ಬೆಂಗಳೂರು | ರಸ್ತೆ ಅಪಘಾತದಲ್ಲಿ ದಿನಕ್ಕೆ ಇಬ್ಬರು ಬಲಿ

Date:

Advertisements
  • ಸುಮಾರು 40%ದಷ್ಟು ಅಪಘಾತಗಳು ರಾತ್ರಿ ವೇಳೆ ಸಂಭವಿಸಿವೆ
  • ಒಟ್ಟು ಸಾವುಗಳಲ್ಲಿ 20%ರಷ್ಟು ಪಾದಚಾರಿಗಳಾಗಿದ್ದಾರೆ

ಕಳೆದ ಆರು ತಿಂಗಳಿನಿಂದ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ರಸ್ತೆ ಅಪಘಾತದಿಂದ ಪ್ರತಿದಿನ ಸರಾಸರಿ ಇಬ್ಬರು ಪ್ರಾಣ ಕಳೆದುಕೊಂಡಿದ್ದಾರೆ.

ಬೆಂಗಳೂರು ಸಂಚಾರ ಪೊಲೀಸರು (ಬಿಟಿಪಿ) ಬಿಡುಗಡೆ ಮಾಡಿರುವ ಇತ್ತೀಚಿನ ಮಾಹಿತಿಯ ಪ್ರಕಾರ, “ಅಜಾಗರೂಕ ವಾಹನ ಚಾಲನೆ, ಕಳಪೆ ಪಾದಚಾರಿ ಮೂಲಸೌಕರ್ಯ ಹಾಗೂ ಸಂಚಾರ ನಿಯಮಗಳ ಉಲ್ಲಂಘನೆಗಳು ಹೆಚ್ಚುತ್ತಿರುವುದು ಸಾವಿನ ಸಂಖ್ಯೆ ಹೆಚ್ಚಳಕ್ಕೆ ಪ್ರಮುಖ ಕಾರಣವಾಗಿದೆ. ಅಪಘಾತದಿಂದಾಗಿರುವ ಒಟ್ಟು ಸಾವುಗಳಲ್ಲಿ 20%ರಷ್ಟು ಪಾದಚಾರಿಗಳಾಗಿದ್ದಾರೆ. ಇದು ನಗರದಲ್ಲಿನ ಕಳಪೆ ಪಾದಚಾರಿ ಮೂಲಸೌಕರ್ಯವನ್ನು ಸೂಚಿಸುತ್ತದೆ.

“ಸುಮಾರು 40%ರಷ್ಟು ಅಪಘಾತಗಳು ರಾತ್ರಿಯಲ್ಲಿ ಸಂಭವಿಸಿವೆ. ನಿಯಮ ಉಲ್ಲಂಘನೆಗಳು ಹೆಚ್ಚಿವೆ. ಕುಡಿದು ವಾಹನ ಚಲಾಯಿಸುವ ಪ್ರಕರಣಗಳು ಅಪಘಾತಗಳಿಗೆ ಕಾರಣವಾಗುತ್ತವೆ” ಎಂದು ಸಂಚಾರಿ ಪೊಲೀಸರು ಹೇಳಿದ್ದಾರೆ.

Advertisements

“ಕಳೆದ ಆರು ತಿಂಗಳಿನಿಂದ ಬೆಂಗಳೂರಿನ ರಸ್ತೆಗಳಲ್ಲಿ ಪ್ರತಿದಿನ ಸರಾಸರಿ ಇಬ್ಬರು ಪ್ರಾಣ ಕಳೆದುಕೊಂಡಿದ್ದಾರೆ. ದಾಖಲಾದ ಸಾವುನೋವುಗಳಲ್ಲಿ ಶೇ.55 ರಷ್ಟು 19 ರಿಂದ 35 ವಯೋಮಾನದವರಾಗಿದ್ದಾರೆ. ಯುವಕರು ಅತಿವೇಗದ ಚಾಲನೆ ಮತ್ತು ಸಂಚಾರಿ ನಿಯಮಗಳನ್ನು ಉಲ್ಲಂಘಿಸುತ್ತಾರೆ” ಎಂದು ಬಿಟಿಪಿಯ ಅಧಿಕಾರಿಗಳು ಅಭಿಪ್ರಾಯಪಟ್ಟಿದ್ದಾರೆ.

“ರಸ್ತೆ ಅಪಘಾತದಲ್ಲಿ 19-35 ವಯೋಮಾನದವರು ಹೆಚ್ಚು ಬಲಿಯಾಗಿದ್ದಾರೆ. ಏಕೆಂದರೆ, ಅವರು ಅತಿ ವೇಗವಾಗಿ ವಾಹನ ಚಲಾವಣೆ ಮಾಡುತ್ತಾರೆ. ಟ್ರಾಫಿಕ್ ಸಿಗ್ನಲ್‌ ಚಂಪ್‌ ಮಾಡುತ್ತಾರೆ. ವ್ಹೀಲಿಂಗ್‌ನಂತಹ ಅಪಾಯಕಾರಿ ಚಾಲನೆಗಳೂ ಅಪಘಾತಗಳಿಗೆ ಕಾರಣವಾಗಿವೆ” ಎಂದು ವಿಶೇಷ ಆಯುಕ್ತ (ಸಂಚಾರ) ಡಾ. ಎಂ.ಎ ಸಲೀಂ ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಎಟಿಎಂ ಬ್ಯಾಟರಿ ಕಳ್ಳತನ ಮಾಡುತ್ತಿದ್ದ ಇಬ್ಬರ ಬಂಧನ

“ಅಪಘಾತಗಳ ಸಂಖ್ಯೆಯನ್ನು ಕಡಿಮೆ ಮಾಡಲು ಹಲವಾರು ಜಾಗೃತಿ ಅಭಿಯಾನಗಳನ್ನು ಆಯೋಜಿಸಲಾಗುತ್ತಿದೆ”  ಎಂದು ಅವರು ಹೇಳಿದರು.

ಹಿರಿಯ ಬಿಟಿಪಿ ಅಧಿಕಾರಿಗಳ ಪ್ರಕಾರ, “ಜನರು ವಾಹನ ದಟ್ಟಣೆ ಇರುವ ಪ್ರದೇಶಗಳಲ್ಲಿ ರಸ್ತೆ ದಾಟಲು ಪ್ರಯತ್ನಿಸಿದಾಗ ಕೆಲವು ಅಪಘಾತಗಳು ಸಂಭವಿಸುತ್ತವೆ. ಕೆಲವು ಪ್ರದೇಶಗಳಲ್ಲಿ ಸ್ಕೈವಾಕ್‌ಗಳು ಮತ್ತು ಪಾದಚಾರಿ ಅಂಡರ್‌ಪಾಸ್‌ಗಳಿದ್ದರೂ, ಜನರು ಅಂತಹ ಸೌಲಭ್ಯಗಳನ್ನು ಬಳಸುವುದಿಲ್ಲ. ಇದರಿಂದಾಗಿ ಅಪಘಾತಗಳು ಸಂಭವಿಸುತ್ತವೆ” ಎಂದು ತಿಳಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು: ಕೆ ವಿ ಪ್ರಭಾಕರ್

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು. ನೋಟಕ್ಕೆ...

ಬೆಂಗಳೂರು | ಹವಾಮಾನ ಕ್ರಿಯೆಗೆ ಪರಿಣಾಮಕಾರಿ ಕೊಡುಗೆ ನೀಡಲು ಅದರ ಮಹತ್ವ ತಿಳಿಯುವುದು ಅಗತ್ಯ: ಪ್ರೀತಿ ಗೆಹ್ಲೋಟ್

ಹವಾಮಾನ ಕ್ರಿಯೆಗೆ ಪರಿಣಾಮಕಾರಿಯಾಗಿ ಕೊಡುಗೆ ನೀಡಲು, ಮಕ್ಕಳು ಅದರ ಮಹತ್ವ ಮತ್ತು...

ಅರ್ಧದಲ್ಲಿ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಶೀಘ್ರದಲ್ಲೇ ಮುಗಿಸಿ: ಬಿಬಿಎಂಪಿ ಕಮಿಷನರ್ ಮಹೇಶ್ವರ್ ರಾವ್

ಬೆಂಗಳೂರು ನಗರದಲ್ಲಿ ಅರ್ಧದಲ್ಲೇ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಹಾಗೂ ರಸ್ತೆ ಕತ್ತರಿಸಿರುವ...

Download Eedina App Android / iOS

X