ಶಿವಮೊಗ್ಗ | ಮಲೆನಾಡಿನಲ್ಲೇ ಕುಡಿಯುವ ನೀರಿಗೆ ಹಾಹಾಕಾರ

Date:

Advertisements

ರಾಜ್ಯದ ನಾನಾ ಭಾಗಗಳಲ್ಲಿ ಅಕಾಲಿಕ ಮಳೆ ಸುರಿದು ಜನಜೀವನ ಅಸ್ಥವ್ಯಸ್ಥವಾಗುತ್ತಿದೆ. ಇಂತಹ ಸಂದರ್ಭದಲ್ಲಿ, ಬೇಸಿಗೆಯಲ್ಲೂ ತಂಪಾಗಿರುವ ಮಲೆನಾಡು ಪ್ರದೇಶದಲ್ಲಿಯೇ ನೀರಿನ ಸಮಸ್ಯೆ ಎದುರಾಗಿದೆ. ಶಿವಮೊಗ್ಗ ಜಿಲ್ಲೆಯ ಹಲವಾರು ಹಳ್ಳಿಗಳ ಜನರು ಕುಡಿಯುವ ನೀರಿಲ್ಲದೆ, ನೀರಿಗಾಗಿ ಪರಿತಪಿಸುತ್ತಿದ್ದಾರೆ.

ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನಲ್ಲಿ ಹರಿಯುವ ತುಂಗಾ ನದಿ ಬತ್ತಿ ಹೋಗಿದೆ. ನದಿಯಲ್ಲಿ ನೀರಿಲ್ಲದ ಕಾರಣ, ತಾಲೂಕಿನ ಸುಮಾರು 95 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಿದೆ. ಹಲವು ಗ್ರಾಮ ಪಂಚಾಯತಿಗಳು ತಮ್ಮ ವ್ಯಾಪ್ತಿಯಲ್ಲಿರುವ ಗ್ರಾಮಗಳಿಗೆ ಟ್ಯಾಂಕರ್ ಮೂಲಕ ನೀರು ಪೂರೈಕೆ ಮಾಡುತ್ತಿವೆ.

ಪ್ರತಿ ಬೇಸಿಗೆಯಲ್ಲೂ ನದಿ ನೀರು ಕಡಿಮೆಯಾಗುತ್ತದೆ. ಆದರೆ, ಆ ಸಮಯದಲ್ಲೂ ಆಗಾಗ್ಗೆ ಸುರಿಯುವ ಅಕಾಲಿಕ ಮಳೆಯಿಂದ ನದಿಯಲ್ಲಿ ನೀರು ಇರುತ್ತಿತ್ತು. ಈ ಬಾರಿ ಬೇಸಿಗೆ ಹೆಚ್ಚಾಗಿದೆ. ಮಳೆ ಸುರಿದಿಲ್ಲ. ಪರಿಣಾಮ ನದಿ ನೀರು ಸಂಪರ್ಣ ಖಾಲಿಯಾಗಿದೆ. ಜನರಿಗ, ಜಾನುವಾರುಗಳಿಗೆ, ಕಾಡು ಪ್ರಾಣಿಗಳಿಗೂ ನೀರಿಲ್ಲದ ಪರಿಸ್ಥಿತಿ ಎದುರಾಗಿದೆ.

Advertisements

ಈ ಸುದ್ದಿ ಓದಿದ್ದೀರಾ?: ಬೆಂಗಳೂರು | ರಸ್ತೆ ಅಪಘಾತದಲ್ಲಿ ನಿತ್ಯ ಇಬ್ಬರು ಬಲಿ

ನೀರಿನ ಸಮಸ್ಯೆ ಬಗ್ಗೆ ಮಾತನಾಡಿರುವ ತಾಲೂಕು ಪಂಚಾಯತಿ ಮುಖ್ಯಾಧಿಕಾರಿ ಎನ್ ಶೈಲಾ, “ಕಳೆದ 10 ವರ್ಷಗಳಲ್ಲಿ ಮೊದಲ ಬಾರಿಗೆ ನೀರಿನ ಅಭಾವ ಸೃಷ್ಠಿಯಾಗಿದೆ. ಶಿವಮೊಗ್ಗ ನಗರದಲ್ಲಿ ಮಳೆ ಸುರಿಯುತ್ತಿದೆ. ಆದರೆ, ತೀರ್ಥಹಳ್ಳಿ ತಾಲೂಕಿನಲ್ಲಿ ಮಳೆಯಾಗಿಲ್ಲ. ಮಳೆಯಾಗದಿದ್ದರೆ, ನೀರಿನ ಸಮಸ್ಯೆ ಮತ್ತಷ್ಟು ಹೆಚ್ಚಲಿದೆ. ಸದ್ಯ ಟ್ಯಾಂಕರ್ ಮೂಲಕ ನೀರು ಪೂರೈಸುತ್ತಿದ್ದೇವೆ” ಎಂದು ಹೇಳಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಮತ್ತೆ ಸದ್ದು ಮಾಡುತ್ತಿದೆ ವಾಹನಗಳ ಕರ್ಕಶ ಸೈಲೆಂಸರ್ ; ಕ್ರಮ ಕೈಗೊಳ್ಳುವರೆ ಟ್ರಾಫಿಕ್ ಪೊಲೀಸ್?

ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ...

ಕೋಲಾರ | ಎಫ್ಆರ್‌ಎಸ್ ನಿಲ್ಲಿಸುವಂತೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

ಬೀದರ್‌ | ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ : ಎರಡು ದಿನ ರಾಷ್ಟ್ರೀಯ ವಿಚಾರ ಸಂಕಿರಣ

ಭಾಲ್ಕಿ ಹಿರೇಮಠ ಸಂಸ್ಥಾನದ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ ...

ಶಿರಸಿ | NWKRTC ವತಿಯಿಂದ ಅಪ್ರೆಂಟಿಸ್ ಹುದ್ದೆಗಳಿಗೆ WALK-IN-INTERVIEW

ಕರ್ನಾಟಕ ರಾಜ್ಯ ವಾಯುವ್ಯ ಸಾರಿಗೆ ಸಂಸ್ಥೆ, ಶಿರಸಿ ವಿಭಾಗದಲ್ಲಿ ವಿವಿಧ ಅಪ್ರೆಂಟಿಸ್...

Download Eedina App Android / iOS

X