ಮೈಸೂರಿನಲ್ಲಿ ಕಳೆದ ವರ್ಷಕ್ಕಿಂತ ಹೆಚ್ಚು ಮತದಾನ

Date:

Advertisements

ಮೈಸೂರು ಜಿಲ್ಲೆಯಲ್ಲಿ ಮತದಾನದ ಶೇಕಡಾವಾರು ಪ್ರಮಾಣ ಕಳೆದ ವರ್ಷಕ್ಕಿಂತ ಉತ್ತಮವಾಗಿದೆ. ಮೈಸೂರು ನಗರದ ಕೃಷ್ಣರಾಜ ಕ್ಷೇತ್ರದಲ್ಲಿ ಶೇ.60, ಚಾಮರಾಜ ಕ್ಷೇತ್ರದಲ್ಲಿ ಶೇ.61.1, ನರಸಿಂಹರಾಜ ಕ್ಷೇತ್ರದಲ್ಲಿ ಶೇ.63.4ರಷ್ಟು ಮತದಾನವಾಗಿದೆ.

2018ರ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ, ಗ್ರಾಮೀಣ ಕ್ಷೇತ್ರಗಳಿಗೆ ಹೋಲಿಸಿದರೆ ಮೈಸೂರು ನಗರ ವ್ಯಾಪ್ತಿಯ ಮೂರು ಕ್ಷೇತ್ರಗಳಲ್ಲಿ ಕಡಿಮೆ ಮತದಾನ ದಾಖಲಾಗಿತ್ತು. ಕೃಷ್ಣರಾಜ ಕ್ಷೇತ್ರದಲ್ಲಿ ಅತಿ ಕಡಿಮೆ ಅಂದರೆ ಶೇ.58.9, ಚಾಮರಾಜ ಕ್ಷೇತ್ರದಲ್ಲಿ ಶೇ.59.2, ನರಸಿಂಹರಾಜ ಕ್ಷೇತ್ರದಲ್ಲಿ ಶೇ.61.4ರಷ್ಟು ಮತದಾನವಾಗಿತ್ತು.

2013ರ ಚುನಾವಣೆಯಲ್ಲಂತೂ ಇನ್ನೂ ಕಡಿಮೆ ಮತದಾನವಾಗಿತ್ತು. ಯಾವ ಕ್ಷೇತ್ರದಲ್ಲಿಯೂ ಶೇ.60 ದಾಟಿರಲಿಲ್ಲ. ಆಗ ಚುನಾವಣೆಯಲ್ಲಿ ಕೃಷ್ಣರಾಜದಲ್ಲಿ ಶೇ.59.08, ಚಾಮರಾಜದಲ್ಲಿ ಶೇ.55.39, ನರಸಿಂಹರಾಜದಲ್ಲಿ ಶೇ.54.70ರಷ್ಟು ಮತದಾನವಾಗಿತ್ತು.

Advertisements

ಈ ಬಾರಿಯ 2023ರ ಚುನಾವಣೆಯಲ್ಲಿ ಮತದಾನದ ಪ್ರಮಾಣ ಏರಿಕೆಯಾಗಿದೆ. ಹೆಚ್ಚಿನ ಸಂಖ್ಯೆಯ ಮತದಾರರು ತಮ್ಮ ಹಕ್ಕು ಚಲಾಯಿಸಿದ್ದಾರೆ. ಮೈಸೂರು ನಗರದಲ್ಲಿ ಶೇ.75 ರಷ್ಟು ಮತದಾನ ದಾಖಲಾಗಬಹುದೆಂದು ಜಿಲ್ಲಾಡಳಿತ ನಿರೀಕ್ಷಿಸಿತ್ತು ಆದರೂ, ಮತದಾನ ಪ್ರಕ್ರಿಯೆ ಶೇ.70ಕ್ಕೆ ಬಂದು ನಿಂತಿದೆ.

ಮೇ 10ರ ಬೆಳಿಗ್ಗೆಯಿಂದ ನಗರದ ಮೂರು ಕ್ಷೇತ್ರಗಳಲ್ಲಿಯೂ ಮತದಾನ ಚುರುಕಾಗಿತ್ತು. ಸಂಜೆ 5 ಗಂಟೆ ವೇಳೆಗೆ ಕೃಷ್ಣರಾಜ ಕ್ಷೇತ್ರದಲ್ಲಿ ಶೇ.56.5, ಚಾಮರಾಜ ಕ್ಷೇತ್ರದಲ್ಲಿ ಶೇ.55.7, ನರಸಿಂಹರಾಜ ಕ್ಷೇತ್ರದಲ್ಲಿ ಶೇ.58.7ರಷ್ಟು ಮತದಾನವಾಗಿದೆ.

ಈ ಸುದ್ದಿ ಓದಿದ್ದೀರಾ? ಚಾಮರಾಜನಗರ | ಮತದಾನಕ್ಕೆ ತೆರಳುತ್ತಿದ್ದ ವ್ಯಕ್ತಿ ಮೇಲೆ ಕಾಡಾನೆ ದಾಳಿ; ಸ್ಥಳದಲ್ಲೇ ಸಾವು

ನಗರದ ಬೂತ್‌ಗಳಲ್ಲಿ ಹಿರಿಯ ನಾಗರಿಕರು ಮತದಾನ ಆರಂಭವಾಗುತ್ತಿದ್ದಂತೆಯೇ ಮತದಾನ ಮಾಡಿದ್ದಾರೆ. ಅವರಲ್ಲಿ ಅನೇಕರು ಬೆಳಿಗ್ಗೆ ವಾಕಿಂಗ್ ನಂತರ ನೇರವಾಗಿ ಬೂತ್‌ಗಳಿಗೆ ತೆರೆಳಿಸಿದ್ದರು.

“ಕಳೆದ ಕೆಲವು ದಶಕಗಳಿಂದ, ನಾನು ಬೆಳಿಗ್ಗೆ ಬೇಗನೆ ಮತ ಚಲಾಯಿಸುತ್ತಿದ್ದೇನೆ. ಇದು ನನ್ನ ಜವಾಬ್ದಾರಿಯಾಗಿದೆ. ನನಗೆ ಯಾವುದೇ ಅಭ್ಯರ್ಥಿ ಇಷ್ಟವಾಗದಿದ್ದರೆ ನೋಟಾ ಆಯ್ಕೆಯನ್ನು ಚಲಾಯಿಸಬಹುದು” ಎಂದು ಕುವೆಂಪು ನಗರದ ನಿವೃತ್ತ ಶಿಕ್ಷಕ ಬಸವರಾಜಪ್ಪ ಎಂ.ಎಸ್ ತಿಳಿಸಿದ್ದಾರೆ.

“ಮತ ಚಲಾಯಿಸುವುದು ನಮಗೆ ಕೆಲವು ರೋಮಾಂಚಕ ಕ್ಷಣಗಳನ್ನು ನೀಡಬೇಕು. ಅದಕ್ಕಾಗಿಯೇ ನಾನು ಮನೆ ಮತದಾನವನ್ನು ತಿರಸ್ಕರಿಸಿದೆ” ಎಂದು ಅಗ್ರಹಾರದ ಹಿರಿಯ ನಾಗರಿಕ ಪ್ರಹ್ಲಾದ್ ಎಚ್.ಎಸ್ (83) ಹೇಳಿಕೊಂಡಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

Download Eedina App Android / iOS

X