ಕಾನೂನು ಕುಣಿಕೆಯಿಂದ ಪಾರಾಗಲು ಖರ್ಗೆ ಕುಟುಂಬ ಜಮೀನು ವಾಪಸ್: ಜೆಡಿಎಸ್‌

Date:

Advertisements

ಕಾನೂನು ಬಾಹಿರವಾಗಿ, ರಾಜಕೀಯ ಪ್ರಭಾವ ಬಳಸಿ ಐದು ಎಕರೆ ಜಮೀನು ಕಬಳಿಸಿದ್ದ ಖರ್ಗೆ ಕುಟುಂಬ ಕಾನೂನು ಕುಣಿಕೆಯಿಂದ ಪಾರಾಗಲು ಈಗ ಜಮೀನು ವಾಪಸ್ ನೀಡಿದೆ ಎಂದು ಜೆಡಿಎಸ್‌ ಟೀಕಿಸಿದೆ.

ಎಕ್ಸ್‌ ತಾಣದಲ್ಲಿ ಈ ಬಗ್ಗೆ ಪೋಸ್ಟ್‌ ಮಾಡಿರುವ ಜೆಡಿಎಸ್‌, “ಈ ಅಕ್ರಮಗಳ ಬಗ್ಗೆ ವಿಪಕ್ಷಗಳು ಧ್ವನಿ ಎತ್ತಿ ದಾಖಲೆಗಳ ಸಮೇತ ರಾಜ್ಯಪಾಲರಿಗೆ ದೂರು ನೀಡಿತ್ತು. ಭಂಡತನದಿಂದ ಸಮರ್ಥನೆ ಮಾಡಿಕೊಳ್ಳುತ್ತಿದ್ದ ಸಚಿವ ಪ್ರಿಯಾಂಕ್‌ ಖರ್ಗೆ ಮತ್ತು ಕುಟುಂಬದವರು ಈಗ ಅಕ್ರಮವಾಗಿ ಕಬಳಿಸಿದ್ದ ಸಿಎ ನಿವೇಶನವನ್ನ ಕೆಐಎಡಿಬಿಗೆ ವಾಪಸ್ ನೀಡಿದ್ದಾರೆ. ಭ್ರಷ್ಟರು ಕಬಳಿಸಿದ್ದು ವಾಪಸ್ ಮಾಡಿದರೇ ಶಿಕ್ಷೆಯಿಂದ ಪಾರಾಗಲು ಸಾಧ್ಯವೇ” ಎಂದು ಪ್ರಶ್ನಿಸಿದೆ.

“ಮುಡಾ ಹಗರಣ ಪ್ರಕರಣದಲ್ಲಿ ಎ1 ಆರೋಪಿಯಾಗಿರುವ ಕಳಂಕಿತ ಸಿಎಂ ಸಿದ್ದರಾಮಯ್ಯ ಕಾನೂನು ಸುರುಳಿ ಬಿಗಿಯಾಗುತ್ತಿದ್ದಂತೆ ಈಗ ಖರ್ಗೆ ಕುಟುಂಬಕ್ಕೂ ಕಾನೂನಿನ ಭಯ ಶುರುವಾಗಿದೆ” ಎಂದಿದೆ.

Advertisements

” ‘ಕೆಟ್ಟ ಮೇಲೆ ಬುದ್ಧಿ ಬಂತು’ ಅಲ್ಲವೇ ಖರ್ಗೆ ಅವರೇ? ಅಡಿಕೆಗೆ ಹೋದ ಮಾನ ಆನೆ ಕೊಟ್ಟರು ಬಾರದು. ಕಳ್ಳ ಕದ್ದ ಮಾಲು ವಾಪಸ್ ಕೊಟ್ಟ ತಕ್ಷಣ ಆತನಿಗೆ ವಿನಾಯಿತಿ ಸಾಧ್ಯವಿಲ್ಲ. ತನಿಖೆ ಎದುರಿಸಲೇಬೇಕು” ಎಂದು ಒತ್ತಾಯಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ದಸರಾ ಉದ್ಘಾಟನೆಗೆ ಸೋನಿಯಾ ಗಾಂಧಿಗೆ ಆಹ್ವಾನ ಸಂಪೂರ್ಣ ಸುಳ್ಳು: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಈ ಬಾರಿಯ ದಸರಾ ಉದ್ಘಾಟನೆಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯನ್ನು ಆಹ್ವಾನಿಸಲಾಗಿದೆ...

BREAKING NEWS | ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್

ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್ ಬಂದಿದೆ ಎಂದು...

Download Eedina App Android / iOS

X