ಮಹಾರಾಷ್ಟ್ರ | ಮಾದಕ ವಸ್ತು ನೀಡಿ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ; ಐವರ ಬಂಧನ

Date:

Advertisements

ಒಂಬತ್ತು ವರ್ಷದ ಬಾಲಕಿಗೆ 19 ವರ್ಷದ ಅಪರಿಚಿತ ಯುವಕನೊಬ್ಬ ಮಾದಕ ವಸ್ತು ನೀಡಿ, ಅತ್ಯಾಚಾರವೆಸಗಿ, ನಂತರ ಬೀದಿಯಲ್ಲಿ ಬಿಟ್ಟು ಹೋದ ಘಟನೆ ಮಹಾರಾಷ್ಟ್ರದ ಜಲ್ನಾ ಜಿಲ್ಲಾ ಕೇಂದ್ರದಲ್ಲಿ ನಡೆದಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

ಭಾನುವಾರ (ಅ.13) ರಾತ್ರಿ ಚಂದನ್‌ಜಿರಾ ಪ್ರದೇಶದಲ್ಲಿ ಘಟನೆ ನಡೆದಿದ್ದು, ಗಂಭೀರ ಸ್ಥಿತಿಯಲ್ಲಿದ್ದ ಬಾಲಕಿಯನ್ನು ಮೊದಲು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ನಂತರ ಛತ್ರಪತಿ ಸಂಭಾಜಿನಗರದ ಸರ್ಕಾರಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿಸಿದ್ದಾರೆ.

ʼಸಂತ್ರಸ್ತೆ ಬಾಲಕಿ ಅಪಾಯದಿಂದ ಪಾರಾಗಿದ್ದಾಳೆ. ಈ ಸಂಬಂಧ ಐದು ಜನರನ್ನು ಬಂಧಿಸಲಾಗಿದ್ದು, ಅದರಲ್ಲಿಆದಿತ್ಯ ಜಾಧವ್‌ (19) ಎಂಬ ವ್ಯಕ್ತಿ ಕೃತ್ಯದಲ್ಲಿ ಭಾಗಿಯಾಗಿರುವ ಶಂಕೆ ಇದೆʼ ಎಂದು ಪೊಲೀಸ್ ವರಿಷ್ಠಾಧಿಕಾರಿ ಅಜಯ್ ಕುಮಾರ್ ಬನ್ಸಾಲ್ ತಿಳಿಸಿದ್ದಾರೆ.

Advertisements

ʼಬಾಲಕಿ ಮನೆಯಲ್ಲಿ ಒಂಟಿಯಾಗಿದ್ದಾಗ ಆಕೆಯನ್ನು ಮನೆಯಿಂದ ಕರೆದೊಯ್ದು ಮಾದಕ ದ್ರವ್ಯ ನೀಡಿ ಅತ್ಯಾಚಾರ ಎಸಗಲಾಗಿದೆ. ಬಳಿಕ ಆಕೆಯನ್ನು ಕರೆತಂದು ಬೀದಿಯಲ್ಲಿ ಬಿಟ್ಟು ಹೋಗಿದ್ದಾನೆ. ಬಾಲಕಿ ತನ್ನ ತಾಯಿಯೊಂದಿಗೆ ವಾಸಿಸುತ್ತಿದ್ದಳು. ಆಕೆ ಮನೆಯಿಂದ ಹೊರಗೆ ಹೋಗಿದ್ದಾಗ ಘಟನೆ ನಡೆದಿದ್ದು, ಮನೆಗೆ ಹಿಂದಿರುಗಿದಾಗ ಮಗಳು ಕಂಡಿಲ್ಲ. ತೀವ್ರ ಹುಡುಕಾಟದ ನಂತರ ಸಮೀಪದ ಬೀದಿಯಲ್ಲಿ ಬಾಲಕಿ ಪತ್ತೆಯಾಗಿದ್ದಾಳೆ.

ಘಟನೆ ಕುರಿತು ಆಕ್ರೋಶಗೊಂಡ ಸ್ಥಳೀಯರು ಛತ್ರಪತಿ ಸಂಭಾಜಿನಗರ ರಸ್ತೆಯಲ್ಲಿ ರಸ್ತೆ ತಡೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಹೆಣ್ಣಿನ ಮೇಲಿನ ಶೋಷಣೆ ತಡೆಯುವಲ್ಲಿ ಕುಟುಂಬಗಳಿಗಿದೆ ಪ್ರಧಾನ ಪಾತ್ರ!

ಈ ಕುರಿತು ಸಂತ್ರಸ್ತೆ ತಾಯಿ ನೀಡಿದ ದೂರಿನ ಅನ್ವಯ ಚಂದನ್‌ಜಿರಾ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

Download Eedina App Android / iOS

X