ಚಿತ್ರದುರ್ಗ: ಮಳೆಗೆ ಕೊಚ್ಚಿ ಹೋದ 3 ಚೆಕ್‌ ಡ್ಯಾಂಗಳು

Date:

Advertisements

ವಾರದಿಂದ ಸುರಿದ ಸತತ ಮಳೆಗೆ ಚಿತ್ರದುರ್ಗದ ನಾಯಕನಹಟ್ಟಿ ಪಟ್ಟಣ ಸುತ್ತಲಿನ ಪ್ರದೇಶದಲ್ಲಿರುವ 2.5 ಕೋಟಿ ರೂ. ವೆಚ್ಚದ ಮೂರು ಚೆಕ್‌ ಡ್ಯಾಂಗಳು ಕೊಚ್ಚಿ ಹೋಗಿವೆ.ನಾಯಕನಹಟ್ಟಿ ಪಟ್ಟಣ ಸಮೀಪದ ಪಿ.ಎಂ. ತಿಪ್ಪೇಸ್ವಾಮಿ ಅವರ ತೋಟದ ಬಳಿಯಿರುವ ಚೆಕ್‌ ಡ್ಯಾಂ, ಮಾಳಪ್ಪನಹಟ್ಟಿ ಮತ್ತು ಎನ್‌. ಮಹಾದೇವಪುರ ಗ್ರಾಮ ಸಮೀಪವಿರುವ 2 ಚೆಕ್‌ ಡ್ಯಾಂಗಳು ಸಂಪೂರ್ಣ ಹಾಳಾಗಿವೆ.

ಈ ಎಲ್ಲ ಚೆಕ್‌ ಡ್ಯಾಂಗಳನ್ನು ದೊಡ್ಡ ಹಳ್ಳಕ್ಕೆ ಅಡ್ಡಲಾಗಿ ನಿರ್ಮಿಸಲಾಗಿತ್ತು. ನಾಯಕನಹಟ್ಟಿ ಬಳಿ ಇರುವ ಎರಡು ಚೆಕ್‌ಡ್ಯಾಂಗಳು ತಲಾ ಒಂದು ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡಿವೆ. ಇದೇ ರೀತಿಯಲ್ಲಿ ಎನ್‌. ಮಹಾದೇವಪುರ ಚೆಕ್‌ ಡ್ಯಾಂ 50 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾಗಿದೆ. ಒಟ್ಟಾರೆ 2.5 ಕೋಟಿ ವೆಚ್ಚದ ಚೆಕ್‌ಡ್ಯಾಂಗಳು ನೀರು ಸಂಗ್ರಹಿಸುವುದರಲ್ಲಿ ವಿಫಲವಾಗಿವೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಜಾತಿ ಜನಗಣತಿ ಎತ್ತುವ ಹಲವು ಪ್ರಶ್ನೆಗಳು

Advertisements

ನಾಯಕನಹಟ್ಟಿಯಲ್ಲಿ ಈ ಬಾರಿ 25 ವರ್ಷದ ಇತಿಹಾಸದಲ್ಲಿ ಅತಿ ಹೆಚ್ಚು ಮಳೆಯಾಗಿದೆ. ಇಲ್ಲಿನ ಸರಾಸರಿ ವಾಡಿಕೆ ಮಳೆ 415.9 ಮಿಮೀ ಆಗಿದೆ. ಆದರೆ ಇಲ್ಲಿಯವರೆಗೆ 984.4 ಮಿಮೀ ಮಳೆಯಾಗಿದೆ. ಇದು 25 ವರ್ಷದ ಅತ್ಯಧಿಕ ಮಳೆಯಾಗಿದೆ. ಅ. 5ರಂದು 129.6 ಮಿಮೀ ಮಳೆಯಾಗಿದ್ದು ಇದು ಒಂದೇ ದಿನ ಸುರಿದ ಸರ್ವಕಾಲಿನ ದಾಖಲೆ ಮಳೆಯಾಗಿದೆ. ಹೀಗಾಗಿ ನಿರೀಕ್ಷೆ ಹಾಗೂ ಸರಾಸರಿಗಿಂತ ಹೆಚ್ಚು ಮಳೆ ಸುರಿದಿರುವುದು ಚೆಕ್‌ಡ್ಯಾಂಗಳು ಕೊಚ್ಚಿರುವುದಕ್ಕೆ ಪ್ರಮುಖ ಕಾರಣವಾಗಿದೆ.

ಮೂರು ಚೆಕ್‌ ಡ್ಯಾಂಗಳು ರಿವೀಟ್‌ಮೆಂಟ್‌ ಹಾಳಾಗಿರುವುದು ಗಮನಕ್ಕೆ ಬಂದಿದೆ. ಗುತ್ತಿಗೆದಾರರಿಗೆ ಇದನ್ನು ಸರಿಪಡಿಸಲು ಸೂಚಿಸಲಾಗಿದೆ. ತೇವಾಂಶ ಹೆಚ್ಚಾಗಿರುವುದರಿಂದ ವಾಹನಗಳ ಓಡಾಟ ಸಾಧ್ಯವಿಲ್ಲ. ಮಳೆಯ ಪ್ರಮಾಣ ಸ್ವಲ್ಪ ಕಡಿಮೆಯಾದ ನಂತರ ದುರಸ್ತಿ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ವಿದ್ಯಾರ್ಥಿನಿ ಕೊಲೆ, ಬೆಂಕಿ ಹಚ್ಚಿ ಸುಟ್ಟ ಅಪರಾಧಿಗಳಿಗೆ ಗಲ್ಲುಶಿಕ್ಷೆ ವಿಧಿಸಲು ಎಸ್ ಎಫ್ ಐ ಆಗ್ರಹ

ಚಿತ್ರದುರ್ಗದ ಹೊರವಲಯದಲ್ಲಿರುವ ರಾಷ್ಟ್ರೀಯ ಹೆದ್ದಾರಿ ಬಳಿ ಹಿರಿಯೂರು ತಾಲೂಕಿನ 19 ವರ್ಷದ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ಗದಗ | ಹಾಸ್ಟೆಲ್‌ ವಿದ್ಯಾರ್ಥಿನಿ ಕೊಲೆ ಪ್ರಕರಣ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಎಸ್‌ಎಫ್‌ಐ ಆಗ್ರಹ

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕೋವೆರ ಹಟ್ಟಿಯ ವರ್ಷಿತಾ ಎಂಬ ಪದವಿ...

BREAKING NEWS | ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್

ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್ ಬಂದಿದೆ ಎಂದು...

Download Eedina App Android / iOS

X