ಕೊಪ್ಪಳ | ಜಿಲ್ಲೆಯಲ್ಲಿ ಶೇ.78ರಷ್ಟು ಮತದಾನ: ಜಿಲ್ಲಾಧಿಕಾರಿ

Date:

Advertisements

ಕೊಪ್ಪಳ ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರಗಳಲ್ಲಿ ಮೇ 10ರಂದು ಬೆಳಗ್ಗೆಯಿಂದ ಸಂಜೆವರೆಗೆ ಶಾಂತಯುತ ಮತದಾನ ನಡೆದಿದ್ದು, ಅಂದಾಜು ಶೇ.78 ರಷ್ಟು ಮತದಾನವಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿ ಎಂ ಸುಂದರೇಶಬಾಬು ತಿಳಿಸಿದ್ದಾರೆ.

“ಐದು ವಿಧಾನಸಭಾ ಕ್ಷೇತ್ರಗಳಲ್ಲಿನ ಮತದಾನದ ಪ್ರಮಾಣವು ಬೆಳಗ್ಗೆ 7ರಿಂದ 9 ಗಂಟೆಯವರೆಗೆ ಶೇ.7.64 ರಷ್ಟು, 11 ಗಂಟೆಯವರೆಗೆ ಶೇ.21.46 ರಷ್ಟು, ಮಧ್ಯಾಹ್ನ 1 ಗಂಟೆಯವರೆಗೆ ಶೇ.39.94 ರಷ್ಟು, ಮಧ್ಯಾಹ್ನ 3 ಗಂಟೆಯವರೆಗೆ ಶೇ.56.45 ರಷ್ಟು, ಸಂಜೆ 5 ಗಂಟೆ ವೇಳೆಗೆ ಶೇ.70.49 ರಷ್ಟು ದಾಖಲಾಗಿದ್ದು, ಮತದಾನ ಮುಕ್ತಾಯದ ಸಮಯದ ವೇಳೆಗೆ ಅಂದಾಜು ಶೇ.78ರಷ್ಟು ಮತದಾನವಾಗಿದೆ” ಎಂದು ತಿಳಿಸಿದ್ದಾರೆ.

ಎಲ್ಲ ಐದು ವಿಧಾನಸಭಾ ಕ್ಷೇತ್ರಗಳ 1,322 ಮತಗಟ್ಟೆಗಳಲ್ಲಿ ಬೆಳಗ್ಗೆ ಮತದಾನ ಪ್ರಕ್ರಿಯೆ ಆರಂಭಗೊಂಡಿತು. ಜಿಲ್ಲೆಯಲ್ಲಿ ಮತದಾನವು ಮುಕ್ತ, ಪಾರದರ್ಶಕ ಮತ್ತು ಶಾಂತಿಯುತವಾಗಿ ನಡೆಯುವ ನಿಟ್ಟಿನಲ್ಲಿ ಜಿಲ್ಲಾ ಪೊಲೀಸ್ ಇಲಾಖೆಯ ಸಹಕಾರದೊಂದಿಗೆ ಜಿಲ್ಲಾಡಳಿತದಿಂದ ಎಲ್ಲ ಅಗತ್ಯ ಕ್ರಮಗಳನ್ನು ಕೈಗೊಂಡಿದ್ದರಿಂದ ಶಾಂತರೀತಿಯಿಂದ ಮತದಾನ ಪ್ರಕ್ರಿಯೆ ಮುಕ್ತಾಯಗೊಂಡಿದೆ ಎಂದು ಅವರು ಹೇಳಿದ್ದಾರೆ.

Advertisements

ಸಾರ್ವಜನಿಕರಿಂದ ಮೆಚ್ಚುಗೆ: ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಮತಗಟ್ಟೆಗಳತ್ತ ಬಂದು ವೋಟು ಮಾಡಬೇಕು ಎನ್ನುವ ದಿಶೆಯಲ್ಲಿ ಜಿಲ್ಲೆಯ ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲಿ ವರ್ಲಿ ಕಲೆ, ಕಿನ್ನಾಳ ಕಲೆ, ತಳಿರು ತೋರಣಗಳು, ಬಲೂನುಗಳು, ರಂಗೋಲಿ ಹಾಕುವ ಮೂಲಕ ವಿಶೇಷವಾಗಿ ರೂಪಿಸಿದ್ದ 50 ವಿಶೇಷ ಮತಗಟ್ಟೆಗಳ ಬಗ್ಗೆ ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಈ ಸುದ್ದಿ ಓದಿದ್ದೀರಾ? ಉಡುಪಿ | ಮತದಾನ ಮಾಡುವ ವಿಡಿಯೋ ಚಿತ್ರಿಕರಣ; ಕ್ರಮಕ್ಕೆ ಆಗ್ರಹ

 ಜಿಲ್ಲೆಯ ಐದೂ ವಿಧಾನಸಭಾ ಕ್ಷೇತ್ರಗಳ ಚುನಾವಣಾಧಿಕಾರಿಗಳು, ಸಹಾಯಕ ಚುನಾವಣಾಧಿಕಾರಿಗಳು, ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿಗಳು, ಪೊಲೀಸ್, ಅಬಕಾರಿ ಇಲಾಖೆಗಳು ಸೇರಿದಂತೆ ಹಲವು ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿ, ಹಲವು ತಂಡಗಳ ನೋಡಲ್ ಅಧಿಕಾರಿಗಳು, ಎಂಸಿಸಿ., ಎಫ್‌ಎಸ್‌ಟಿ, ವಿಎಸ್‌ಟಿ, ಎಂಸಿಎಂಸಿ, ವಿವಿಟಿ ಸೇರಿದಂತೆ ಚುನಾವಣೆ ಹಿನ್ನೆಲೆಯಲ್ಲಿ ಹಲವು ರೀತಿಯ ಕರ್ತವ್ಯದಲ್ಲಿದ್ದ ಎಲ್ಲ ಅಧಿಕಾರಿಗಳು ಮತ್ತು ಸಿಬ್ಬಂದಿ ಉತ್ತಮ ಕಾರ್ಯನಿರ್ವಹಿಸಿದ್ದಾರೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X