ರಾಯಚೂರು | ಉರುಳಿಬಿದ್ದ ಬಂಡೆಕಲ್ಲು: ಇಬ್ಬರು ಮಕ್ಕಳ ದಾರುಣ ಸಾವು

Date:

Advertisements

ಜಮೀನಿನಲ್ಲಿದ್ದ ಬಂಡೆಕಲ್ಲು ಉರುಳಿ ಬಿದ್ದ ಪರಿಣಾಮ ಇಬ್ಬರು ಮಕ್ಕಳು ಸಾವನ್ನಪ್ಪಿ, ಓರ್ವ ಗಾಯಗೊಂಡಿರುವ ದಾರುಣ ಘಟನೆ ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನಲ್ಲಿ ನಡೆದಿದೆ.

ಲಿಂಗಸುಗೂರು ತಾಲೂಕಿನ ಗೌಡುರ ತಾಂಡದಲ್ಲಿ ಈ ದುರ್ಘಟನೆ ನಡೆದಿದ್ದು, ಮಕ್ಕಳನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಮೃತಪಟ್ಟ ಮಕ್ಕಳಿಬ್ಬರನ್ನು ಮಂಜುನಾಥ(9), ವೈಶಾಲಿ (7) ಎಂದು ಗುರುತಿಸಲಾಗಿದೆ. ಗಾಯಗೊಂಡಾತನನ್ನು ರಘು(23) ಎಂದು ಗುರುತಿಸಲಾಗಿದೆ.

Advertisements

ಮಕ್ಕಳು ಪಾಲಕರೊಂದಿಗೆ ಹೊಲಕ್ಕೆ ಹೋಗಿ, ದನ ಮೇಯಿಸುತ್ತಿದ್ದರು. ಈ ವೇಳೆ ಮಳೆ ಬಂದಿದ್ದರಿಂದ ಬಂಡೆ ಕಲ್ಲಿನ ಬುಡದಲ್ಲಿ ಆಸರೆಗಾಗಿ ಕುಳಿತಿದ್ದರು. ಆ ವೇಳೆ ಬಂಡೆಕಲ್ಲು ಉರುಳಿದ್ದು, ಮಕ್ಕಳು ಸಾವನ್ನಪ್ಪಿದ್ದಾರೆ.

ಮಕ್ಕಳ ಚೀರಾಟ ಕೇಳಿ ಪೋಷಕರು ಬಂಡೆ ಎತ್ತಲು ಪ್ರಯತ್ನಿಸಿದರಾದರೂ ಬಂಡೆಯಡಿ ಸಿಲುಕಿದ್ದ ಮಕ್ಕಳನ್ನು ಉಳಿಸಿಕೊಳ್ಳಲು ಸಾಧ್ಯವಾಗಿಲ್ಲ. ಓರ್ವ ಬಾಲಕನ ಕಾಲಿನ ಮೇಲೆ ಬಂಡೆ ಉರುಳಿದ್ದು, ಆತನ ಕಾಲು ಮುರಿದಿದೆ. ಗಾಯಗೊಂಡಿದ್ದ ಬಾಲಕನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ

ಇದನ್ನು ಓದಿದ್ದೀರಾ? ಬೆಂಗಳೂರು | ವಿಪರೀತ ಮಳೆ: ಅ.16ರಂದು ಶಾಲೆಗಳಿಗೆ ರಜೆ ಘೋಷಿಸಿದ ಜಿಲ್ಲಾಧಿಕಾರಿ

ಇಬ್ಬರು ಮಕ್ಕಳು ಮೂರನೇ ತರಗತಿಯಲ್ಲಿ ಓದುತ್ತಿದ್ದರು ಎಂದು ತಿಳಿದುಬಂದಿದೆ. ಘಟನೆಯ ಮಾಹಿತಿ ಅರಿತ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಹಟ್ಟಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | KSRTC ನಗರ ಸಾರಿಗೆ ಬಸ್ ಮಲವಗೊಪ್ಪದ, ಚೆನ್ನಬಸವೇಶ್ವರ ದೇವಸ್ಥಾನ ಬಳಿ ಕಡ್ಡಾಯ ನಿಲುಗಡೆಗೆ ಆದೇಶ

ಶಿವಮೊಗ್ಗ, ಸಾರ್ವಜಕನಿಕ ಪ್ರಯಾಣಿಕರು/ಶಾಲಾ-ಕಾಲೇಜು ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಶಿವಮೊಗ್ಗ-ಭದ್ರಾವತಿ ಮಾರ್ಗದಲ್ಲಿ ಕಾರ್ಯಾಚರಣೆಯಾಗುವ ನಗರ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ಮೈಸೂರು | ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದ ಅತ್ತಿಗೋಡು ಸರ್ಕಾರಿ ಪ್ರೌಢಶಾಲೆ

ಕರ್ನಾಟಕದಲ್ಲಿ ಸರ್ಕಾರಿ ಶಾಲೆಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಸಾಕಷ್ಟು ಸವಾಲುಗಳನ್ನು ಸಹ ಎದುರಿಸುತ್ತಿದೆ....

ಗದಗ | ಹಾಸ್ಟೆಲ್‌ ವಿದ್ಯಾರ್ಥಿನಿ ಕೊಲೆ ಪ್ರಕರಣ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಎಸ್‌ಎಫ್‌ಐ ಆಗ್ರಹ

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕೋವೆರ ಹಟ್ಟಿಯ ವರ್ಷಿತಾ ಎಂಬ ಪದವಿ...

Download Eedina App Android / iOS

X