ರಾಯಚೂರು | ಊಟದ ಬಳಿಕ ಒಂದೇ ಕುಟುಂಬದ 7 ಮಂದಿ ಅಸ್ವಸ್ಥ; ‘ಕಲುಷಿತ ನೀರು ಕಾರಣ’ ಎಂದ ಗ್ರಾಮಸ್ಥರು

Date:

Advertisements

ಹೊಲದಲ್ಲಿ ಕುಳಿತು ಊಟ ಸೇವಿಸಿದ್ದ ಒಂದೇ ಕುಟುಂಬದ ಏಳು ಮಂದಿ ಅಸ್ವಸ್ಥರಾದ ಘಟನೆ ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನ ಅಮೀನಗಡ ಗ್ರಾಮದಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ.

ಬೆಳಗ್ಗೆ ಹೊಲದಲ್ಲಿ ಕೆಲಸ ಮುಗಿಸಿಕೊಂಡು ಎಲ್ಲರೂ ಒಟ್ಟಾಗಿ ಸೇರಿ ಊಟ ಮಾಡಿದ್ದಾರೆ. ಬೆಂಡೆಕಾಯಿ , ಜೋಳದ ರೊಟ್ಟಿ ಸೇವಿಸಿದ್ದಾರೆ ಎನ್ನಲಾಗಿದೆ.

ಏಕಾಏಕಿ ಎಲ್ಲರಲ್ಲಿ ವಾಂತಿ ಭೇದಿ ಶುರುವಾಗಿದ್ದು, ತಕ್ಷಣವೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಹೆಚ್ಚಿನ ಚಿಕಿತ್ಸೆಗಾಗಿ ಲಿಂಗಸುಗೂರು ತಾಲೂಕು ಆಸ್ಪತ್ರೆಗೆ ರವಾನಿಸಲಾಗಿದೆ.

Advertisements

ಇದನ್ನು ಓದಿದ್ದೀರಾ? ಉಡುಪಿ | ಅಂಬೇಡ್ಕರ್, ದಲಿತರಿಗೆ ಅವಮಾನಿಸಿದ ಸಂಘಪರಿವಾರದ ಮುಖಂಡ ಉಮೇಶ್ ನಾಯ್ಕ: ಬಂಧನಕ್ಕೆ ದಲಿತ ಮುಖಂಡರ ಆಗ್ರಹ

ಲಕ್ಷ್ಮೀ, ಮಾಳಪ್ಪ, ಬಸವಲಿಂಗಪ್ಪ, ಗೌರಮ್ಮ ಸೇರಿ ಒಂದೇ ಕುಟುಂಬದ ಏಳು ಜನರು ಅಸ್ವಸ್ಥರಾಗಿದ್ದಾರೆ. ಸ್ಥಳಕ್ಕೆ ಆರೋಗ್ಯ ಇಲಾಖೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸ್ಥಳೀಯ ಗ್ರಾಮಸ್ಥರು ಕಲುಷಿತ ನೀರಿನಿಂದಾಗಿ ಈ ರೀತಿಯ ಘಟನೆ ಆಗಿದೆ ಎಂದು ಆರೋಪಿಸಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X