ಟಿ20 ಮಹಿಳಾ ವಿಶ್ವಕಪ್ | ಆಸೀಸ್ ವಿರುದ್ಧ ಸೋತ ಭಾರತ; ಸೆಮಿ ಹಾದಿ ಕಠಿಣ

Date:

Advertisements

ಟೀಂ ಇಂಡಿಯಾ ನಾಯಕಿ ಹರ್ಮನ್ ಪ್ರೀತ್ ಕೌರ್ ಅವರ ವೀರೋಚಿತ ಹೋರಾಟದ ಹೊರತಾಗಿಯುೂ ಭಾರತ ತಂಡ ಆಸ್ಟ್ರೇಲಿಯಾ ವಿರುದ್ಧ 9 ರನ್‌ಗಳ ಸೋಲು ಅನುಭವಿಸಿದೆ. ಈ ಮೂಲಕ ಮಹಿಳೆಯರ ಟಿ20 ವಿಶ್ವಕಪ್‌ನ ಸೆಮಿಫೈನಲ್ ಹಾದಿ ಕಠಿಣವಾಗಿದೆ.

ಭಾರತ ತಂಡ ಸೆಮಿಫೈನಲ್ ತಲುಪಬೇಕಾದರೆ ಸೋಮವಾರ ನಡೆಯಲಿರುವ ಎ ಗುಂಪಿನ ಅಂತಿಮ ಲೀಗ್ ಪಂದ್ಯದಲ್ಲಿ ಪಾಕಿಸ್ತಾನ ತಂಡ ನ್ಯೂಜಿಲೆಂಡ್ ತಂಡವನ್ನು ಭಾರೀ ಅಂತರದಿಂದ ಸೋಲಿಸಬೇಕಿದೆ. ಅದೇ ನ್ಯೂಜಿಲೆಂಡ್‌ ಸರಳ ಜಯ ಅಥವಾ ಸಣ್ಣ ಅಂತರದಿಂದ ಸೋತರೂ ಸೆಮಿಫೈನಲ್ ತಲುಪಬಲ್ಲುದು. ಹೀಗಾಗಿ ಭಾರತ ಇದೀಗ ಪಾಕಿಸ್ತಾನ ಮಹಿಳೆಯರು ದೊಡ್ಡ ಅಂತರದಲ್ಲಿ ಗೆಲ್ಲಬೇಕೆಂದು ಪ್ರಾರ್ಥಿಸಬೇಕಿದೆ.

ಭಾನುವಾರ ನಡೆದ ‘ಎ’ ಗುಂಪಿನ ತನ್ನ ನಾಲ್ಕನೇ ಹಾಗೂ ಅಂತಿಮ ಪಂದ್ಯ ಪಂದ್ಯದಲ್ಲಿ ಗೆಲ್ಲಲು ಭಾರತ 152 ಗುರಿ ಪಡೆದಿತ್ತು. ಆದರೆ ನಿಗದಿತ 20 ಓವರ್ ಗಳಲ್ಲಿ ಭಾರತ ತಂಡ 9 ವಿಕೆಟ್‌ಗೆ 142 ರನ್‌ಗಳನ್ನಷ್ಟೇ ಗಳಿಸಲು ಶಕ್ತವಾಯಿತು.

Advertisements

ಶೆಫಾಲಿ ವರ್ಮಾ ಅವರ ಹೊಡೆಬಡಿಯ ಆಟದಿಂದಾಗಿ ಭಾರತ ಉತ್ತಮ ಆರಂಭವನ್ನೇ ಪಡೆದಿತ್ತು. ಕೇವಲ 13 ಎಸೆತಗಳಲ್ಲಿ 20 ರನ್ ಗಳಿಸಿ ಆಸೀಸ್ ಮಹಿಳೆಯರ ಪಾಳಯದಲ್ಲಿ ನಡುಕ ಹುಟ್ಟಿಸಿದ್ದರು. 2 ಬೌಂಡರಿ 1 ಸಿಕ್ಸರ್ ಗಳನ್ನು ಬಾರಿಸಿದ್ದ ಅವರ ವಿಕೆಟ್ ಪತನವಾದೊಡನೆ ಭಾರತದ ಅವನತಿ ಪ್ರಾರಂಭವಾಯಿತು. ಸ್ಮೃತಿ ಮಂದಾನ(6) ಅವರ ಬೆನ್ನಲ್ಲೇ ಪೆವಿಲಿಯನ್ ಸೇರಿಕೊಂಡರು. ಬಳಿಕ ಉತ್ತಮವಾಗಿ ಆಡುತ್ತಿದ್ದ ಜೆಮಿಮಾ ರೋಡ್ರಿಗಸ್ (12) ಔಟಾದೊಡನೆ ತಂಡ ಒತ್ತಡಕ್ಕೆ ಸಿಲುಕಿತು.

ಈ ಸುದ್ದಿ ಓದಿದ್ದೀರಾ? 147 ವರ್ಷಗಳ ಟೆಸ್ಟ್​ ಇತಿಹಾಸದಲ್ಲೇ ದಾಖಲೆ ಸೋಲು ಕಂಡ ಪಾಕ್: 556 ರನ್ ​ಗಳಿಸಿಯೂ ಹೀನಾಯವಾಗಿ ಇಂಗ್ಲೆಂಡ್‌ ವಿರುದ್ಧ ಪರಾಭವ

ಈ ಹಂತದಲ್ಲಿ ನಾಯಕಿ ಹರ್ಮನ್ ಪ್ರೀತ್ ಕೌರ್ (ಅಜೇಯ 54) ಮತ್ತು ದೀಪ್ತಿ ಶರ್ಮಾ(29) ಈ ಕುಸಿತವನ್ನು ತಡೆದು ನಾಲ್ಕನೇ ವಿಕೆಟ್ ಗೆ 63 ರನ್ ಗಳ ಜೊತೆಯಾಟವಾಡಿದರು. ಆದರೆ ದೀಪ್ತಿ ಶರ್ಮಾ ಔಟಾದೊಡನೆ ಮತ್ತೊಮ್ಮೆ ಭಾರತದ ಕುಸಿತ ಪ್ರಾರಂಭವಾಯಿತು. ಹರ್ಮನ್ ಪ್ರೀತ್ ಏಕಾಂಗಿ ಹೋರಾಟ ವ್ಯರ್ಥವಾಯಿತು.

ಇದಕ್ಕೂ ಮೊದಲು ರೇಣುಕಾ ಠಾಕೂರ್‌ ಸಿಂಗ್‌ ಸೇರಿದಂತೆ ಬಿಗುವಿನ ಬೌಲಿಂಗ್‌ ದಾಳಿ ಸಂಘಟಿಸಿದ ಭಾರತ ತಂಡವು ಆಸ್ಪ್ರೇಲಿಯಾ ತಂಡವನ್ನು ಸ್ಪರ್ಧಾತ್ಮಕ ಮೊತ್ತಕ್ಕೆ ಕಟ್ಟಿ ಹಾಕಿತು.

ಶಾರ್ಜಾ ಕ್ರಿಕೆಟ್‌ ಕ್ರೀಡಾಂಗಣದಲ್ಲಿಭಾನುವಾರ ಟಾಸ್‌ ಗೆದ್ದು ಬ್ಯಾಟಿಂಗ್‌ ನಡೆಸಿದ ಆರು ಬಾರಿಯ ಚಾಂಪಿಯನ್‌ ಆಸ್ಪ್ರೇಲಿಯಾ ತಂಡ 20 ಓವರ್‌ಗಳಲ್ಲಿ8 ವಿಕೆಟ್‌ ಕಳೆದುಕೊಂಡು 151 ರನ್‌ ಕಲೆಹಾಕಿತು. 3ನೇ ಓವರ್‌ನಲ್ಲಿಬೆಥ್‌ ಮೂನಿ ಮತ್ತು ಜಾರ್ಜಿಯಾ ವರೆಹ್ಯಾಮ್‌ ಅವರನ್ನು ಔಟ್‌ ಮಾಡಿದ ರೇಣುಕಾ ಭಾರತಕ್ಕೆ ಆರಂಭಿಕ ಮೇಲುಗೈ ತಂದರು. ಆದರೆ ಗ್ರೇಸ್‌ ಹ್ಯಾರಿಸ್‌(40), ತಹಿಲಾ (32) ಮತ್ತು ಎಲಿಸ್‌ ಪೆರ್ರಿ(32*) ಅವರ ಹೋರಾಟದಿಂದ ಆಸ್ಪ್ರೇಲಿಯಾ ಗೌರವಾನ್ವಿತ ಮೊತ್ತ ಕಲೆಹಾಕಿತು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

ಊಹಾಪೋಹಗಳಿಗೆ ತೆರೆ: ಭಾರತ–ಪಾಕ್‌ ಏಷ್ಯಾಕಪ್‌ ಕ್ರಿಕೆಟ್‌ ಪಂದ್ಯ ರದ್ದಾಗುವುದಿಲ್ಲ

ಪಹಲ್ಗಾಮ್‌ ಉಗ್ರ ದಾಳಿಯ ನಂತರ ಭಾರತ–ಪಾಕಿಸ್ತಾನದ ನಡುವಿನ ಬಿಕ್ಕಟ್ಟು ಹೆಚ್ಚಾದ ಹಿನ್ನೆಲೆಯಲ್ಲಿ...

ಕೇರಳ ಭೇಟಿ ರದ್ದುಗೊಳಿಸಿದ ಮೆಸ್ಸಿ ನೇತೃತ್ವದ ಅರ್ಜೆಂಟೀನಾ ತಂಡ

ಲಿಯೊನೆಲ್ ಮೆಸ್ಸಿ ನೇತೃತ್ವದ ಫೀಫಾ ವಿಶ್ವಕಪ್ ವಿಜೇತ ಅರ್ಜೆಂಟೀನಾ ತಂಡವನ್ನು ಕೇರಳಕ್ಕೆ...

Download Eedina App Android / iOS

X