ಮಂಗಳೂರು | ಅ.12ರಂದು ಎಸ್‌ಐಓ ದಕ್ಷಿಣ ಕನ್ನಡ ಜಿಲ್ಲಾ ಸಮ್ಮೇಳನ

Date:

Advertisements

ವಿದ್ಯಾರ್ಥಿ ಸಂಘಟನೆಯಾದ ಸ್ಟೂಡೆಂಟ್ಸ್ ಇಸ್ಲಾಮಿಕ್ ಆರ್ಗನೈಸೇಶನ್‌ ಆಫ್ ಇಂಡಿಯಾ (ಎಸ್‌ಐಓ) ದಕ್ಷಿಣ ಕನ್ನಡ ಜಿಲ್ಲಾ ಘಟಕದ ವತಿಯಿಂದ ‘ಬದಲಾವಣೆಯ ಚಿಂತನೆಯನ್ನು ಮರು ಪರಿಶೀಲಿಸೋಣ’ ಎಂಬ ಧ್ಯೇಯ ವಾಕ್ಯದೊಂದಿಗೆ ಅ.12(ನಾಳೆ)ರ ಶನಿವಾರದಂದು ದಕ್ಷಿಣ ಕನ್ನಡ ಜಿಲ್ಲಾ ಸಮ್ಮೇಳನವನ್ನು ಆಯೋಜಿಸಲಾಗಿದೆ ಎಂದು ಜಿಲ್ಲಾಧ್ಯಕ್ಷ ಆಸಿಫ್ ಡಿ.ಕೆ. ತಿಳಿಸಿದ್ದಾರೆ.

ಉಳ್ಳಾಲ ಪ್ರೆಸ್‌ಕ್ಲಬ್‌ನಲ್ಲಿ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲಾ ಸಮ್ಮೇಳನವು ಅ.12ರಂದು ಸಂಜೆ 4ಕ್ಕೆ ತೊಕ್ಕೊಟ್ಟು ಯೂನಿಟಿ ಹಾಲ್ ಬಳಿಯಲ್ಲಿರುವ ಮೈದಾನದಲ್ಲಿ ನಡೆಯಲಿದೆ ಎಂದು ಮಾಹಿತಿ ನೀಡಿದರು.

ಎಸ್‌ಐಓ

ಸಮಾವೇಶವನ್ನು ಜಮಾಅತೆ ಇಸ್ಲಾಮೀ ಹಿಂದ್ ಕೇರಳ ಉಪಾಧ್ಯಕ್ಷ ವಿ.ಟಿ.ಅಬ್ದುಲ್ಲಾ ಕೋಯ ತಂಙಳ್ ಉದ್ಘಾಟಿಸಲಿದ್ದಾರೆ. ಸ್ಟೂಡೆಂಟ್ಸ್ ಇಸ್ಲಾಮಿಕ್ ಆರ್ಗನೈಝೇಶನ್ ಆಫ್ ಇಂಡಿಯಾ ರಾಷ್ಟ್ರೀಯ ಅಧ್ಯಕ್ಷ ರಮೀಝ್ ಇ.ಕೆ. ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ತಿಳಿಸಿದರು.

Advertisements

ಇದನ್ನು ಓದಿದ್ದೀರಾ? ಮಂಗಳೂರು | ಮುಮ್ತಾಝ್ ಅಲಿ ಪ್ರಕರಣ: ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಲು ಹಕ್ಕೊತ್ತಾಯ ಸಭೆ

ಅತಿಥಿಗಳಾಗಿ ಕೆಪಿಸಿಸಿ ವಕ್ತಾರ, ಸಾಮಾಜಿಕ ಕಾರ್ಯಕರ್ತರಾದ ನಿಕೇತ್ ರಾಜ್ ಮೌರ್ಯ, ಎಸ್‌ಐಓ ಕರ್ನಾಟಕ ರಾಜ್ಯಾಧ್ಯಕ್ಷ ಝೀಶಾನ್‌ ಅಖಿಲ್ ಸಿದ್ದೀಕಿ, ಜಮಾಅತೆ ಇಸ್ಲಾಮೀ ಹಿಂದ್ ಕೇರಳ ಮುಖಂಡರಾದ ಸಲೀಂ ಮಂಬಾಡ್, ಜಮಾಅತೆ ಇಸ್ಲಾಮೀ ಕರ್ನಾಟಕ ರಾಜ್ಯ ಕಾರ್ಯದರ್ಶಿ ಮುಹಮ್ಮದ್ ಕುಂಞಿ ಭಾಗವಹಿಸಲಿದ್ದಾರೆ ಎಂದವರು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಕಾರ್ಯದರ್ಶಿಗಳಾದ ಮುಹಮ್ಮದ್ ಮುಸ್ತಫಾ, ಸಲ್ವಾನ್‌, ಮಂಗಳೂರು ನಗರಾಧ್ಯಕ್ಷ ಮುಂಝಿರ್ ಅಹ್ಸನ್, ಸಮ್ಮೇಳನ ಸಂಚಾಲಕ ಹುನೈನ್ ಹುಸೇನ್ ಉಪಸ್ಥಿತರಿದ್ದರು.

WhatsApp Image 2024 10 10 at 10.15.01 PM
ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X