ಜಪಾನಿನ ನಿಹಾನ್ ಹಿಡಾಂಕ್ಯೊ ಸಂಸ್ಥೆಗೆ 2024ರ ನೊಬೆಲ್ ಶಾಂತಿ ಪ್ರಶಸ್ತಿ

Date:

Advertisements

2024ನೇ ಸಾಲಿನ ನೊಬೆಲ್‌ ಶಾಂತಿ ಪ್ರಶಸ್ತಿಯನ್ನು ಜಪಾನಿನ ನಿಹಾನ್ ಹಿಡಾಂಕ್ಯೊ ಸಂಸ್ಥೆಗೆ ನೀಡಲಾಗಿದೆ. ಜಗತ್ತಿನಲ್ಲಿ ಅಣ್ವಸ್ತ್ರ ಯುದ್ಧಗಳನ್ನು ತಡೆಯಲು ಹಾಗೂ ಹಿರೋಶಿಮಾ ಮತ್ತು ನಾಗಸಾಕಿ ಅಣ್ವಸ್ತ್ರ ದಾಳಿಯಿಂದ ಬದುಕುಳಿದವರ ಏಳಿಗೆಗಾಗಿ ಶ್ರಮಿಸಿದ ಕಾರಣಕ್ಕಾಗಿ ಪ್ರಶಸ್ತಿ ನೀಡಲಾಗುತ್ತಿದೆ ಎಂದು ನೊಬೆಲ್ ಆಯ್ಕೆ ಸಮಿತಿ ತಿಳಿಸಿದೆ.

ನಿಹಾನ್ ಹಿಡಾಂಕ್ಯೊ ಸಂಸ್ಥೆ ಹಿಬಾಕುಶಾ ಹೆಸರಿನಲ್ಲಿ ಹಿರೋಶಿಮಾ ಮತ್ತು ನಾಗಸಾಕಿ ಅಣ್ವಸ್ತ್ರ ದಾಳಿಯಿಂದ ಬದುಕುಳಿದವರ ಏಳಿಗೆಗಾಗಿ ಅಪಾರವಾಗಿ ಶ್ರಮಿಸುತ್ತಿದೆ. ಜಗತ್ತಿನಲ್ಲಿ ಅಣ್ವಸ್ತ್ರಗಳನ್ನು ತಡೆಯಲು ಕೂಡ ಅಪಾರವಾಗಿ ಶ್ರಮಿಸಿದೆ. ಪರಮಾಣು ಅಸ್ತ್ರಗಳನ್ನು ಮತ್ತೆ ಬಳಸಬಾರದೆಂದು ವಿಶ್ವದಾದ್ಯಂತ ಹಲವು ಕಾರ್ಯಾಗಾರಗಳನ್ನು ಹಮ್ಮಿಕೊಂಡು ಬರುತ್ತಿದೆ. ಈ ಕಾರಣಕ್ಕಾಗಿ ನೊಬೆಲ್ ಪ್ರಶಸ್ತಿ ನೀಡಲಾಗುತ್ತಿದೆ ಎಂದು ನಾರ್ವೆಯ ನೊಬೆಲ್ ಸಮಿತಿ ತಿಳಿಸದೆ.

ಈ ಸುದ್ದಿ ಓದಿದ್ದೀರಾ? ಮೂವರು ವಿಜ್ಞಾನಿಗಳಿಗೆ ರಾಸಾಯನಶಾಸ್ತ್ರ ನೊಬೆಲ್ ಪ್ರಶಸ್ತಿ ಪ್ರಕಟ

Advertisements

ಹಿರೋಶಿಮಾ ಮತ್ತು ನಾಗಸಾಕಿಯ ಅಣ್ವಸ್ತ್ರ ದಾಳಿಯಲ್ಲಿ ಬದುಕುಳಿದವರ ಗೌರವಾರ್ಥ ಸಲ್ಲಿಸಿದ ನೊಬೆಲ್ ಸಮಿತಿ, ಯುದ್ಧದಲ್ಲಿ ಗಾಯಗೊಂಡು ನೋವುಗಳನ್ನು ಅನುಭವಿಸಿ ಪುನಃ ವಿಶ್ವದಲ್ಲಿ ಶಾಂತಿ ಸಾರುತ್ತಿರುವ ಕಾರಣಕ್ಕಾಗಿ ನಿಹಾನ್ ಹಿಡಾಂಕ್ಯೊ ಸಂಸ್ಥೆಗೆ ನೊಬೆಲ್ ಪ್ರಶಸ್ತಿ ನೀಡಲಾಗುತ್ತಿದೆ ಎಂದು ನಾರ್ವೆಯ ನೊಬೆಲ್ ಸಮಿತಿ ತಿಳಿಸಿದೆ. ನಿಹಾನ್ ಹಿಡಾಂಕ್ಯೊ ಸಂಸ್ಥೆಯ ನಾಯಕರು ಮತ್ತು ಸದಸ್ಯರೆಲ್ಲರೂ ಅಣ್ವಸ್ತ್ರ ದಾಳಿಯಲ್ಲಿ ಬದುಕುಳಿದವರಾಗಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೋದಿ-ಝೆಲೆನ್ಸ್ಕಿ ಫೋನ್ ಮಾತುಕತೆ: ರಷ್ಯಾ ತೈಲ ಖರೀದಿ ಕುರಿತು ಭಾರತದ ಮೇಲೆ ಉಕ್ರೇನ್‌ ಒತ್ತಡ

ರಷ್ಯಾ ಜೊತೆ ಸಂಘರ್ಷದಲ್ಲಿರುವ ಉಕ್ರೇನ್‌ನ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರು ಪ್ರಧಾನಿ...

ಗಾಝಾದಲ್ಲಿ ಹತ್ಯೆಯಾದ ಯುವ ಪತ್ರಕರ್ತರೊಬ್ಬರ ಭಿನ್ನ ಉಯಿಲು !

ನಾನು ಸಾಯುವುದಾದರೆ, ನನ್ನ ಸಿದ್ಧಾಂತಗಳ ಮೇಲೆ ದೃಢವಾಗಿರುವೆ. ದೇವರ ಮುಂದೆ ನಾನು...

ಗಾಝಾದಲ್ಲಿ ಇಸ್ರೇಲ್ ದಾಳಿ: ಐವರು ಅಲ್‌ಜಝೀರಾ ಪತ್ರಕರ್ತರು ಹತ

ಭಾನುವಾರ ಗಾಝಾ ನಗರದಲ್ಲಿ ಅಲ್‌ಜಝೀರಾ ಟೆಂಟ್ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ...

ಟ್ರಂಪ್‌ ಕೊಟ್ಟ ಏಟಿಗೆ ಚೀನಾದತ್ತ ತಿರುಗಿದ ಪ್ರಧಾನಿ; ಚೀನೀ ಭಜನೆ ಮಾಡುತ್ತಿದೆ ಮೋದಿ ಭಕ್ತ ಗಣ

ಅಮೆರಿಕ ಭಾರೀ ಮೊತ್ತದ ತೆರಿಗೆ ಹೇರಿದ ಬೆನ್ನಲ್ಲೇ, ಭಾರತವು ಚೀನಾದೊಂದಿಗೆ ಆರ್ಥಿಕ...

Download Eedina App Android / iOS

X