ತುರುವೇಕೆರೆ | ಇವನಾರವ ಎನ್ನದೇ ಇವ ನಮ್ಮವ ಎನ್ನುವಂತೆ ವೀರಶೈವ ಲಿಂಗಾಯಿತ ಸಮಾಜ ಬಾಳಬೇಕಿದೆ : ಕೇಂದ್ರ ಸಚಿವ ವಿ. ಸೋಮಣ್ಣ

Date:

Advertisements

ಬುದ್ದ, ಬಸವವಣ್ಣ, ಅಂಬೇಡ್ಕರ್ ಇಡೀ ವಿಶ್ವದ ಭೂಪಟದಲ್ಲಿ ದೊಡ್ಡ ಸಂಪತ್ತು ಎಂದು ಕೇಂದ್ರ ರೈಲ್ವೇ ಹಾಗೂ ಜಲಶಕ್ತಿ ಸಚಿವ ವಿ.ಸೋಮಣ್ಣ ತಿಳಿಸಿದರು.

ತುರುವೇಕೆರೆ ಪಟ್ಟಣದ ಸಿದ್ದರಾಮೇಶ್ವರ ಸಮುದಾಯ ಭವನದಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯಿತ ಮಹಾಸಭಾದ ತಾಲ್ಲೂಕು ಘಟಕ, ಮಹಿಳಾ ಮತ್ತು ಯುವ ಘಟಕದ ಹಾಗೂ ವೀರಶೈವ ಲಿಂಗಾಯಿತ ನೌಕರರ ಕ್ಷೇಮಾಭಿವೃದ್ದಿ ಸಂಘದ ವತಿಯಿಂದ ಹಮ್ಮಿಕೊಂಡಿದ್ದ ವಿಶ್ವಗುರು ಶ್ರೀ ಬಸವೇಶ್ವರ ಜಯಂತಿ, ಅಭಿನಂದನಾ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಮಾತನಾಡಿದ ಅವರು, 12 ನೇ ಶತಮಾನದಲ್ಲಿಯೇ ಅನುಭವ ಮಂಟಪವನ್ನು ನಿರ್ಮಿಸಿದ್ದ ಬಸವಣ್ಣರನ್ನು ಇಂದು ವಿಶ್ವವೇ ಮೆಚ್ಚದೆ. ಬಸವಣ್ಣರು ಹಾಕಿಕೊಟ್ಟ ಮಾರ್ಗದಲ್ಲಿ ಅವರ ವಿಚಾರಧಾರೆಗಳು, ಆದರ್ಶಗಳನ್ನು ಎಲ್ಲರೂ ಮೈಗೂಡಿಸಿಕೊಂಡು ಜೀವನ ನಡೆಸಬೇಕಿದೆ. ಇವನ್ಯಾರವ ಇವನಾರವ ಎನ್ನದೇ ಇವ ನಮ್ಮವ ಎನ್ನುವಂತೆ ವೀರಶೈವ ಲಿಂಗಾಯಿತ ಸಮಾಜ ಬಾಳಬೇಕಿದೆ. ಬೇರೆಯವರನ್ನು ಬಹಳ ಗೌರವ, ಪ್ರೀತಿ ವಿಶ್ವಾಸದಿಂದ ಕಾಣುವ ವೀರಶೈವ ಲಿಂಗಾಯಿತ ಸಮಾಜ ಸಣ್ಣ ಪುಟ್ಟ ತಪ್ಪುಗಳಿಂದ ಎರಡು ಮೂರು ಗುಂಪುಗಳಾಗುತ್ತಿದೆ. ಇದನ್ನು ಬಿಡಬೇಕು ಎಲ್ಲರೂ ಒಗ್ಗಾಟ್ಟಾಗಿ ಸಮಾಜ ಕಟ್ಟುವ ಕೆಲಸವನ್ನು ಮಾಡಬೇಕು ಎಂದರು.

ಬಸವಣ್ಣ ಕೇವಲ ವೀರಶೈವ ಲಿಂಗಾಯಿತ ಸಮಾಜಕ್ಕೆ ಮಾತ್ರ ಸೀಮಿತರಾಗಿಲ್ಲ. ಪ್ರತಿಭಾ ಪುರಸ್ಕಾರ ಕೇವಲ ಲಿಂಗಾಯಿತ ಸಮಾಜಕ್ಕೆ ಮೀಸಲು ಮಾಡಬೇಡಿ 12 ನೇ ಶತಮಾನದಲ್ಲಿಯೇ ಜಾತಿಯತೆಯನ್ನು ತೊಡೆದು ಹಾಕಿ ಸಮಾನತೆ ಸಾರಿದ ಮಹಾನ್ ಪುರುಷರು ಅವರ ಆಶಯದಂತೆ ಮುಂದಿನ ದಿನಗಳಲ್ಲಿ ಎಲ್ಲ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗುರುತಿಸಿ ಪ್ರತಿಭಾ ಪುರಸ್ಕಾರ ಮಾಡಿ ನಾನು ಸಹ ಸಹಕಾರ ನೀಡುತ್ತೇನೆ ಎಂದು ಭರವಸೆ ನೀಡಿದರು.

Advertisements

ಜಿಲ್ಲೆಯಲ್ಲಿಯೇ ತುರುವೇಕೆರೆ ಕ್ಷೇತ್ರದಲ್ಲಿ ಅತ್ಯಧಿಕ ಮತಗಳು ಸಂದಾಯವಾಗಿದೆ. ಸಂಸದನಾಗಿ ಆಯ್ಕೆಯಾಗಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಮಾಜಿ ಪ್ರಧಾನಿ ದೇವೇಗೌಡರ ಆಶೀರ್ವಾದದಿಂದ ಕೇಂದ್ರದ ಮಂತ್ರಿಯಾಗುವ ಅವಕಾಶ ಸಿಕ್ಕಿದೆ. ಮಂತ್ರಿಯಾಗಿ 4 ತಿಂಗಳಲ್ಲಿ ಕೆಲವು ಅಭಿವೃದ್ದಿ ಕೆಲಸಗಳನ್ನು ಮಾಡಿದ್ದೇನೆ. ನಿಮ್ಮ ನಿರೀಕ್ಷೆಯಂತೆ ಇನ್ನು ಹೆಚ್ಚಿನ ಅಭಿವೃದ್ದಿ ಮಾಡುತ್ತೇನೆ. ನಿಮ್ಮೆಲ್ಲರ ಆಶೀರ್ವಾದವಿರಲಿ ಎಂದು ವಿ.ಸೋಮಣ್ಣ ಹೇಳಿದರು.

ಶಾಸಕ ಎಂ.ಟಿ.ಕೃಷ್ಣಪ್ಪ ಮಾತನಾಡಿ ಸಚಿವ ವಿ. ಸೋಮಣ್ಣ ಉತ್ತಮ ಕೆಲಸಗಾರರು. ಅಭಿವೃದ್ದಿ ಬಗ್ಗೆ ಸದಾ ಚಿಂತನೆ ನಡೆಸುವವರು. ಲೋಕಸಬಾ ಚುನಾವಣೆಯಲ್ಲಿ ಎನ್.ಡಿ.ಎ ಅಭ್ಯರ್ಥಿಯಾಗಿದ್ದಾಗ ವಿರೋಧ ಪಕ್ಷದವರು ಹೊರಗಿನವರು ಎಂದು ಭಾಷಣ ಮಾಡುತ್ತಿದ್ದರು. ನಾನು ಅಧಿಕ ಮತಗಳಿಂದ ಗೆಲವು ಸಾಧಿಸುತ್ತೀರಿ ಎಂದು ಅಂದೇ ಅವರಿಗೆ ಭರವಸೆ ನೀಡಿದ್ದೆ. ಅದರಂತೆ 1 ಲಕ್ಷದ 73 ಸಾವಿರ ಮತಗಳ ಅಂತರದಿಂದ ಗೆಲವು ಸಾಧಿಸಿದರು. ನಿಮ್ಮಗಳ ಮತಗಳಿಗೆ ಮೌಲ್ಯ ಬಂದಿದೆ. ಸೋಮಣ್ಣ ಅದೃಷ್ಟವಂತರು. ವಿಧಾನ ಸಭೆಯಲ್ಲಿ ಎರಡು ಕಡೆ ಸೋತಿದ್ದರು. ಜಿಲ್ಲೆಯಿಂದ ಸಂಸದರಾಗಿ ಆಯ್ಕೆಯಾಗಿ ಮೊದಲ ಬಾರಿಗೆ ಕೇಂದ್ರ ಸಚಿವರಾಗಿದ್ದಾರೆ. ಜಿಲ್ಲೆಯನ್ನು ಹೆಚ್ಚಿನ ಅಭಿವೃದ್ದಿ ಮಾಡಲಿ ಎಂದು ಹಾರೈಸಿದರು.

ಕೇಂದ್ರ ಸಚಿವ ವಿ.ಸೋಮಣ್ಣ ಕಾರ್ಯಕ್ರಮಕ್ಕೆ ಆಗಮಿಸಲು ಸುಮಾರು ಎರಡು ಗಂಟೆ ತಡವಾಗಿದ್ದರಿಂದ ವೇದಿಕೆಯಲ್ಲಿ ಹಲವರು ಬಸವಣ್ಣರ ವಚನಗಳನ್ನು ಹಾಡಿ ರಂಜಿಸಿದರೆ. ಶಾಸಕ ಎಂ.ಟಿ.ಕೃಷ್ಣಪ್ಪ ಮೈಕ್ ಹಿಡಿದು ಚನ್ನಪ್ಪ ಚನ್ನೇಗೌಡ ಎಂಬ ಜಾನಪದ ಹಾಡು ಹಾಡಿ ಜನರನ್ನು ರಂಜಿಸಿ ಚಪ್ಪಾಳೆ ಗಿಟ್ಟಿಸಿದರು.

ಈ ಸಂಧರ್ಭದಲ್ಲಿ ಕೇಂದ್ರ ಸಚಿವ ವಿ.ಸೋಮಣ್ಣ ಹಾಗೂ ಮಾಜಿ ಸಂಸದ ಜಿ.ಎಸ್.ಬಸವರಾಜುರನ್ನು ಸನ್ಮಾನಿಸಿ ಅಭಿನಂದಿಸಲಾಯಿತು.

ಸಮಾಜದ ಪ್ರತಿಭಾವಂತ ವಿದ್ಯಾರ್ಥೀ ಹಾಗೂ ಪೋಷಕರನ್ನು ಅಭಿನಂದಿಸಲಾಯಿತು.

ಕಾರ್ಯಕ್ರಮದ ದಿವ್ಯ ಸಾನಿದ್ಯ ವಹಿಸಿದ್ದ ಗೋಡೆಕೆರೆ ಸಂಸ್ಥಾನ ಮಠದ ಚಿರಪಟ್ಟಾದ್ಯಕ್ಷರಾದ ಮೃತ್ಯಂಜಯದೇಶಿಕೇಂದ್ರ ಸ್ವಾಮೀಜಿ, ಕಾಡಸಿದ್ದೇಶ್ವರ ಮಠದ ಕರಿವೃಷಭದೇಶಿಕೇಂದ್ರ ಶಿವಯೋಗಿಶ್ವರ ಮಹಾಸ್ವಾಮಿಗಳು ಆಶೀರ್ವಾದ ನೀಡಿದರು.

ಅಧ್ಯಕ್ಷತೆ ವಹಿಸಿದ್ದ ಅಖಿಲ ಭಾರತ ವೀರಶೈವ ಲಿಂಗಾಯಿತ ಮಹಾಸಭಾದ ತಾಲೂಕು ಅಧ್ಯಕ್ಷ ಎಸ್.ಎಂ. ಕುಮಾರಸ್ವಾಮಿ ಪ್ರಸ್ತಾವಿಕ ನುಡಿಗಳನ್ನಾಡಿದರು. ಮಾಜಿ ಶಾಸಕರಾದ ಹೆಚ್.ಬಿ.ನಂಜೇಗೌಡ, ಎಂ.ಡಿ.ಲಕ್ಷ್ಮೀ ನಾರಾಯಣ್, ತಹಶೀಲ್ದಾರ್ ಎ.ಎನ್. ಕುಂ.ಇ ಅಹಮದ್, ಬಿಇಓ ಸೋಮಶೇಖರ್, ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಆಶಾ ರಾಜಶೇಖರ್, ಸದಸ್ಯ ಯಜಮಾನ್ ಮಹೇಶ್, ನೊಳಂಬ ಲಿಂಗಾಯಿತ ಸಂಘದ ನಿರ್ದೇಶಕ ಎಂ.ದೇವರಾಜು, ವೀರಶೈವ ಲಿಂಗಾಯಿತ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ನಟರಾಜ್ ಸಾಗರನಹಳ್ಳಿ, ಜಿಲ್ಲಾಧ್ಯಕ್ಷ ಡಾ.ಪರಮೇಶ್, ತಾಲೂಕು ಯುವ ಘಟಕದ ಅಧ್ಯಕ್ಷ ಎನ್. ಯೋಗೀಶ್, ಮಹಿಳಾ ಘಟಕದ ಅಧ್ಯಕ್ಷೆ ಪುಷ್ಪಾವತಿ, ನೌಕರರ ಸಂಘದ ಜಿಲ್ಲಾಧ್ಯಕ್ಷ ಉಮೇಶ್, ಸಮಾಜ ಮುಖಂಡರಾದ ಉಮೇಶ್, ಷಣ್ಮುಕಪ್ಪ, ಯೋಗಾನಂದ್, ವಿಜಯಕುಮಾರ್, ಕೈಲಾಶ್, ಪರಶಿವಮೂರ್ತಿ, ಗುರುರಾಜ್ ಕಾರ್ಯದರ್ಶಿ ಶಿವಾನಂದಯ್ಯ ಖಜಾಂಚಿ ಸುರೇಶ್, ಉಪನ್ಯಾಸಕಿ ರೂಪಶ್ರೀ ಸೇರಿದಂತೆ ಇದ್ದರು.

ವರದಿ – ನಾಗಭೂಷಣ್ ತುರುವೇಕೆರೆ

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರು | ನ್ಯಾಯಬೆಲೆ ಅಂಗಡಿಯಲ್ಲಿ ‘ಗೋಣಿಚೀಲ’ಕ್ಕಾಗಿ ಜಗಳ: ಮಹಿಳೆಯ ವಿಡಿಯೋ ಮಾಡಿ ತೇಜೋವಧೆಗೆ ಯತ್ನ!

ನ್ಯಾಯಬೆಲೆ ಅಂಗಡಿಯಲ್ಲಿ 'ಗೋಣಿಚೀಲ' ನೀಡುವಂತೆ ಪಟ್ಟು ಹಿಡಿದದ್ದಲ್ಲದೇ, ಗ್ರಾಹಕನೋರ್ವ ನ್ಯಾಯಬೆಲೆ ಅಂಗಡಿಯವರ...

ಮೈಸೂರು | ಜಿ ಟಿ ದೇವೇಗೌಡರ ದಲಿತ ವಿರೋಧಿ ಹೇಳಿಕೆ ಖಂಡಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಮೈಸೂರು ವಿಶ್ವವಿದ್ಯಾನಿಲಯದ ಸಂಶೋಧಕರ ಸಂಘ ಹಾಗೂ ದಲಿತ ವಿದ್ಯಾರ್ಥಿ ಒಕ್ಕೂಟದ ವಿದ್ಯಾರ್ಥಿಗಳು...

ಹಾವೇರಿ | ಗಣೇಶ ಚತುರ್ಥಿ ಪ್ರಯುಕ್ತ 265 ಹೆಚ್ಚುವರಿ ಸಾರಿಗೆ ಸೌಲಭ್ಯ

ಚತುರ್ಥಿಯ ಪ್ರಯುಕ್ತ ಸಾರ್ವಜನಿಕರು ತಮ್ಮ ಸ್ವಂತ ಊರುಗಳಿಗೆ ತೆರಳಲು ಅನುಕೂಲವಾಗುವಂತೆ ವಾಯವ್ಯ...

ಗದಗ | ಆಗಸ್ಟ್ 25ಕ್ಕೆ ಲೋಕಾಯುಕ್ತ ಜನ ಸಂಪರ್ಕ ಸಭೆ

ಸಾರ್ವಜನಿಕ ಕುಂದು-ಕೊರತೆಗಳ ಅಹವಾಲು ಸ್ವೀಕರಿಸಲು ಆಗಸ್ಟ್ 25 ಸೋಮವಾರದಂದು  ಗದಗ ಶಿರಹಟ್ಟಿ...

Download Eedina App Android / iOS

X