ಶಿವಮೊಗ್ಗ | ದಲಿತ ಮಹಿಳೆಗೆ ಅವಮಾನ: ಬಿಜೆಪಿ ಜಿಲ್ಲಾಧ್ಯಕ್ಷರ ರಾಜೀನಾಮೆಗೆ ಕಾಂಗ್ರೆಸ್ ಮಹಿಳಾ ಘಟಕ ಒತ್ತಾಯ

Date:

Advertisements

ಸಾಗರದ ನಗರಸಭೆಯಲ್ಲಿ ದಲಿತ ಮಹಿಳೆಯನ್ನು ‘ಅಪರಾಧಿ’ ಎಂದು ಅವಮಾನ ಮಾಡಿರುವ ಶಿವಮೊಗ್ಗ ಜಿಲ್ಲಾ ಬಿಜೆಪಿ ಅಧ್ಯಕ್ಷ ಟಿ.ಡಿ.ಮೇಘರಾಜ್ ಅವರು ಕೂಡಲೇ ರಾಜೀನಾಮೆ ನೀಡಬೇಕು. ‌ಇಲ್ಲವಾದಲ್ಲಿ ತೀವ್ರ ಹೋರಾಟ ನಡೆಸಲಾಗುವುದು ಎಂದು ಶಿವಮೊಗ್ಗ ಕಾಂಗ್ರೆಸ್ ಮಹಿಳಾ ಘಟಕ ಎಚ್ಚರಿಕೆ ನೀಡಿದೆ.

ಅಪಮಾನ ಮಾಡಲಾಗಿರುವ ಬಗ್ಗೆ ಜಿಲ್ಲಾ ಕಾಂಗ್ರೆಸ್ ಮಹಿಳೆ ಘಟಕದ ಪದಾಧಿಕಾರಿಗಳು ಇಂದು ಶಿವಮೊಗ್ಗದಲ್ಲಿ ಸುದ್ದಿಗೋಷ್ಠಿ ನಡೆಸಿ ಬಿಜೆಪಿ ಜಿಲ್ಲಾಧ್ಯಕ್ಷರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಜಿಲ್ಲಾ ಕಾಂಗ್ರೆಸ್ ಮಹಿಳೆ ಘಟಕದ ಅಧ್ಯಕ್ಷೆ ಅನಿತಾ ಕುಮಾರಿ ಮಾತನಾಡಿ, ಸಾಗರದ ನಗರ ಸಭೆ ಅಧ್ಯಕ್ಷರ ಸ್ಥಾನವನ್ನು ಸಾಮಾನ್ಯ ಮಹಿಳೆಗೆ ಮೀಸಲಾತಿ ಪ್ರಕಟಿಸಲಾಗಿತ್ತು. ಕಳೆದ ಬಾರಿಯೂ ಸಾಮಾನ್ಯ ಮಹಿಳೆಗೆ ಮೀಸಲಾತಿ ನೀಡಲಾಗಿತ್ತು. ಈ ಬಾರಿಯೂ ಮೀಸಲಾತಿ ಸಾಮಾನ್ಯರಿಗೆ ಪ್ರಕಟಿಸಿದ ಕಾರಣ ಮೀಸಲಾತಿ ಸರಿಯಿಲ್ಲವೆಂದು ಆರೋಪಿಸಿ ನ್ಯಾಯಾಲಯಕ್ಕೆ ಹೋಗಲಾಗಿತ್ತು. ಬಿಸಿಎಂ, ಬಿಸಿಎಂ ಬಿ, ಎಸ್ ಎಸ್ಟಿ ಗೆ ಮೀಸಲಾತಿ ಇದುವರೆಗೂ ಪ್ರಕಟವಾಗದ ಕಾರಣ ಎಸ್‌ಟಿ ಮಹಿಳಾ ಸದಸ್ಯೆ ನ್ಯಾಯಾಲಯಕ್ಕೆ ಹೋಗಿ ಮೀಸಲಾತಿಯನ್ನ ಪ್ರಶ್ನಿಸಿದ್ದರು. ಅ.10 ರಂದು ನಡೆದ ಸಾಗರದ ನಗರ ಸಭೆಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಮೇಘರಾಜ್ ಭಾಗಿಯಾಗಿದ್ದರು. ಲಲಿತಮ್ಮರಿಗೆ ನಿಕೃಷ್ಟವಾಗಿ ಮೇಘರಾಜ್ ಮಾತನಾಡಿದ್ದಾರೆ. ದಲಿತ ಮಹಿಳೆಗೆ ಅವಾಚ್ಯವಾಗಿ ಮಾತನಾಡಿ ಸಭೆಯಿಂದ ಹೊರಹೋಗಿ ಎಂದಿದ್ದಾರೆ ಎಂದು ತಿಳಿಸಿದರು.

Advertisements

ಟಿ.ಡಿ ಮೇಘರಾಜ್ ಕಾನೂನಿನ ಜಡ್ಜಾ? ಸಮಾನತೆಯಲ್ಲಿ ಲಲಿತಮ್ಮ ನ್ಯಾಯಾಲಯಕ್ಕೆ ಹೋದರೆ ನೀವು ಅವಮಾನಿಸುತ್ತೀರಾ ಎಂದು ಸವಾಲು ಎಸೆದ ಅವರು,. ಮಹಿಳೆಯರಿಗೆ ಗೌರವ ಕೊಡುವ ಸಂಸ್ಕೃತಿ ಇಲ್ಲದ ಬಿಜೆಪಿ ನಾಯಕರು, ಯಾವ ಮಹಿಳಾ ಸಬಲೀಕರಣವನ್ನು ಎತ್ತಿ ಹಿಡಿಯುತ್ತಾರೆ ಎಂದು ದೂರಿದರು.

ಲಲಿತಮ್ಮನಿಗೆ ಮಾಡಿರುವ ಅಪಮಾನಕ್ಕೆ ಮೇಘರಾಜ್ ಕ್ಷಮೆ ಕೇಳಬೇಕು. ಮೂರು ಬಾರಿ ಸಾಗರದಲ್ಲಿ ಆಯ್ಕೆಯಾಗಿ ಒಮ್ಮೆ ಅಧ್ಯಕ್ಷರಾಗಿದ್ದಾರೆ. ಮೂರು ಬಾರಿ ಸದಸ್ಯರಾದ ಲಲಿತಮ್ಮರಿಗೆ ಅವಮಾನಿಸಿದ ಮೇಘರಾಜ್ ಜಿಲ್ಲಾ ಬಿಜೆಪಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.

ಒಂದು ವೇಳೆ ಕ್ಷಮೆಯಾಚಿಸದೇ ಇದ್ದರೆ, ಜಿಲ್ಲಾ ಬಿಜೆಪಿ ಕಚೇರಿ ಮುಂದೆ ಪ್ರತಿಭಟನೆ ಮಾಡಲಾಗುವುದು ಎಂದು ಕಾಂಗ್ರೆಸ್ ಮಹಿಳಾ ಘಟಕದ ಪದಾಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಸೆ. 6ಕ್ಕೆ ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ

ಶಿವಮೊಗ್ಗದ ಹಿಂದೂ ಮಹಾಸಭಾ ಗಣಪತಿ ಉತ್ಸವದಲ್ಲಿ ಈ ಬಾರಿ ಏನೆಲ್ಲಾ...

ಬೆಳಗಾವಿ : ಗಾಂಜಾ ಮಾರಾಟ ಮಾಫಿಯಾ 9 ಮಂದಿ ಅರೆಸ್ಟ್ : ರೂ 30 ಲಕ್ಷ ಮೌಲ್ಯದ ಗಾಂಜಾ ವಶ

ಬೆಳಗಾವಿ ನಗರದಲ್ಲಿ ಗಾಂಜಾ ಮಾರಾಟ ಜಾಲ ಬಯಲಾಗಿದ್ದು, ಬೆಳಗಾವಿ ಪೊಲೀಸರು ದೊಡ್ಡ...

ಬಾಗಲಕೋಟೆ | ಬಿಜೆಪಿ ಮತಗಳ್ಳತನ ವಿರುದ್ಧ ವ್ಯಾಪಕ ಹೋರಾಟ: ಮಾಜಿ ಸಚಿವ ವಿನಿಯಕುಮಾರ್

ಬಿಜೆಪಿ ಮತಗಳ್ಳತನ ನಡೆಸಿ ಚುನಾವಣೆ ಅಕ್ರಮ ಎಸಗಿರುವ ಬಗ್ಗೆ ವ್ಯಾಪಕವಾಗಿ ಹೋರಾಟ...

ಶಿವಮೊಗ್ಗ | KSRTC ನಗರ ಸಾರಿಗೆ ಬಸ್ ಮಲವಗೊಪ್ಪದ, ಚೆನ್ನಬಸವೇಶ್ವರ ದೇವಸ್ಥಾನ ಬಳಿ ಕಡ್ಡಾಯ ನಿಲುಗಡೆಗೆ ಆದೇಶ

ಶಿವಮೊಗ್ಗ, ಸಾರ್ವಜಕನಿಕ ಪ್ರಯಾಣಿಕರು/ಶಾಲಾ-ಕಾಲೇಜು ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಶಿವಮೊಗ್ಗ-ಭದ್ರಾವತಿ ಮಾರ್ಗದಲ್ಲಿ ಕಾರ್ಯಾಚರಣೆಯಾಗುವ ನಗರ...

Download Eedina App Android / iOS

X