ಗದಗ | ನಿನ್ನೆ ಸುರಿದ ಮಳೆಗೆ ಉಕ್ಕಿ ಹರಿದ ಹಳ್ಳ ; ಸಂಚಾರ ಸ್ಥಗಿತ

Date:

Advertisements

ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ದೊಡ್ಡೂರು ಗ್ರಾಮ ವ್ಯಾಪ್ತಿಯಲ್ಲಿ ಬರುವ ಹಳ್ಳವು ಶುಕ್ರವಾರ ರಾತ್ರಿ ಸುರಿದ ಭಾರಿ ಮಳೆಯಿಂದಾಗಿ ಹಳ್ಳದ ಮೆಲ್ಭಾಗಕ್ಕೆ ನೀರು ಆವರಿಸಿಕೊಂಡ ಪರಿಣಾಮ ಸಂಚಾರ ಸ್ಥಗಿತಗೊಂಡಿದೆ.

ರಾಜ್ಯದ ಹಲವೆಡೆ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಲಕ್ಷ್ಮೇಶ್ವರ ಭಾಗದಲ್ಲಿಯು ಭಾರಿ‌ ಮಳೆ ಸುರಿದ ಪರಿಣಾಮ, ದೊಡ್ಡೂರು ಹಳ್ಳದ ಮೆಲ್ಭಾಗಕ್ಕೆ ನೀರು ನುಗ್ಗಿ ವಾಹನಗಳ ಸಂಚಾರಕ್ಕೆ ತೊಂದರೆಯಾಗಿದೆ. ತಾಲೂಕಿನ ಬೆಳ್ಳಟ್ಟಿ, ಬಾಲೆಹೊಸೂರ, ಸೂರಣಗಿ ಗ್ರಾಮಗಳ ಕಡೆಗೆ ಹೋಗುವ ಮುಖ್ಯ ಮಾರ್ಗ ಮತ್ತು ರೈತರ ಹೊಲಗಳಿಗೆ ಹೋಗುವ ಮುಖ್ಯರಸ್ತೆಯಾಗಿದ್ದು, ಬಹುತೇಕ ಸಂಚಾರಕ್ಕೆ ತೊಂದರೆ ಉಂಟಾಗಿದೆ.

ಹಲವು ವರ್ಷಗಳಿಂದ ಈ ಹಳ್ಳ ಉಕ್ಕಿ ಬರುವ ಸಮಸ್ಯೆ ಎದುರಾಗುತ್ತಿದ್ದು, ಈ ಹಿಂದೆ ಸರಕಾರಿ ಬಸ್ಸು ಮುಳುಗಡೆಯಾಗಿ ರಾಜ್ಯ ಸುದ್ದಿಯಾಗಿತ್ತು. ರೈತರ ಎತ್ತು ಹಾಗೂ ಚಕ್ಕಡಿ ಮುಳುಗಿದ್ದೂ ಉಂಟು. ಇಷ್ಟೆಲ್ಲಾ ಸಮಸ್ಯೆಗಳಾದರೂ ಇಲ್ಲಿಯವರೆಗೂ ಈ ಮೇಲ್ಸೇತುವೆ ಸಮಸ್ಯೆ ಜಲ್ವಂತ ಸಮಸ್ಯೆಯಾಗಿ ಉಳದಿದೆ. ಮತ್ತು ಅಧಿಕಾರಿ ವರ್ಗ, ಶಾಸಕರು, ಸರ್ಕಾರವೂ ಕಣ್ಮುಚ್ಚಿಕೊಂಡು ಕುಳಿತಿದೆ. ಸಮಸ್ಯೆ ಪರಿಹಾರಕ್ಕೆ ಮೇಲ್ಸೇತುವೆ ಕಟ್ಟಲು ಮುಂದಾಗುತ್ತಿಲ್ಲ ಎಂದು ಸ್ಥಳಿಯರು ಆಕ್ರೋಶ ವ್ಯಕ್ತಪಡಿಸುತ್ತಾರೆ.

Advertisements

ಇದನ್ನು ಓದಿದ್ದೀರಾ? ಹಾವೇರಿ | ಆಕಾಶದತ್ತ ಚಿಗರಿತಲೇ ಬೇರು, ಮುತ್ತಾಯಿತಲೇ ಪರಾಕ್: ಕಾರ್ಣಿಕ ನುಡಿ

ಇನ್ನು ಈ ಭಾಗದ ಅಧಿಕಾರಿಗಳಾಗಲಿ, ಶಾಸಕರಾಗಲಿ ಅಥವಾ ಸರಕಾರವಾಗಲಿ ಮೇಲ್ಸೇತುವೆ ಕಟ್ಟಿಸುವ ಕಡೆಗೆ ಗಮನ ಹರಿಸುವರೆ? ಜನಸಾಮಾನ್ಯರ ಸಮಸ್ಯೆ ಬಗೆಹರಿಸುವರೆ? ಎಂದು ಕಾದುನೋಡಬೇಕಿದೆ.

ವರದಿ: ಮಲ್ಲೇಶ ಮಣ್ಣಮ್ಮನವರ. ಸಿಟಿಜನ್ ಜರ್ನಲಿಸ್ಟ್.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X