ದಾವಣಗೆರೆ | ಕಬ್ಬೂರು ಗ್ರಾಮಸ್ಥರ ಕೆರೆ ತುಂಬಿಸುವ ಕಾರ್ಯ ಶ್ಲಾಘನೀಯ: ಶಿವಮೂರ್ತಿ ಶಿವಾಚಾರ್ಯ ಶ್ರೀ

Date:

Advertisements

ಅಭಿವೃದ್ಧಿ ಮತ್ತು ಯೋಜನೆಗಳಿಗೆ ಸರ್ಕಾರಗಳತ್ತ ಮುಖ ಮಾಡಿ ಕಾಯದೆ ಜನರೇ ಸ್ವಸಹಕಾರದಿಂದ ಪ್ರಯತ್ನ ಮಾಡಿದಲ್ಲಿ ಅಭಿವೃದ್ಧಿ ಸಾಧ್ಯ. ಈ ನಿಟ್ಟಿನಲ್ಲಿ ಸರ್ಕಾರದ ಯೋಜನೆಗೆ ಪರಿತಪಿಸದೆ ಸ್ವತಃ ಕಬ್ಬೂರು ಗ್ರಾಮಸ್ಥರೇ ಕೆರೆ ತುಂಬಿಸುವ ಕಾರ್ಯ ಮಾಡಿರುವುದು ಅತ್ಯಂತ ಶ್ಲಾಘನೀಯ ಎಂದು ಸಿರಿಗೆರೆ ಮಠದ ಶಿವಮೂರ್ತಿ ಶಿವಾಚಾರ್ಯ ಶ್ರೀಗಳು ಗ್ರಾಮಸ್ಥರ ಬಗ್ಗೆ ಹೆಮ್ಮೆ ವ್ಯಕ್ತಪಡಿಸಿದರು.

ದಾವಣಗೆರೆ ತಾಲೂಕಿನ ಕಬ್ಬೂರು ಗ್ರಾಮಸ್ಥರ ಕೆರೆಗೆ ನೀರು ಹರಿಸುವ ಪ್ರಯತ್ನದಿಂದ ತುಂಬಿರುವ ಕೆರೆಗೆ ಬಾಗಿನ ಅರ್ಪಣೆ ಕಾರ್ಯಕ್ರಮದಲ್ಲಿ ಬಾಗಿನ ಅರ್ಪಿಸಿ ಮಾತನಾಡಿದರು.

ಬಾಗಿನ ಅರ್ಪಣೆ

“ನಿಸ್ವಾರ್ಥದಿಂದ ಕೂಡಿದ ಮನಸ್ಸುಗಳು ಸರ್ವರ, ಸಮಾಜದ ಹಿತವನ್ನು ಬಯಸುತ್ತವೆ. ಸ್ವಾರ್ಥಿಗಳಿಂದ ಸಮಾಜದ, ಗ್ರಾಮದ ಅಭಿವೃದ್ಧಿ ಸಾಧ್ಯವಿಲ್ಲ. ಸಮಾಜದಲ್ಲಿ ಇಂದು ಸ್ವಾರ್ಥಿಗಳು ಹೆಚ್ಚಾಗುತ್ತಿದ್ದಾರೆ. ಇದಕ್ಕೆ ವ್ಯತಿರಿಕ್ತವಾಗಿ ಗ್ರಾಮಸ್ಥರಾದ ನೀವು ಸರ್ಕಾರದ ಯೋಜನೆ ಕಡೆ ನೋಡದೆ ಕೆರೆ ತುಂಬಿಸುವ ಕಾರ್ಯ ಕೈಗೊಂಡು ಯಶಸ್ವಿಯಾಗಿರುವುದು ಅತ್ಯಂತ ಹೆಮ್ಮೆಯ ಮತ್ತು ಸಾಧನೆಯ ವಿಷಯವಾಗಿದೆ. ಭೂಮಿಯ ಮೇಲೆ ನೀರು ಸಾಕಷ್ಟಿರುತ್ತದೆ.‌ ಆದರೆ ಅದೆಲ್ಲವೂ ಕೂಡ ಉಪಯೋಗಕ್ಕೆ ಬರುವುದಿಲ್ಲ. ಕೆರೆ, ಹಳ್ಳ, ಕೊಳ್ಳ, ತೊರೆ, ನದಿಗಳ ಮೂಲಕ ಸಮುದ್ರಕ್ಕೆ ಸಾಗುವ ನೀರನ್ನು ಹಿಡಿದಿಟ್ಟುಕೊಂಡು ಸದ್ಬಳಕೆ ಮಾಡಿಕೊಳ್ಳಬೇಕಿದೆ” ಎಂದು ಸಲಹೆ ನೀಡಿದರು.

Advertisements

ಈ ಸುದ್ದಿ ಓದಿದ್ದೀರಾ? ರಾಯಚೂರು | ಊಟದ ಬಳಿಕ ಒಂದೇ ಕುಟುಂಬದ 7 ಮಂದಿ ಅಸ್ವಸ್ಥ; ‘ಕಲುಷಿತ ನೀರು ಕಾರಣ’ ಎಂದ ಗ್ರಾಮಸ್ಥರು

“ಉಬ್ರಾಣಿ ಏತನೀರಾವರಿ ಮೊದಲು ಪ್ರಾರಂಭವಾಯಿತು. ನಂತರ ಇಪ್ಪತ್ತೆರಡು ಕೆರೆ ಏತನೀರಾವರಿ ಎರಡೂ ಕೆರೆಗಳಿಗೂ ಯಶಸ್ವಿ ಆಗಲಿಲ್ಲ. ನಂತರ ಭರಮಸಾಗರ, ಜಗಳೂರು ಏತನೀರಾವರಿ ಇವುಗಳಿಗೂ ಮೊದಲು ಪ್ರಾರಂಭವಾದ ಬಹುದೊಡ್ಡ ಯೋಜನೆ, ಸಾಸ್ವೆಹಳ್ಳಿ ಏತನೀರಾವರಿ. ಇದಕ್ಕೂ ಸಾಕಷ್ಟು ಅಡೆತಡೆಗಳು ಬಂದವು. ಕೋರ್ಟ್ ಕೂಡಾ ಶೀಘ್ರ ಯೋಜನೆ ಪರವಾಗಿ ಆದೇಶ ನೀಡಿತು. ಆದ್ದರಿಂದ ಈ ವರ್ಷ ಮುತ್ತುಗದೂರು ಕೆರೆಗೆ ಪ್ರಾಯೋಗಿಕ ನೀರು ಹರಿಯಿತು. ಇನ್ನೂ ಮುಂದಿನ‌ ದಿನಗಳಲ್ಲಿ ಯೋಜನೆಯ ಎಲ್ಲ ಕೆರೆಗಳಿಗೂ ನೀರು ತಲುಪುವಂತೆ ನೋಡಿಕೊಳ್ಳಬೇಕಿದೆ. ಇದರಿಂದ ಸಾಕಷ್ಟು ಅಂತರ್ಜಲ ವೃದ್ದಿಯಾಗಿ ನಮ್ಮ ರೈತರ ಬದುಕು ಹಸನಾಗುತ್ತದೆ” ಎಂದು ಅಭಿಪ್ರಾಯಪಟ್ಟರು.

ಕಾರ್ಯಕ್ರಮದಲ್ಲಿ ಕಬ್ಬೂರು ಹಾಗೂ ಸುತ್ತಮುತ್ತಲ ಗ್ರಾಮಗಳ ಗ್ರಾಮಸ್ಥರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X