ರಾಯಚೂರು | ಬಟ್ಟೆ ತೊಳೆಯಲು ಹೋದಾಗ ತಾಯಿ ಮಗಳು ನಾಪತ್ತೆ

Date:

Advertisements

ಬಟ್ಟೆ ತೊಳೆಯಲು ಕಾಲುವೆಗೆ ಹೋದಾಗ ಮನೆಗೆ ಹಿಂತಿರುಗದೆ ತಾಯಿ ಮಗಳು ನಾಪತ್ತೆಯಾದ ಘಟನೆ ರಾಯಚೂರು ತಾಲೂಕಿನ ಯದ್ಲಾಪುರ್ ಗ್ರಾಮದಲ್ಲಿ ನಡೆದಿದೆ.

ಬೆಳಿಗ್ಗೆ 6 ಗಂಟೆಗೆ ಬಟ್ಟೆ ತೊಳೆಯಲು ಗ್ರಾಮದ ಹೊರವಲಯದ ಕಾಲುವೆಗೆ ಹೋಗಿದ್ದು, ಮಧ್ಯಾಹ್ನವಾದರೂ ಮನೆಗೆ ಹಿಂತಿರುಗಲಿಲ್ಲ. ಕುಟುಂಬಸ್ಥರು ವೀಕ್ಷಣೆಗೆ ಹೋದಾಗ ಕಾಲುವೆಯಲ್ಲಿ ಕಾಲು ಜಾರಿ ಬಿದ್ದಿರಬಹುದು ಎಂದು ಅನುಮಾನವಾಗಿದೆ.

1000023961

ತಾಯಿ ಸುಜಾತ (27) , ಮಗಳು ಶ್ರಾವಣಿ (10). ಕಾಲುವೆ ದಡದಲ್ಲಿ ಬಟ್ಟೆ ಇರುವುದನ್ನು ನೋಡಿ ತಾಯಿ ಕಾಲು ಜಾರಿ ಅಥವಾ ಸೋಪು ಕೈಯಿಂದ ಜಾರಿ ನೀರಿನಲ್ಲಿ ಬೀಳುವ ಸಂದರ್ಭದಲ್ಲಿ ತೆಗೆದುಕೊಳ್ಳಲು ಹೋಗಿ ನೀರಿಗೆ ಬಿದ್ದಿರಬಹುದು ಎಂದು ಅನುಮಾನವಾಗಿದೆ. ತಾಯಿಯನ್ನು ಕಾಪಾಡಲು ಮಗಳು ಪ್ರಯತ್ನ ಮಾಡಿ ಬಾಲಕಿಯೂ ಸಹ ಕಾಲುವೆಯಲ್ಲಿ ಕೊಚ್ಚಿಕೊಂಡು ಹೋಗಿರಬಹುದು ಎಂಬುವುದು ಗ್ರಾಮಸ್ಥರಲ್ಲಿ ಕೇಳಿ ಬರುತ್ತಿದೆ.

Advertisements

ವಿಷಯ ತಿಳಿಯುತ್ತಿದ್ದಂತೆ ಗ್ರಾಮಸ್ಥರು ಕಾಲುವೆಯ ಉದ್ದಕ್ಕೂ ಹುಡುಕುವ ಪ್ರಯತ್ನ ಮಾಡಿದರೂ ಕೂಡ ಯಾವುದೇ ಸುಳಿವು ಸಿಕ್ಕಿಲ್ಲ. ನಂತರ ಅಗ್ನಿ ಶಾಮಕ ದಳ ಸ್ಥಳಕ್ಕೆ ಆಗಮಿಸಿ ಶೋಧ ಕಾರ್ಯ ನಡೆಸಿದ್ದಾರೆ ಎನ್ನಲಾಗಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧಾರವಾಡ | ಹೆಬ್ಬಳ್ಳಿ ಗ್ರಾಮದಲ್ಲಿ 91 ಪಿಓಪಿ ಗಣೇಶ ವಿಗ್ರಹಗಳ ವಶಕ್ಕೆ ಪಡೆದ ತಪಾಸಣೆ ತಂಡ

ತಾಲೂಕಿನ ಹೆಬ್ಬಳ್ಳಿಯಲ್ಲಿ 91 ಪಿಓಪಿ ಗಣಪತಿಗಳನ್ನು ಜಿಲ್ಲಾಧಿಕಾರಿ ಆದೇಶದಂತೆ ರಚಿಸಿದ ಕಾರ್ಯ...

ಚಿಕ್ಕಮಗಳೂರು l ಪೋಕ್ಸೋ ಪ್ರಕರಣ: ಆರೋಪಿಗಳಿಗೆ ದಂಡ, ತಲಾ ಹತ್ತು ವರ್ಷ ಜೈಲು ಶಿಕ್ಷೆ

ಪೋಕ್ಸೋ ಪ್ರಕರಣದಲ್ಲಿ ಇಬ್ಬರು ಆರೋಪಿಗಳಿಗೆ ತಲಾ ಹತ್ತು ವರ್ಷ ಜೈಲು ಶಿಕ್ಷೆ...

ಮಂಗಳೂರು | ಅಲ್‌ ವಫಾ ಟ್ರಸ್ಟ್‌ನಿಂದ 15 ಜೋಡಿಗಳಿಗೆ ಸರಳ ಸಾಮೂಹಿಕ ವಿವಾಹ

ಮಂಗಳೂರಿನ ಅಲ್ ವಫಾ ಚಾರಿಟೆಬಲ್ ಟ್ರಸ್ಟ್ ಹಮ್ಮಿಕೊಂಡಿದ್ದ 15 ಜೋಡಿಗಳ ಸರಳ...

ಚಿಕ್ಕಮಗಳೂರು l ಶೋ ರೂಮ್ ಸಿಬ್ಬಂದಿಯಿಂದಲೇ ಡೀಸೆಲ್ ಕಳ್ಳತನ

ಶೋ ರೂಂ ಸಿಬ್ಬಂದಿಯೇ ಹೊಸ ವಾಹನದ ಡೀಸೆಲ್‌ ಕಳ್ಳತನ ಮಾಡಿದ ಘಟನೆ...

Download Eedina App Android / iOS

X