ಬಿಹಾರ | ಕೆಲಸದ ಬಾಕಿ ಕೇಳಿದ ದಲಿತ ವ್ಯಕ್ತಿಯ ಮೇಲೆ ಮೂತ್ರ ವಿಸರ್ಜಿಸಿ ಹಲ್ಲೆ

Date:

Advertisements

ತಾನು ಮಾಡಿದ ಕೆಲಸಕ್ಕೆ ಬಾಕಿಯಿರುವ ಸಂಬಳ ಕೇಳಿದ ಕಾರಣಕ್ಕೆ ದಲಿತ ಸಮುದಾಯದ ವ್ಯಕ್ತಿಯೊಬ್ಬರಿಗೆ ಅಮಾನುಷವಾಗಿ ಹಲ್ಲೆ ನಡೆಸಿ ಮೂತ್ರ ವಿಸರ್ಜನೆ ಮಾಡಿರುವ ಕೃತ್ಯ ಬಿಹಾರದ ಮುಜಾಫರ್‌ಪುರದಲ್ಲಿ ನಡೆದಿದೆ.

ದಲಿತ ವ್ಯಕ್ತಿಯೊಬ್ಬರು ಕೋಳಿ ಫಾರಂನಲ್ಲಿ ತಾನು ಮಾಡಿದ ಕೆಲಸಕ್ಕೆ ಬಾಕಿಯಿರುವ ಸಂಬಳವನ್ನು ಕೇಳಿದ್ದಕ್ಕಾಗಿ ಮಾಲೀಕ ತಂದೆ, ಆತನ ಮಗ ಸೇರಿ ಹಲ್ಲೆ ಮಾಡಿ ಮುಖಕ್ಕೆ ಉಗಿದು ಮೂತ್ರ ವಿಸರ್ಜಸಿ ಅಮಾನವೀಯತೆ ಮೆರೆದಿದ್ದಾರೆ.

ಈ ಬಗ್ಗೆ ಸಂತ್ರಸ್ತ ಕಾರ್ಮಿಕ ರಿಂಕು ಮಾಂಝಿ ಎಂಬುವವರು ಅಕ್ಟೋಬರ್ 4 ರಂದು ಪೊಲೀಸರಿಗೆ ದೂರು ನೀಡಿದ್ದಾರೆ.

Advertisements

ರಿಂಕು ಮಾಂಝಿ ಅವರು ತಾನು ಮಾಡಿದ ಕೆಲಸಕ್ಕೆ ವೇತನ ಕೇಳಿದಾಗ ಸಿಟ್ಟಿಗೆದ್ದ ಕೋಳಿ ಫಾರಂ ಮಾಲೀಕ ರಮೇಶ್ ಪಟೇಲ್, ಆತನ ಸಹೋದರ ಅರುಣ್ ಪಟೇಲ್ ಮತ್ತು ಆತನ ಮಗ ಗೌರವ್ ಕುಮಾರ್ ಸೇರಿಕೊಂಡು ರಿಂಕು ಮಾಂಝಿಗೆ ಮನಬಂದಂತೆ ಥಳಿಸಿದ್ದಾರೆ. ರಮೇಶ್ ಪಟೇಲ್ ಮತ್ತು ಆತನ ಮಗ ಗೌರವ್ ಕುಮಾರ್ ಸಂತ್ರಸ್ತನ ಮೇಲೆ ಮೂತ್ರ ವಿಸರ್ಜಸಿದ್ದಲ್ಲದೇ, ಮುಖದ ಮೇಲೆ ಉಗಿದು ವಿಕೃತಿ ಮೆರೆದಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಜಮ್ಮು- ಕಾಶ್ಮೀರ ; ಚುನಾಯಿತ ಸರ್ಕಾರ ಬಂದರೂ ಉಪರಾಜ್ಯಪಾಲರೇ ಸರ್ವಾಧಿಕಾರಿ!

ಸಂತ್ರಸ್ತ ರಿಂಕು ಮಾಂಝಿ ಅವರು ಅಕ್ಟೋಬರ್ 8 ರಂದು ಸಲ್ಲಿಸಿದ ದೂರಿನ ಜೊತೆಗೆ ಆರೋಪಿಯ ವಿರುದ್ಧ ಸಾಕ್ಷ್ಯವಾಗಿ ಕೃತ್ಯಕ್ಕೆ ಸಂಬಂಧಿಸಿದಂತೆ ವಿಡಿಯೋವನ್ನು ಪೊಲೀಸರೊಂದಿಗೆ ಹಂಚಿಕೊಂಡಿದ್ದಾರೆ. ಈ ಬಗ್ಗೆ ದೂರನ್ನು ಸ್ವೀಕರಿಸಿದ ನಂತರ, ಆರೋಪಿಗಳ ವಿರುದ್ಧ ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್) ಮತ್ತು ಎಸ್‌ಸಿ/ಎಸ್‌ಟಿ ಕಾಯ್ದೆಯ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಪೊಲೀಸರು ಪ್ರಕರಣ ದಾಖಲಿಕೊಂಡು ತನಿಖೆ ಪ್ರಾರಂಭಿಸಿದ್ದಾರೆ.

ಘಟನೆಯ ಕುರಿತು ಮಾತನಾಡಿದ ಮುಜಾಫರ್‌ಪುರದ ಪೊಲೀಸ್ ವರಿಷ್ಠಾಧಿಕಾರಿ ವಿಧಾ ಸಾಗರ್, ‘ಕರ್ಪೂರ್ ಉತ್ತರದಲ್ಲಿ ವಾಸಿಸುವ ರಮೇಶ್ ಪಟೇಲ್ ಎಂಬಾತ ದಿನಗೂಲಿ ಕಾರ್ಮಿಕರನ್ನು ಜಾತಿ ನಿಂದನೆ ಮಾತುಗಳಿಂದ ನಿಂದಿಸಿದ್ದಾರೆ. ರಿಂಕು ಎಂಬುವವರು ರಮೇಶ್ ಅವರ ಸ್ಥಳದಲ್ಲಿ ಕೆಲಸ ಮಾಡಿದ್ದರು. ಅವರು ತಮ್ಮ ವೇತನವನ್ನು ಕೇಳಿದಾಗ ಈ ಘಟನೆ ನಡೆದಿದೆ. ಪ್ರಕರಣ ದಾಖಲಿಸಿಕೊಂಡು ಕ್ರಮ ಕೈಗೊಳ್ಳಲಾಗುತ್ತಿದೆ’ ಎಂದು ತಿಳಿಸಿದ್ದಾರೆ.

ಇದಕ್ಕೂ ಮೊದಲು, ಮುಜಾಫರ್‌ಪುರದಲ್ಲಿ ನಡೆದ ಮತ್ತೊಂದು ಪ್ರಕರಣದಲ್ಲಿ, ಮೋಟಾರ್‌ಸೈಕಲ್ ಕದ್ದಿದ್ದಾರೆ ಎಂಬ ಆರೋಪಿಸಿ ಇಬ್ಬರು ದಲಿತರನ್ನು ಕೆಲವರು ಹೀನಾಯವಾಗಿ ಥಳಿಸಿ ಮೂತ್ರ ವಿಸರ್ಜಸಿದ್ದರು. ಸಂತ್ರಸ್ತರು ಗ್ರಾಮೀಣ ಜಾತ್ರೆಗೆ ತೆರಳುತ್ತಿದ್ದಾಗ ಈ ಘಟನೆ ನಡೆದಿತ್ತು. ಘಟನೆಯ ನಂತರ ಪೊಲೀಸರು ಆರೋಪಿಗಳ ವಿರುದ್ಧ ಎಫ್ಐಆರ್ ದಾಖಲಿಸಿಕೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X