ಕೆನಡಾದ 6 ರಾಜತಾಂತ್ರಿಕರನ್ನು ಉಚ್ಚಾಟಿಸಿದ ಭಾರತ

Date:

Advertisements

ಖಲಿಸ್ತಾನಿ ಉಗ್ರ ಹರ್ದೀಪ್‌ ಸಿಂಗ್‌ ನಿಜ್ಜಾರ್‌ ಹತ್ಯೆಯಲ್ಲಿ ಭಾರತೀಯ ರಾಯಭಾರಿಯ ಪಾತ್ರವಿದೆ ಎಂದು ಕೆನಡಾ ಆರೋಪಿಸಿದ ಬೆನ್ನಲ್ಲೇ ದೇಶದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಕೆನಡಾದ 6 ಮಂದಿ ರಾಜತಾಂತ್ರಿಕರನ್ನು ಭಾರತ ಉಚ್ಚಾಟಿಸಿದೆ. ಅ.19ರೊಳಗೆ ದೇಶದಿಂದ ನಿರ್ಗಮಿಸುವಂತೆ ಅವರಿಗೆ ಸೂಚಿಸಿದೆ.

ಕೆನಡಾ ರಾಯಭಾರಿ ಕಚೇರಿಯ ಚಾರ್ಜ್ ಡಿ ಅಫೇರ್ಸ್ ಸ್ಟಿವರ್ಟ್ ವ್ಹೀಲರ್, ಉಪ ರಾಯಭಾರಿ ಪ್ಯಾಟ್ರಿಕ್ ಹೆಬರ್ಟ್, ಪ್ರಥಮ ಕಾರ್ಯದರ್ಶಿಗಳಾದ ಮಾರೀ ಕ್ಯಾಥರಿನ್ ಜೊಲಿ, ಇಯಾನ್ ರಾಸ್ ಡೇವಿಡ್, ಆ್ಯಡಂ ಜೇಮ್ಸ್ ಚಿಪ್ಕಾ ಮತ್ತು ಪೌಲಾ ಒರ್ಜುವೇಲಾ ಉಚ್ಛಾಟಿತ ರಾಜತಾಂತ್ರಿಕರಾಗಿದ್ದಾರೆ.

ಕಳೆದ ವರ್ಷದ ಸೆಪ್ಟೆಂಬರ್‌ನಲ್ಲಿ ಸುರ್ರೆ ನಗರದ ಗುರುದ್ವಾರದ ಬಳಿ ಖಲಿಸ್ತಾನಿ ಉಗ್ರ ನಿಜ್ಜಾರ್‌ ಆಗುಂತಕರ ಗುಂಡೇಟಿಗೆ ಬಲಿಯಾಗಿದ್ದ. ಕೃತ್ಯದಲ್ಲಿ ಭಾರತದ ಪಾತ್ರವಿದೆ ಎಂಬ ಕೆನಡಾ ಆರೋಪ ಮಾಡಿದ ಬಳಿಕ ಉಭಯ ದೇಶಗಳ ನಡುವೆ ರಾಜತಾಂತ್ರಿಕ ಬಿಕ್ಕಟ್ಟು ಉಂಟಾಗಿತ್ತು. ಸರಿಯಾಗಿ ಒಂದು ವರ್ಷದ ಬಳಿಕ ಪ್ರಕರಣಕ್ಕೆ ಮತ್ತೆ ಜೀವ ನೀಡಿರುವ ಕೆನಡಾ ಸರ್ಕಾರ, ಹತ್ಯೆಯ ಹಿಂದೆ ಭಾರತೀಯ ರಾಯಭಾರಿ ಸಂಜಯ್‌ಕುಮಾರ್‌ ವರ್ಮಾ ಅವರ ಪಾತ್ರವಿದ್ದು, ಅವರನ್ನು ತನಿಖೆಗೆ ಒಳಪಡಿಸಬೇಕು ಎಂದು ಹೇಳಿರುವುದು ಭಾರತದ ಆಕ್ರೋಶಕ್ಕೆ ಕಾರಣವಾಗಿದೆ.

Advertisements

ಈ ಸುದ್ದಿ ಓದಿದ್ದೀರಾ? ದಕ್ಷಿಣ ಕೊರಿಯಾದ ಲೇಖಕಿ ಹಾನ್ ಕಾಂಗ್‌ಗೆ ಸಾಹಿತ್ಯ ನೊಬೆಲ್ ಪ್ರಶಸ್ತಿ

ಕೆನಡಾ ಸರ್ಕಾರದ ನಡೆಗೆ ಸೋಮವಾರ ತೀಕ್ಷ್ಣ ಪ್ರತಿಕ್ರಿಯೆ ನೀಡಿರುವ ವಿದೇಶಾಂಗ ವ್ಯವಹಾರಗಳ ಸಚಿವಾಲಯ,ಭಾರತೀಯ ಹಿರಿಯ ರಾಜತಾಂತ್ರಿಕ ಅಧಿಕಾರ ವಿರುದ್ಧ ಆರೋಪ ಅಸಂಬದ್ಧ ಎಂದು ತಳ್ಳಿ ಹಾಕಿದೆ. ಹಾಗೆಯೇ ಭಾರತೀಯ ಹೈಕಮಿಷನರ್‌ ಮತ್ತು ಇತರ ರಾಜತಾಂತ್ರಿಕ ಅಧಿಕಾರಿಗಳನ್ನು ತನಿಖೆಯ ವ್ಯಾಪ್ತಿಗೆ ತರಬೇಕು ಎಂಬ ಕೆನಡಾ ಮನವಿಯನ್ನು ತಿರಸ್ಕರಿಸಿದೆ.

ನಿಜ್ಜಾರ್‌ ಹತ್ಯೆಯಲ್ಲಿ ಭಾರತದ ಪಾತ್ರ ಎಳ್ಳಷ್ಟೂ ಇಲ್ಲ. ಕಾನೂನುಬಾಹಿರವಾಗಿ ಕೆಲವು ಕ್ರಿಮಿನಲ್‌ಗಳಿಗೆ ಕೆನಡಾ ಸರ್ಕಾರ ಪೌರತ್ವ ನೀಡಿದೆ. ಪ್ರತ್ಯೇಕತಾವಾದಿಗಳ ವಿರುದ್ಧ ಕಾನೂನು ಕ್ರಮ ಜರುಗಿಸಿಲ್ಲ. ಭಾರತದ ಅತೀ ಮುಣ್ಯ ಅಪರಾಧಿಗಳನ್ನು ಹಸ್ತಾಂತರಿಸುವ ಮನವಿಗೂ ಸ್ಪಂದಿಸದೆ ಪ್ರಧಾನಿ ಜಸ್ಟಿನ್‌ ಟ್ರುಡೊ ಸರ್ಕಾರ ಆಶ್ರಯ ನೀಡಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಿರುಗೇಟು ನೀಡಿದೆ.

ಸಂಜಯ್‌ಕುಮಾರ್‌ ವರ್ಮಾ ಭಾರತ ಸರ್ಕಾರದ ಹಿರಿಯ ರಾಜತಾಂತ್ರಿಕ ಅಧಿಕಾರಿ. ಕಳೆದ 36 ವರ್ಷಗಳಿಂದ ವಿದೇಶಾಂಗ ಇಲಾಖೆಯಲ್ಲಿಕೆಲಸ ನಿರ್ವಹಿಸುತ್ತಿದ್ದಾರೆ. ಜಪಾನ್‌, ಸುಡಾನ್‌, ಟರ್ಕಿ, ವಿಯೆಟ್ನಾಂ, ಚೀನಾದಲ್ಲಿ ರಾಯಭಾರಿಯಾಗಿ ಕರ್ತವ್ಯ ನಿರ್ವಹಿಸಿದ್ದಾರೆ. ಸದ್ಯ ಕೆನಡಾದಲ್ಲಿ ಭಾರತೀಯ ರಾಯಭಾರಿಯಾಗಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಿಂಸಾಚಾರ ಪ್ರಕರಣ: ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್‌ಗೆ ಜಾಮೀನು

ಪಾಕಿಸ್ತಾನದ ಮಾಜಿ ಪ್ರಧಾನಮಂತ್ರಿ ಇಮ್ರಾನ್ ಖಾನ್‌ಗೆ ಮೇ 9, 2023ರ ಹಿಂಸಾಚಾರ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಅಮೆರಿಕದ ‘ಅಕ್ಕರೆಯ ನ್ಯಾಯಾಧೀಶ’ ಫ್ರಾಂಕ್ ಕ್ಯಾಪ್ರಿಯೊ ನಿಧನ

ರೋಡ್ ಐಲ್ಯಾಂಡ್‌ನ ನಿವೃತ್ತ ಮುನಿಸಿಪಲ್ ನ್ಯಾಯಾಧೀಶರಾಗಿದ್ದ, ಸಾಮಾಜಿಕ ಜಾಲತಾಣಗಳಲ್ಲಿ 'ಅಕ್ಕರೆಯ ನ್ಯಾಯಾಧೀಶ'...

Download Eedina App Android / iOS

X