಸದಲ್ಲಿ ತಮ್ಮ ಅಧಿಕಾರಾವಧಿಯನ್ನು ದೇಶವು ಯಾವ ರೀತಿ ನೋಡುಬಹುದು ಎಂಬ ಬಗ್ಗೆ ಆತಂಕ ಇರುವುದಾಗಿ ಹೇಳಿಕೊಂಡಿದ್ದಾರೆ.

ಭೂತಾನ್‌ನ ಪಾರೋದಲ್ಲಿ ಜೆಎಸ್‌ಡಬ್ಲ್ಯೂ ಕಾನೂನು ಶಾಲೆಯ ಘಟಿಕೋತ್ಸವದಲ್ಲಿ ಭಾಗಿಯಾಗಿ ಅವರು ಮಾತನಾಡಿದ್ದಾರೆ. “ಮುಖ್ಯ ನ್ಯಾಯಮೂರ್ತಿಯಾಗಿ ನನ್ನ ದೇಶಕ್ಕೆ ಎರಡು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದೇನೆ. ನನ್ನ ಅಧಿಕಾರಾವಧಿಯು ನವೆಂಬರ್‌ನಲ್ಲಿ ಅಂತ್ಯಗೊಳ್ಳಲಿದೆ. ಭಾರತದಲ್ಲಿ ನಾನು ಮಾಡಬೇಕಾದ ಎಲ್ಲವನ್ನೂ ನಾನು ಸಾಧಿಸಿದ್ದೇನೆಯೇ? ನ್ಯಾಯಾಧೀಶರು ಮತ್ತು ಕಾನೂನು ವೃತ್ತಿಪರರನ್ನು ಒಳಗೊಂಡ ಭವಿಷ್ಯದ ಪೀಳಿಗೆಗೆ ನಾನು ಯಾವ ಪರಂಪರೆ ಬಿಟ್ಟು ಹೋಗುತ್ತಿರುವೆ ಎಂಬ ಬಗ್ಗೆ ಚಿಂತಿಸುತ್ತಿದ್ದೇನೆ” ಎಂದಿದ್ದಾರೆ.

“ಭಾರತಕ್ಕಾಗಿ ಅತ್ಯಂತ ಸಮರ್ಪಣಾಭಾವದಿಂದ ಸೇವೆ ಸಲ್ಲಿಸಿದ್ದೇನೆ ಎಂಬುದು ನನಗೆ ತೃಪ್ತಿ ನೀಡಿದೆ. ಅದರೊಂದಿಗೆ ಸಮಾಧಾನ ಹುಡುಕಿಕೊಳ್ಳುತ್ತಿದ್ದೇನೆ. ಆದರೂ, ನನ್ನಲ್ಲಿ ಹುಟ್ಟುತ್ತಿರುವ ಹಲವು ಪ್ರಶ್ನೆಗಳಿಗೆ ಉತ್ತರಗಳು ನನ್ನ ನಿಯಂತ್ರಣದಲ್ಲಿಲ್ಲ. ಈ ಕೆಲವು ಪ್ರಶ್ನೆಗಳಿಗೆ ನಾನು ಎಂದಿಗೂ ಉತ್ತರಗಳನ್ನು ಕಂಡುಕೊಳ್ಳುವುದಿಲ್ಲ” ಎಂದಿದ್ದಾರೆ.

Advertisements

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

Download Eedina App Android / iOS

X