ಮತದಾನದ ದಿನ ಸುಮಾರು ಶೇ.50ರಷ್ಟು ಕುಸಿದ ಮೆಟ್ರೋ ಪ್ರಯಾಣಿಕರ ಸಂಖ್ಯೆ

Date:

Advertisements
  • ಸಾಮಾನ್ಯವಾಗಿ ಪ್ರತಿದಿನ ಮೆಟ್ರೋದಲ್ಲಿ ಸರಾಸರಿ 5.85 ಲಕ್ಷ ಜನರು ಪ್ರಯಾಣಿಸುತ್ತಾರೆ
  • ಮತದಾನದ ದಿನ ಮೆಟ್ರೋದ ಎರಡು ಮಾರ್ಗಗಳಲ್ಲಿ 3,03,845 ಜನರು ಪ್ರಯಾಣಿಸಿದ್ದಾರೆ

ರಾಜ್ಯದಲ್ಲಿ 2023ರ ಸಾರ್ವತ್ರಿಕ ವಿಧಾನಸಭಾ ಚುನಾವಣೆಯ ಮತದಾನ ಮೇ 10ರಂದು ಯಶಸ್ವಿಯಾಗಿ ಮುಗಿದಿದ್ದು, ಬೆಂಗಳೂರಿನ 28 ವಿಧಾನಸಭಾ ಕ್ಷೇತ್ರಗಳಲ್ಲಿ ಶೇ. 54.53ರಷ್ಟು ಮತದಾನವಾಗಿದೆ. ಮತದಾನದ ದಿನ ಮತದಾರರ ಸಂಚಾರಕ್ಕೆ ಅನುಕೂಲವಾಗಲೆಂದು ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್‌ಸಿಎಲ್‌) ತಡರಾತ್ರಿಯವರೆಗೂ ಮೆಟ್ರೋ ಸೇವೆ ನೀಡಿತ್ತು. ಆದರೆ, ಮತದಾನದ ದಿನದಂದು ಶೇ. 50ರಷ್ಟು ಮೆಟ್ರೋ ಪ್ರಯಾಣಿಕರ ಸಂಖ್ಯೆ ಕುಸಿದಿದೆ.  

ಸಾಮಾನ್ಯವಾಗಿ ಪ್ರತಿ ದಿನ ಮೆಟ್ರೋದ ನೇರಳೆ ಮತ್ತು ಹಸಿರು ಮಾರ್ಗಗಳಲ್ಲಿ ಸರಾಸರಿ 5.85 ಲಕ್ಷ ಜನರು ಪ್ರಯಾಣಿಸುತ್ತಾರೆ. ವೈಟ್‌ಫೀಲ್ಡ್ ಮೆಟ್ರೋ ಮಾರ್ಗದಲ್ಲಿ 30,000 ಜನರು ಸಂಚರಿಸುತ್ತಾರೆ. ಬುಧವಾರ(ಮೇ 10) ರಾತ್ರಿ 9.30 ರವರೆಗೆ ನೇರಳೆ (ಕೆಂಗೇರಿ-ಬೈಯಪ್ಪನಹಳ್ಳಿ) ಮತ್ತು ಹಸಿರು (ನಾಗಸಂದ್ರ-ಸಿಲ್ಕ್ ಇನ್‌ಸ್ಟಿಟ್ಯೂಟ್) ಮಾರ್ಗಗಳಲ್ಲಿ 3,03,845 ಜನರು ಪ್ರಯಾಣಿಸಿದ್ದಾರೆ. ಕೆ ಆರ್‌ ಪುರ-ವೈಟ್‌ಫೀಲ್ಡ್ ಮಾರ್ಗದಲ್ಲಿ ಇದೇ ಸಮಯದಲ್ಲಿ 12,395 ಜನರು ಪ್ರಯಾಣಿಸಿದ್ದಾರೆ ಎಂದು ಬಿಎಂಆರ್‌ಸಿಎಲ್‌ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

“ವಿಧಾನಸಭಾ ಚುನಾವಣೆಯ ದಿನದಂದು ಪೀಕ್ ಅವರ್‌ಗಳಲ್ಲಿ ಐದು ನಿಮಿಷಕ್ಕೊಮ್ಮೆ ಮೆಟ್ರೋ ರೈಲುಗಳು ಸಂಚರಿಸಿವೆ. ಪೀಕ್ ಅವರ್ ಅಲ್ಲದ ಸಮಯದಲ್ಲಿ 7-10 ನಿಮಿಷಕ್ಕೊಮ್ಮೆ ಮೆಟ್ರೋ ರೈಲುಗಳು ಸಂಚರಿಸಿವೆ. ವೈಟ್‌ಫೀಲ್ಡ್ ಮಾರ್ಗದಲ್ಲಿ ಪ್ರತಿ 12 ನಿಮಿಷಗಳಿಗೊಮ್ಮೆ ರೈಲುಗಳು ಚಲಿಸಿವೆ. ಮತದಾನದ ದಿನದಂದು ಮಧ್ಯರಾತ್ರಿಯವರೆಗೆ ಮೆಟ್ರೋ ರೈಲುಗಳು ಸಂಚರಿಸಿವೆ” ಎಂದು ಹೇಳಿದ್ದಾರೆ.

Advertisements

ಟರ್ಮಿನಲ್ ನಿಲ್ದಾಣಗಳಿಂದ (ಬೈಯಪ್ಪನಹಳ್ಳಿ, ನಾಗಸಂದ್ರ, ರೇಷ್ಮೆ ಸಂಸ್ಥೆ, ಕೆಂಗೇರಿ, ವೈಟ್‌ಫೀಲ್ಡ್ ಮತ್ತು ಕೆಆರ್ ಪುರ) ಕೊನೆಯ ರೈಲು ಮೇ 11 ರಂದು 12.05 ಕ್ಕೆ ಹೊರಟಿದೆ. ಮೆಜೆಸ್ಟಿಕ್‌ನಿಂದ ಕೊನೆಯ ಮೆಟ್ರೋ ರೈಲು ಮೇ 11 ರಂದು 12.35 ಕ್ಕೆ ಬೈಯಪ್ಪನಹಳ್ಳಿ, ನಾಗಸಂದ್ರ, ಸಿಲ್ಕ್ ಸಂಸ್ಥೆ ಮತ್ತು ಕೆಂಗೇರಿ ಕಡೆಗೆ ಹೊರಟಿತ್ತು.

ಈ ಸುದ್ದಿ ಓದಿದ್ದೀರಾ? ಬೆಂಗಳೂರಿನಲ್ಲಿ ಶೇ.54.53ರಷ್ಟು ಮತದಾನ

ಇತರ ದಿನಗಳಲ್ಲಿ ಟರ್ಮಿನಲ್ ನಿಲ್ದಾಣಗಳಿಂದ ಕೊನೆಯ ಮೆಟ್ರೋ ರೈಲು ರಾತ್ರಿ 11 ಗಂಟೆಗೆ ಹೊರಡುತ್ತದೆ. ಬಿಎಂಆರ್‌ಸಿಎಲ್ ಮತದಾನದ ದಿನ ನೀಡಿದ ಈ ಹೆಚ್ಚುವರಿ ಸಮಯವು ಪ್ರಯಾಣಿಕರ ಸಂಖ್ಯೆಯನ್ನು ಹೆಚ್ಚಿಸುತ್ತದೆ ಎಂದು ಭಾವಿಸಿತ್ತು. ಆದರೆ, ನಿರೀಕ್ಷೆಗೆ ತಕ್ಕ ಪ್ರಯಾಣಿಕರ ಸಂಚಾರವಾಗಿಲ್ಲ ಎಂದು ತಿಳಿದುಬಂದಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು: ಕೆ ವಿ ಪ್ರಭಾಕರ್

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು. ನೋಟಕ್ಕೆ...

ಬೆಂಗಳೂರು | ಹವಾಮಾನ ಕ್ರಿಯೆಗೆ ಪರಿಣಾಮಕಾರಿ ಕೊಡುಗೆ ನೀಡಲು ಅದರ ಮಹತ್ವ ತಿಳಿಯುವುದು ಅಗತ್ಯ: ಪ್ರೀತಿ ಗೆಹ್ಲೋಟ್

ಹವಾಮಾನ ಕ್ರಿಯೆಗೆ ಪರಿಣಾಮಕಾರಿಯಾಗಿ ಕೊಡುಗೆ ನೀಡಲು, ಮಕ್ಕಳು ಅದರ ಮಹತ್ವ ಮತ್ತು...

ಅರ್ಧದಲ್ಲಿ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಶೀಘ್ರದಲ್ಲೇ ಮುಗಿಸಿ: ಬಿಬಿಎಂಪಿ ಕಮಿಷನರ್ ಮಹೇಶ್ವರ್ ರಾವ್

ಬೆಂಗಳೂರು ನಗರದಲ್ಲಿ ಅರ್ಧದಲ್ಲೇ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಹಾಗೂ ರಸ್ತೆ ಕತ್ತರಿಸಿರುವ...

Download Eedina App Android / iOS

X