ಬಾಗಲಕೋಟೆ | ಬಿಡಿಸಿಸಿ ಬ್ಯಾಂಕ್ ಯೋಜನೆ ಸಮರ್ಪಕವಾಗಿ ಬಳಕೆಯಾಗಬೇಕು: ಅಜಯಕುಮಾರ ಸರನಾಯಕ

Date:

Advertisements

ಬಾಗಲಕೋಟೆ ಭಾಗದ ರೈತರ ಬಹುದಿನದ ಬೇಡಿಕೆಯಾಗಿದ್ದ ಬ್ಯಾಂಕ್‌ನ ಸ್ವಂತ ಕಟ್ಟಡದ ಭಾಗ್ಯ ಇಂದು ನಿಮಗೆಲ್ಲರಿಗೂ ದೊರೆತಿದ್ದು ಹೆಮ್ಮೆಯ ಸಂಗತಿ. ಬಿಡಿಸಿಸಿ ಬ್ಯಾಂಕ್ ಯೋಜನೆಗಳನ್ನು ರೈತರು, ವ್ಯಾಪಾರಸ್ಥರು ಹಾಗೂ ಸಂಘ ಸಂಸ್ಥೆಗಳು ಸಮರ್ಪಕವಾಗಿ ಬಳಸಿಕೊಂಡು ಆರ್ಥಿಕವಾಗಿ ಸದೃಢರಾಗಬೇಕು ಎಂದು ಬಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಅಜಯಕುಮಾರ ಸರನಾಯಕ ಹೇಳಿದರು.

ಬಾಗಲಕೋಟೆ ತಾಲೂಕಿನ ಸಮೀಪದ ರಾಂಪುರ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದ ಪಕ್ಕದಲ್ಲಿ ನೂತನವಾಗಿ ನಿರ್ಮಿಸಿರುವ ಬಿಡಿಸಿಸಿ ಬ್ಯಾಂಕ್ ಶಾಖೆಯ ಕಟ್ಟಡ ಉದ್ಘಾಟಿಸಿ ಮಾತನಾಡಿದರು.

“ಮುಂದಿನ ದಿನಗಳಲ್ಲಿ ಬಿಡಿಸಿಸಿ ಬ್ಯಾಂಕಿನಿಂದ ರೈತರಿಗೆ ನಾನಾ ಯೋಜನೆಗಳನ್ನು ಜಾರಿಗೆ ತರಲಾಗುತ್ತಿದೆ” ಎಂದು ಹೇಳಿದರು.

Advertisements

ಶಾಸಕ ಎಚ್ ವೈ ಮೇಟಿ ಮಾತನಾಡಿ, “ಈ ಭಾಗದ ಪ್ರಮುಖ ಗ್ರಾಮಗಳಾದ ಸುತಗುಂಡಾರ, ನಾಯನೇಗಲಿ, ಮಂಕಣಿ, ತಿಮ್ಮಾಪುರ, ಬಿಲ್ ಕೆಗೂರ, ಹೊಸೂರ, ರಾಂಪುರ, ಆಚನೂರ ಸೇರಿದಂತೆ ನಾನಾ ಗ್ರಾಮಗಳಿಗೆ ಕೊಂಡಿಯಾಗಿ ಬ್ಯಾಂಕ್ ಕಾರ್ಯ ನಿರ್ವಹಿಸುತ್ತಿದೆ. ರೈತರು ಬ್ಯಾಂಕಿನ ಸೌಲಭ್ಯಗಳನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಬಾಗಲಕೋಟೆ | ಅನ್ಯಭಾಷೆ ಪ್ರೀತಿಸಿ, ಕನ್ನಡ ಭಾಷೆ ಉಸಿರಾಗಿರಬೇಕು: ಶಾಸಕ ವಿಜಯಾನಂದ ಕಾಶಪ್ಪನವರ

ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಬಸವರಾಜ್ ಮೇಟಿ, ಕಾಂಗ್ರೆಸ್ ಮುಖಂಡ ಸಂಗಮೇಶ ದೊಡ್ಡಮನಿ, ರಾಂಪುರ ಪಿಕೆಪಿಎಸ್ ಅಧ್ಯಕ್ಷ ಬಲರಾಮ ಪವಾರ, ಜಟ್ಟಪ್ಪ ಮಾದಾಪುರ, ಶಾಖಾ ವ್ಯವಸ್ಥಾಪಕ ಮಾಂತೇಶ ಕಟಗಿ, ಮುತ್ತಪ್ಪ ಹುಗ್ಗಿ ಮಲ್ಲು ದ್ಯಾವಣ್ಣನವರ್, ಮುರುಗೇಶ ಕಡ್ಡಿಮಟ್ಟಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X