ಏರ್ ಇಂಡಿಯಾ ವಿಮಾನದಲ್ಲಿ ತಾಂತ್ರಿಕ ದೋಷ, ಜೀವ ಹಿಡಿದು ಕುಳಿತಿರುವ 140 ಪ್ರಯಾಣಿಕರು

Date:

Advertisements

ತಿರುಚ್ಚಿಯಿಂದ ಶಾರ್ಜಾಕ್ಕೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನದೊಳಗೆ ಹಾರಾಟದ ಮಧ್ಯದಲ್ಲೇ ಹೈಡ್ರಾಲಿಕ್ ಸಮಸ್ಯೆ ಉಂಟಾಗಿದ್ದು, ಲ್ಯಾಂಡಿಂಗ್ ಗೇರ್ ಅಸಮರ್ಪಕವಾಗಿದೆ.

140 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ವಿಮಾನ ತಿರುಚಿ ವಿಮಾನ ನಿಲ್ದಾಣಕ್ಕೆ ಹಿಂತಿರುಗುತ್ತಿದ್ದು ಪ್ರಸ್ತುತ ತುರ್ತು ಭೂಸ್ಪರ್ಶ ಮಾಡುವ ಪರಿಸ್ಥಿತಿ ನಿರ್ಮಾಣವಾಗಿದ್ದು, ಇಂಧನವನ್ನು ಖಾಲಿ ಮಾಡುವ ಸಲುವಾಗಿ ಪೈಲಟ್ ಗಳು ಆಗಸದಲ್ಲೇ ಹಾರಾಟ ನಡೆಸುತ್ತಿದ್ದಾರೆ.

ಲ್ಯಾಂಡಿಂಗ್ ಸಮಯದಲ್ಲಿ ಬೆಂಕಿಯ ಅಪಾಯವನ್ನು ತಪ್ಪಿಸಲು, ವಿಮಾನದಲ್ಲಿನ ಇಂಧನ ಲೋಡ್ ಅನ್ನು ಕಡಿಮೆ ಮಾಡಿದ ನಂತರ ತುರ್ತು ಭೂಸ್ಪರ್ಶಕ್ಕೆ ಪ್ರಯತ್ನಿಸಲಾಗುತ್ತದೆ. ಮುಂಜಾಗ್ರತಾ ಕ್ರಮವಾಗಿ ವಿಮಾನ ನಿಲ್ದಾಣದಲ್ಲಿ 20ಕ್ಕೂ ಹೆಚ್ಚು ಆಂಬ್ಯುಲೆನ್ಸ್‌ಗಳು ಮತ್ತು ಅಗ್ನಿಶಾಮಕ ವಾಹನಗಳನ್ನು ಸ್ಟ್ಯಾಂಡ್‌ಬೈನಲ್ಲಿ ಇರಿಸಲಾಗಿದ್ದು, ಸಂಭವನೀಯ ಬೆಲ್ಲಿ ಲ್ಯಾಂಡಿಂಗ್‌ಗೆ ಸಿದ್ಧತೆಗಳನ್ನು ಮಾಡಲಾಗುತ್ತಿದೆ.

Advertisements

ಸಂಜೆ 5.43ರ ಸುಮಾರಿಗೆ ವಿಮಾನ ಟೇಕ್ ಆಫ್ ಆಗಿತ್ತು. ನಂತರ ವಿಮಾನದಲ್ಲಿ ಹೈಡ್ರಾಲಿಕ್ ಸಮಸ್ಯೆ ಪತ್ತೆಯಾದ ಕೂಡಲೇ ಪೈಲಟ್ ಗಳು ವಿಮಾನವನ್ನು ಮತ್ತು ತಿರುಚಿಗೆ ಡೈವರ್ಟ್ ಮಾಡಿದ್ದು ಸುರಕ್ಷಿತ ಲ್ಯಾಂಡಿಂಗ್ ಗಾಗಿ ಪ್ರಯತ್ನಿಸುತ್ತಿದ್ದಾರೆ. ಸತತ 3 ಗಂಟೆಯಿಂದ ವಿಮಾನವನ್ನು ಆಗಸದಲ್ಲೇ ಗಿರಕಿ ಹೊಡೆಸಲಾಗುತ್ತಿದ್ದು ಇಂಧನದ ಲೋಡ್ ಕಡಿಮೆಯಾದ ನಂತರ ತುರ್ತು ಭೂಸ್ಪರ್ಶಕ್ಕೆ ಯತ್ನಿಸಲಾಗುತ್ತದೆ.

ವಿಮಾನ ನಿಲ್ದಾಣದ ಅಧಿಕಾರಿಗಳು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದು, ತುರ್ತು ಪರಿಸ್ಥಿತಿಯನ್ನು ನಿಭಾಯಿಸಲು ಸಂಪೂರ್ಣವಾಗಿ ಸಿದ್ಧರಾಗಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಬಿಐ ಅಧಿಕಾರಿಗಳಂತೆ ನಟಿಸಿ 2.3 ಕೋಟಿ ರೂ. ದೋಚಿದ್ದ ಗ್ಯಾಂಗ್: ಇಬ್ಬರ ಬಂಧನ

ಕೇಂದ್ರ ತನಿಖಾ ದಳ (ಸಿಬಿಐ) ಅಧಿಕಾರಿಗಳಂತೆ ನಟಿಸಿ ಉದ್ಯಮಿಯೊಬ್ಬರ ಕಚೇರಿಯಿಂದ ಗ್ಯಾಂಗ್...

ಬೀದಿ ನಾಯಿಗಳಿಗೆ ಲಸಿಕೆ ಹಾಕಿದ ನಂತರ ಅದೇ ಸ್ಥಳಕ್ಕೆ ತಂದು ಬಿಡಬೇಕು: ಸುಪ್ರೀಂ ಕೋರ್ಟ್‌

ಬೀದಿ ನಾಯಿಗಳಿಗೆ ಸಂಬಂಧಿಸಿದ್ದಂತೆ ಆಗಸ್ಟ್ 11ರ ಆದೇಶವನ್ನು ಮಾರ್ಪಡಿಸಿದ ಸುಪ್ರೀಂ...

ವಿವಾದಾತ್ಮಕ ಯೂಟ್ಯೂಬರ್ ಎಲ್ವಿಶ್ ಮನೆ ಮೇಲೆ ಗುಂಡಿನ ದಾಳಿ: ಎನ್‌ಕೌಂಟರ್ ಮಾಡಿ ಆರೋಪಿ ಬಂಧನ

ಬಲಪಂಥೀಯ, ವಿವಾದಾತ್ಮಕ ಯೂಟ್ಯೂಬರ್ ಮತ್ತು ಬಿಗ್ ಬಾಸ್ ವಿಜೇತ ಎಲ್ವಿಶ್ ಯಾದವ್‌...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

Download Eedina App Android / iOS

X