ಕೋಲ್ಕತ್ತಾ ಪ್ರಕರಣ | 9ನೇ ದಿನವೂ ಮುಂದುವರೆದ ಕಿರಿಯ ವೈದ್ಯರ ಉಪವಾಸ ಸತ್ಯಾಗ್ರಹ; ರಾಜ್ಯಾದ್ಯಂತ ಬೆಂಬಲ

Date:

Advertisements

ಆರ್‌ಜಿ ಕರ್ ಆಸ್ಪತ್ರೆಯಲ್ಲಿ ನಡೆದ ಟ್ರೈನಿ ವೈದ್ಯೆಯ ಅತ್ಯಾಚಾರ-ಕೊಲೆ ಪ್ರಕರಣದ ನಂತರ ಬಂಗಳಾದ ಕಿರಿಯ ವೈದ್ಯರು ಸರ್ಕಾರದ ಎದುರು ಪ್ರಮುಖ ಐದು ಬೇಡಿಕೆಗಳನ್ನಿಟ್ಟಿದ್ದಾರೆ. ಅವುಗಳ ಈಡೇರಿಕೆಗಾಗಿ ಹೋರಾಟ ನಡೆಸುತ್ತಿದ್ದಾರೆ. ಆದರೆ, ಸರ್ಕಾರ ತಮ್ಮ ಬೇಡಿಕೆಗಳಿಗೆ ಸ್ಪಂದಿಸುತ್ತಿಲ್ಲವೆಂದು ಆರೋಪಿಸಿ, ಕಿರಿಯ ವೈದ್ಯರು ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ. ಅವರ ಉಪವಾಸ ಸತ್ಯಾಗ್ರಹ ಭಾನುವಾರ ಒಂಬತ್ತನೇ ದಿನಕ್ಕೆ ಕಾಲಿಟ್ಟಿದೆ. ಅವರ ಪ್ರತಿಭಟನೆಯನ್ನು ಬೆಂಬಲಿಸಿ ರಾಜ್ಯಾದ್ಯಂತ ಜನರು ‘ಸಾಂಕೇತಿಕ ಉಪವಾಸ’ ನಡೆಸಿದ್ದಾರೆ.

ಬಂಗಾಳದ ಕೋಲ್ಕತ್ತಾ ಮತ್ತು ಸಿಲಿಗುರಿ ನಗರದಲ್ಲಿ 9 ದಿನಗಳಿಂದ ಕಿರಿಯ ವೈದ್ಯರು ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ. ಅವರಲ್ಲಿ, ಈವರೆಗೆ ಮೂವರು ಅಸ್ವಸ್ಥಗೊಂಡಿದ್ದಾರೆ. ಅವರ ಆರೋಗ್ಯ ಪರಿಸ್ಥಿತಿ ಹದಗೆಟ್ಟಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಟ್ರೈನಿ ವೈದ್ಯರನ್ನು ಬೆಂಬಲಿಸಿ ಮಾಲ್ಡಾ ಮತ್ತು ಮುರ್ಷಿದಾಬಾದ್ ಜಿಲ್ಲೆಗಳಲ್ಲಿ ಹಲವಾರು ಜನರು 12 ಗಂಟೆಗಳ ‘ಸಾಂಕೇತಿಕ ಉಪವಾಸ’ ನಡೆಸಿದ್ದಾರೆ. ಟ್ರೈನಿ ವೈದ್ಯರ ಬೇಡಿಕೆಗಳನ್ನು ಈಡೇರಿಸಲು ಸರ್ಕಾರ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.

Advertisements

ಅತ್ಯಾಚಾರ-ಹತ್ಯೆಗೆ ಬಲಿಯಾದ ಆರ್‌ಜಿ ಕರ್ ಆಸ್ಪತ್ರೆಯ ಟ್ರೈನಿ ವೈದ್ಯೆಯ ಕುಟುಂಬಕ್ಕೆ ನ್ಯಾಯ ಒದಗಿಸಬೇಕು. ಆರೋಗ್ಯ ಕಾರ್ಯದರ್ಶಿ ಎನ್‌.ಎಸ್‌ ನಿಗಮ್‌ ಅವರನ್ನು ಕೂಡಲೇ ವಜಾಗೊಳಿಸಬೇಕು. ಕೆಲಸದ ಸ್ಥಳಗಳಲ್ಲಿ ಭದ್ರತೆ ಒದಗಿಸಬೇಕು. ರಾಜ್ಯದ ಎಲ್ಲ ಆಸ್ಪತ್ರೆಗಳು ಮತ್ತು ವೈದ್ಯಕೀಯ ಕಾಲೇಜುಗಳಿಗೆ ಕೇಂದ್ರೀಕೃತ ರೆಫರಲ್ ವ್ಯವಸ್ಥೆಯನ್ನು ಸ್ಥಾಪಿಸಬೇಕು ಎಂಬುದು ಸೇರಿದಂತೆ ಹಲವು ಕ್ರಮಗಳಿಗೆ ಪ್ರತಿಭಟನಾನಿರತ ವೈದ್ಯರು ಒತ್ತಾಯಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

Download Eedina App Android / iOS

X