ಬಾಗಲಕೋಟೆ | ಕ್ರೀಡೆ ಯುವಕರ ಜೀವನದ ಅವಿಭಾಜ್ಯ ಅಂಗವಾಗಬೇಕು: ಶರಬಬಸಪ್ಪ ಸಂಗಳದ

Date:

Advertisements

ಕ್ರೀಡೆಯು ಯುವಕರ ಜೀವನದ ಅವಿಭಾಜ್ಯ ಅಂಗವಾಗಬೇಕು. ಮತ್ತು ಸಾಧನೆ ಮಾಡಲು ಮುನ್ನುಗ್ಗಬೇಕು ಎಂದು ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಶಿರೂರು ಗ್ರಾಮದಲ್ಲಿ ಏರ್ಪಡಿಸಿದ್ದ ಕ್ರಿಕೆಟ್ ಪಂದ್ಯಾವಳಿ ಕಾರ್ಯಕ್ರಮದಲ್ಲಿ ಮಾತನಾಡಿ ತಿಳಿಸಿದರು.

ಪಟ್ಟಣದ ಸಿದ್ದಲಿಂಗೇಶ್ವರ ಗೆಳೆಯರ ಬಳಗದವರು ದಸರಾ ನಿಮಿತ್ತ ಹಮ್ಮಿಕೊಂಡಿದ್ದ ಶಿರೂರ ಪ್ರೀಮಿಯರ್ ಕ್ರಿಕೆಟ್ ಪಂದ್ಯಾವಳಿ ಉದ್ಘಾಟಿಸಿ ಕಾಂಗ್ರೆಸ್ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ರಕ್ಷಿತಾ ಈಟಿ ಮಾತನಾಡಿ, ಕ್ರೀಡೆಯಲ್ಲಿ ಆಟಗಾರರು ಸಾಧನೆ ತೋರಬೇಕಾದರೆ ಸತತ ಪ್ರಯತ್ನ ಹಾಗೂ ಹಿರಿಯರ ಮಾರ್ಗದರ್ಶನ ಅಗತ್ಯವಾಗಿದೆ. “ಕ್ರೀಡೆಯಲ್ಲಿ ಆಸಕ್ತಿ ತೋರುವುದರೊಂದಿಗೆ ಕ್ರೀಡಾ ಮನೋಭಾವ ಬೆಳೆಸಿಕೊಳ್ಳಬೇಕು” ಎಂದರು.

ಯುವ ಮುಖಂಡ ಬಸವರಾಜ ಬಿಲ್ಲಾರ ಮಾತನಾಡಿ, “ಇತ್ತೀಚೆಗೆ ಕ್ರಿಕೆಟ್ ಆಟದಲ್ಲಿ ಬೆಟ್ಟಿಂಗ್ ಹಾವಳಿ ಹೆಚ್ಚಾಗಿದ್ದು, ಇದರಿಂದ ಯುವಕರು ದೂರವಿರಬೇಕು ಎಂದರು. ನಂತರ ಮಾಜಿ ಕ್ರಿಕೆಟ್ ಆಟಗಾರರನ್ನು ಸನ್ಮಾನಿಸಿದರು. ಹತ್ತು ದಿನಗಳ ಕಾಲ ಜರುಗುವ ಶಿರೂರ ಪ್ರೀಮಿಯರ್ ಕ್ರಿಕೆಟ್ ಪಂದ್ಯಾವಳಿಯಲ್ಲಿ 9 ತಂಡಗಳು ಭಾಗವಹಿಸಿದ್ದವು.

Advertisements

ಇದನ್ನು ಓದಿದ್ದೀರಾ? ಬೆಳಗಾವಿ | ಬೈಕ್‌ಗಳಿಗೆ ಡಿಕ್ಕಿ ಹೊಡೆದ ಲಾರಿ ಚಾಲಕ ಪರಾರಿ ಯತ್ನ; ಸೆರೆಹಿಡಿದು ಥಳಿಸಿದ ಗ್ರಾಮಸ್ಥರು

ಕಾಂಗ್ರೆಸ್ ಯುವ ಮುಖಂಡ ಮಲ್ಲಿಕಾರ್ಜುನ ಮೇಟಿ, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ರಂಗಪ್ಪ ಮಳ್ಳಿ, ಮಾಜಿ ಸದಸ್ಯ ರಾಮನಗೌಡ ಮಾಚಾ, ಪಿಕೆಪಿಎಸ್ ಅಧ್ಯಕ್ಷ ಮುದಕಪ್ಪ ಬಿಲ್ಲಾರ, ಅರ್ಜುನ ಅಂಗಡಿ, ಶಂಕರ ಹೂಗಾರ, ರವಿ ಮೇಟಿ, ಸಂಜಯ ನಡುವಿನಮನಿ, ಸುರೇಶ ಗಾಣಿಗೇರ, ಅನ್ವರ್ ಅಮರಗೋಳ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X