ಕೊಪ್ಪಳ | ಸಿದ್ದರಾಮಯ್ಯ ಸಿಎಂ ಆಗುವುದಾದರೆ ಕಾಂಗ್ರೆಸ್‌ಗೆ ಬೆಂಬಲ : ಜನಾರ್ದನ ರೆಡ್ಡಿ

Date:

Advertisements
  • 13 ಕ್ಷೇತ್ರಗಳಲ್ಲಿ ಕೆಆರ್‌ಪಿಪಿ ಸ್ಪಷ್ಟವಾಗಿ ಗೆಲುವು ಸಾಧಿಸಲಿದೆ
  • ಕೆಆರ್‌ಪಿಪಿ ಯಾವುದಾದರೂ ಒಂದು ಪಕ್ಷಕ್ಕೆ ಬೆಂಬಲ ನೀಡಲಿದೆ

ರಾಜ್ಯದಲ್ಲಿ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗುವ ಸಂದರ್ಭ ಏನಾದರೂ ಇದ್ದರೆ ಕಲ್ಯಾಣ ರಾಜ್ಯ ಪ್ರಗತಿ ಪಕ್ಷವು ಕಾಂಗ್ರೆಸ್‌ಗೆ ಬೆಂಬಲ ನೀಡಲಿದೆ ಎಂದು ಕೆಆರ್‌ಪಿಪಿ ಅಭ್ಯರ್ಥಿ ಗಾಲಿ ಜನಾರ್ದನ ರೆಡ್ಡಿ ಹೇಳಿದರು.

ಕೊಪ್ಪಳ ಜಿಲ್ಲೆ ಗಂಗಾವತಿ ನಗರದ ಕನಕಗಿರಿ ರಸ್ತೆಯಲ್ಲಿರುವ ಕರ್ನಾಟಕ ರಾಜ್ಯ ಉಗ್ರಾಣ ನಿಗಮದ ಬಳಿಯ ಮತಗಟ್ಟೆ ಸಂಖ್ಯೆ 155ರಲ್ಲಿ ಮತದಾನ ಮಾಡಿದ ಜನಾರ್ದನ ರೆಡ್ಡಿ, ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.

“ವಿಧಾನಸಭಾ ಚುನಾವಣಾ ಫಲಿತಾಂಶದ ನಂತರ ಕೆಆರ್‌ಪಿಪಿ ಯಾವುದಾದರೂ ಒಂದು ಪಕ್ಷಕ್ಕೆ ಬೆಂಬಲ ನೀಡಬೇಕಾದ ಸಂದರ್ಭ ಇದೆ. ಕಾಂಗ್ರೆಸ್ ಬೆಂಬಲಿಸಲು ಕೇಳಿದರೆ, ಸಿದ್ಧರಾಮಯ್ಯ ಮುಖ್ಯಮಂತ್ರಿ ಆಗುವ ಸಂದರ್ಭ ಬಂದರೆ ಖಂಡಿತವಾಗಿ ಬೆಂಬಲ ಸೂಚಿಸಲಾಗುವುದು” ಎಂದು ತಿಳಿಸಿದ್ದಾರೆ.

Advertisements

“ನಗರದ ಆರಾಧ್ಯದೈವ ಚೆನ್ನ ಬಸವ ತಾತನ ಹಾಗೂ ಗ್ರಾಮದೇವತೆ ದುರ್ಗಾದೇವಿ ಆಶೀರ್ವಾದ ಪಡೆದು ಬಂದಿದ್ದು, ವಿಧಾನಸಭಾ ಕ್ಷೇತ್ರದ ಮತದಾರರು ಕೆಆರ್‌ಪಿಪಿಗೆ ಬೆಂಬಲಿಸಿ ಮತದಾನ ನೀಡುತ್ತಾರೆ ಎಂಬ ವಿಶ್ವಾಸ ನನ್ನಲ್ಲಿದೆ” ಎಂದಿದ್ದಾರೆ.

ಈ ಸುದ್ದಿ ಓದಿದ್ದೀರಾ? ಚುನಾವಣೆ ಕರ್ತವ್ಯ | ಆಶಾ ಕಾರ್ಯಕರ್ತೆಯರಿಗೆ ಸಿಗದ ಗೌರವಧನ

“ಬಳ್ಳಾರಿ ನಗರದಲ್ಲಿ ಕೆಆರ್‌ಪಿಪಿ ಅಭ್ಯರ್ಥಿ ಅರುಣಾ ಲಕ್ಷ್ಮಿ ಸಹ ಗೆಲುವು ಸಾಧಿಸಲಿದ್ದಾರೆ. ಗಂಗಾವತಿ ವಿಧಾನಸಭಾ ಕ್ಷೇತ್ರದ ಫಲಿತಾಂಶದಲ್ಲಿ ಬಾರಿ ಅಂತರದಿಂದ ಗೆಲುವು ಸಾಧಿಸಲಿದ್ದೇನೆ. 13 ಕ್ಷೇತ್ರಗಳಲ್ಲಿ ಸ್ಪಷ್ಟವಾಗಿ ಗೆಲುವು ಸಾಧಿಸಲಿದ್ದು, ಉಳಿದ ಕ್ಷೇತ್ರದಲ್ಲಿ ಪೈಪೋಟಿ ಇದೆ” ಎಂದು ಹೇಳಿದ್ದಾರೆ.

ಈ ವೇಳೆ ಕೆಆರ್‌ಪಿಪಿ ಕೊಪ್ಪಳ ಜಿಲ್ಲಾ ಅಧ್ಯಕ್ಷ ಮನೋಹರ ಗೌಡ ಹೇರೂರು, ರಾಜೇಶ ರೆಡ್ಡಿ ಹಾಗೂ ಇತರರು ಇದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X