ಶಿವಮೊಗ್ಗ | ಅರಣ್ಯ ಭೂಮಿ ಉಳಿಸಿ, ಖಾಸಗಿ ವ್ಯಕ್ತಿಗಳ ಹುನ್ನಾರಕ್ಕೆ ಕಡಿವಾಣ ಹಾಕುವಂತೆ ಆಗ್ರಹ

Date:

Advertisements

ಸಾಗರ ತಾಲೂಕಿನ ಬರದವಳ್ಳಿಯ ಸರ್ವೆ ನಂ. 275ರಲ್ಲಿ 93 ಎಕರೆ ಮತ್ತು ಸರ್ವೆ ನಂ. 285ರಲ್ಲಿ 45 ಎಕರೆ ಅರಣ್ಯ ಭೂಮಿ ಉಳಿಸಿ, ಖಾಸಗಿ ವ್ಯಕ್ತಿಗಳ ಹುನ್ನಾರಕ್ಕೆ ಕಡಿವಾಣ ಹಾಕುವಂತೆ ಆಗ್ರಹಿಸಿ ಬರದವಳ್ಳಿ ಗ್ರಾಮಸ್ಥರಿಂದ ಉಪವಿಭಾಗಾಧಿಕಾರಿ ಕಚೇರಿವರೆಗೆ ಪಾದಯಾತ್ರೆ ತೆರಳಿ ಮನವಿ ಸಲ್ಲಿಸಿದರು.

ತಾಲೂಕು ಪಂಚಾಯತ್ ಮಾಜಿ ಉಪಾಧ್ಯಕ್ಷ ಹಾಗೂ ಬರದವಳ್ಳಿ ಗ್ರಾಮ ಸುಧಾರಣಾ ಸಮಿತಿಯ ಅಶೋಕ್ ಮಾತನಾಡಿ, “ಬರದವಳ್ಳಿ ಕಂದಾಯ ಅಧಿಕಾರಿಗಳು ಮತ್ತು ಅರಣ್ಯ ಇಲಾಖೆಯವರು ಸರ್ಕಾರಿ ಜಾಗ ಉಳಿಸಲು ಮುಂದಾಗದಿರುವ ಕಾರಣ ಬರದವಳ್ಳಿ ಗ್ರಾಮಸ್ಥರು‌ ಪಾದಯಾತ್ರೆಯ ಮೂಲಕ ಸರ್ಕಾರಿ ಇಲಾಖೆಯ ಅಧಿಕಾರಿಗಳನ್ನು ಜಾಗೃತಗೊಳಿಸಲು ಹೋರಾಟ ಮಾಡುತ್ತಿದ್ದೇವೆ” ಎಂದು ಎಚ್ಚರಿಸಿದರು.

ಈ ಸುದ್ದಿ ಓದಿದ್ದೀರಾ? ಶಿವಮೊಗ್ಗ | ಕೋಮು ಉದ್ವಿಗ್ನತೆ ತಡೆಗೆ ಕಾನೂನು ಸುವ್ಯವಸ್ಥೆ; ಎಸ್‌ಪಿ ಮಿಥುನ್ ಕುಮಾರ್‌ಗೆ ಸನ್ಮಾನ

Advertisements

“ಸೊರಬ ವಿಧಾನಸಭಾ ಕ್ಷೇತ್ರ ಸಾಗರ ತಾಲೂಕಿನ ಬರದವಳ್ಳಿಯ ಸರ್ವೆ ನಂ. 275 ರಲ್ಲಿ 93 ಎಕರೆ ಮತ್ತು 285 ರಲ್ಲಿ 45 ಎಕರೆ ಅರಣ್ಯ ಜಾಗವನ್ನು ಗ್ರಾಮದ ದ್ಯಾವಪ್ಪ ಮತ್ತು ಸದಾಶಿವ ಸೇರಿದಂತೆ ಇತರರು ತಮಗೆ ಖಾತೆ ಮಾಡಿಸಿಕೊಳ್ಳಲು ಹುನ್ನಾರ ನಡೆಸಿ ಘನ ನ್ಯಾಯಾಲಯದಲ್ಲಿ ಕಂದಾಯ ಇಲಾಖೆಯ ಅಧಿಕಾರಿಗಳ ವಿರುದ್ಧವೇ ಪ್ರಕರಣ ದಾಖಲಿಸಿದ್ದಾರೆ. ಈ ಹಿನ್ನೆಲೆಯಲ್ಲಿ ತಹಶೀಲ್ದಾರ್ ಸೂಕ್ತ ದಾಖಲಾತಿಗಳನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿ ಸರ್ಕಾರಿ ಜಾಗ ಉಳಿಸಿಕೊಳ್ಳಲು ಪ್ರಾಮಾಣಿಕ ಪ್ರಯತ್ನ ಮಾಡಬೇಕು” ಎಂದು ಆಗ್ರಹಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X