ಭಾರತ v/s ನ್ಯೂಜಿಲೆಂಡ್ | ಟೆಸ್ಟ್‌ ಸರಣಿಗೆ ಟೀಮ್ ಇಂಡಿಯಾ ತಂಡ ಪ್ರಕಟ; ಬೆಂಗಳೂರಿನಲ್ಲಿ ಮೊದಲ ಪಂದ್ಯ

Date:

Advertisements

ನ್ಯೂಜಿಲೆಂಡ್ ಮತ್ತು ಭಾರತ ನಡುವಿನ ಟೆಸ್ಟ್‌ ಪಂದ್ಯಾವಳಿಯು ಅಕ್ಟೋಬರ್ 16ರಿಂದ ಆರಂಭವಾಗಿವೆ. ಈ ಬಾರಿಯ ಟೆಸ್ಟ್‌ ಕ್ರಿಕೆಟ್‌ ಸರಣಿ ಭಾರತದಲ್ಲಿಯೇ ನಡೆಯಲಿದ್ದು, ಮೊದಲ ಟೆಸ್ಟ್‌ ಬೆಂಗಳೂರಿನಲ್ಲಿ ನಡೆಯಲಿದೆ. ಟೆಸ್ಟ್‌ ಸರಣಿಗಾಗಿ ಬಿಸಿಸಿಐ ಸಿದ್ದತೆಯಲ್ಲಿ ತೊಡಗಿದೆ. ಜೊತೆಗೆ, ಕ್ರಿಕೆಟ್‌ ಟೀಮ್‌ ಇಂಡಿಯಾದ ಆಟಗಾರರ ಪಟ್ಟಿಯನ್ನೂ ಪ್ರಕಟಿಸಿದೆ.

ಟೆಸ್ಟ್‌ ಪಂದ್ಯಾವಳಿಯಲ್ಲಿ ಭಾರತ ತಂಡವನ್ನು ನಾಯಕ ರೋಹಿತ್ ಶರ್ಮಾ ಮುನ್ನಡೆಸಲಿದ್ದಾರೆ. ಅವರಿಗೆ ಜಸ್‌ಪ್ರೀತ್ ಬೂಮ್ರಾ ಅವರು ಸಾಥ್ ನೀಡಲಿದ್ದು, ಬೂಮ್ರಾಗೆ ಉಪನಾಯಕನ ಜವಾಬ್ದಾರಿ ನೀಡಲಾಗಿದೆ.

ತಂಡದಲ್ಲಿ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿಯೂ ಇರಲಿದ್ದು, ಎಂದಿನಂತೆ ಓಪನಿಂಗ್ ಬ್ಯಾಟ್ಸ್‌ಮನ್ ಆಗಿರಲಿದ್ದಾರೆ. ಜೊತೆಗೆ, ರವಿಚಂದ್ರನ್ ಅಶ್ವಿನ್, ಕೆ.ಎಲ್ ರಾಹುಲ್, ರವೀಂದ್ರ ಜಡೇಜರಂತಹ ಅನುಭವಿ ಆಟಗಾರರೂ ಇದ್ದಾರೆ.

Advertisements

ತಂಡದಲ್ಲಿ 15 ಮಂದಿ ಆಟಗಾರರೊಂದಿಗೆ, ನಾಲ್ಕು ಮಂದಿ ಮೀಸಲು ಆಟಗಾರರೂ ಇದ್ದಾರೆ.

ಭಾರತ ತಂಡದ ಪಟ್ಟಿ:

ರೋಹಿತ್ ಶರ್ಮಾ (ನಾಯಕ),
ಜಸ್‌ಪ್ರೀತ್ ಬೂಮ್ರಾ (ಉಪನಾಯಕ),
ಯಶಸ್ವಿ ಜೈಸ್ವಾಲ್,
ಶುಭಮನ್ ಗಿಲ್,
ವಿರಾಟ್ ಕೊಹ್ಲಿ,
ಕೆ.ಎಲ್. ರಾಹುಲ್,
ಸರ್ಫರಾಜ್ ಖಾನ್,
ರಿಷಭ್ ಪಂತ್ (ವಿಕೆಟ್ ಕೀಪರ್),
ಧ್ರುವ್ ಜುರೇಲ್ (ವಿಕೆಟ್ ಕೀಪರ್),
ರವಿಚಂದ್ರನ್ ಅಶ್ವಿನ್,
ರವೀಂದ್ರ ಜಡೇಜ,
ಅಕ್ಷರ್ ಪಟೇಲ್,
ಕುಲದೀಪ್ ಯಾದವ್,
ಮೊಹಮ್ಮದ್ ಸಿರಾಜ್,
ಆಕಾಶ್ ದೀಪ್.

ಮೀಸಲು ಆಟಗಾರರು: ಹರ್ಷೀತ್ ರಾಣಾ, ನಿತೀಶ್ ಕುಮಾರ್ ರೆಡ್ಡಿ, ಮಯಂಕ್ ಯಾದವ್ ಮತ್ತು ಪ್ರಸಿದ್ಧ ಕೃಷ್ಣ

ವೇಳಾಪಟ್ಟಿ: ಅ.16ರಿಂದ ಅ.20: ಮೊದಲ ಟೆಸ್ಟ್, ಬೆಂಗಳೂರು,
ಅ.24ರಿಂದ ಅ.28: ಎರಡನೇ ಟೆಸ್ಟ್, ಪುಣೆ,
ನ.1ರಿಂದ ನ.5: ಮೂರನೇ ಟೆಸ್ಟ್, ಮುಂಬೈ

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

Download Eedina App Android / iOS

X