ಸಾಮಾಜಿಕ ಜಾಲತಾಣದ ಮೂಲಕ ನಾಲ್ಕು ವಿಮಾನಗಳಿಗೆ ಬಾಂಬ್ ಬೆದರಿಕೆ

Date:

Advertisements

ಅಮೆರಿಕಗೆ ತೆರಳುವ ಒಂದು ವಿಮಾನ ಸೇರಿದಂತೆ ನಾಲ್ಕು ವಿಮಾನಗಳಿಗೆ ಮಂಗಳವಾರ ಸಾಮಾಜಿಕ ಜಾಲತಾಣ ‘ಎಕ್ಸ್‌’ನಲ್ಲಿ ಬಾಂಬ್ ಬೆದರಿಕೆ ಹಾಕಲಾಗಿದೆ. ‘ಮೈಕ್ರೋಬ್ಲಾಗಿಂಗ್ ಪ್ಲಾಟ್‌ಫಾರ್ಮ್’ ಎಂಬ ಎಕ್ಸ್ ಖಾತೆಯ ಮುಖಾಂತರ ಬಾಂಬ್ ಬೆದರಿಕೆ ಸಂದೇಶಗಳು ಬಂದಿವೆ. ಆ ಸಂದೇಶಗಳಲ್ಲಿ, ಎಕ್ಸ್ ಹ್ಯಾಂಡಲ್ ಏರ್ ಲೈನ್ ಮತ್ತು ಪೊಲೀಸ್ ಇಲಾಖೆಯ ಖಾತೆಗಳನ್ನು ಟ್ಯಾಗ್ ಮಾಡಲಾಗಿದೆ.

ಜೈಪುರದಿಂದ ಅಯೋಧ್ಯೆ ಮೂಲಕ ಬೆಂಗಳೂರಿಗೆ ತೆರಳುವ ಏರ್ ಇಂಡಿಯಾ ಎಕ್ಸ್‌ಪ್ರೆಸ್‌ ವಿಮಾನ (IX765), ದರ್ಭಾಂಗದಿಂದ ಮುಂಬೈಗೆ ತೆರಳುವ ಸ್ಪೈಸ್ ಜೆಟ್ ವಿಮಾನ (SG116), ಸಿಲಿಗುರಿಯಿಂದ ಬೆಂಗಳೂರಿಗೆ ಆಕಾಶ ಏರ್ ವಿಮಾನ (QP 1373) ಹಾಗೂ ದೆಹಲಿಯಿಂದ ಚಿಕಾಗೋಗೆ ತೆರಳುವ ಏರ್ ಇಂಡಿಯಾ ವಿಮಾನ (AI 127)ಗಳಿಗೆ ಬಾಂಬ್ ಬೆದರಿಕೆ ಸಂದೇಶ ಬಂದಿದೆ. ಈ ಬೆದರಿಕೆಯಿಂದ ನೂರಾರು ಪ್ರಯಾಣಿಕರು ಮತ್ತು ಏರ್ಲೈನ್ ಸಿಬ್ಬಂದಿಗಳು ಅತಂಕಗೊಂಡಿದ್ದಾರೆ.

ಬೆದರಿಕೆ ಬಂದ ಕೂಡಲೇ ಭದ್ರತಾ ಸಿಬ್ಬಂದಿ ತಪಾಸಣೆ ನಡೆಸಿದ್ದು, ವಿಮಾನಗಳೊಳಗೆ ಯಾವುದೇ ಅನುಮಾನಾಸ್ಪದ ವಸ್ತುಗಳು ಪತ್ತೆಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಅಲ್ಲದೇ, ಸಾಮಾಜಿಕ ಜಾಲತಾಣದ ಮೂಲಕ ಪೋಸ್ಟ್ ಮಾಡಿದ ಸಂದೇಶಗಳು ಸುಳ್ಳು ಎಂದು ಘೋಷಿಸಲಾಗಿದೆ.

Advertisements

ಇನ್ನು ಏರ್ ಇಂಡಿಯಾ ಎಕ್ಸ್‌ಪ್ರೆಸ್‌ ವಿಮಾನವನ್ನು ಅಯೋಧ್ಯೆ ವಿಮಾನ ನಿಲ್ದಾಣದಲ್ಲಿ ಭದ್ರತಾ ತಪಾಸಣೆಗೆ ಒಳಪಡಿಸಲಾಗಿತ್ತು.

ಇನ್ನು, ನಿನ್ನೆ ಕೂಡ ಅಂತಾರಾಷ್ಟ್ರೀಯ ವಿಮಾನಗಳಿಗೂ ಬಾಂಬ್ ಬೆದರಿಕೆ ಬಂದಿತ್ತು. ಪರಿಣಾಮವಾಗಿ, ದೆಹಲಿಯಿಂದ ಚಿಕಾಗೋಗೆ ತೆರಳುತ್ತಿದ್ದ ಎಐ ವಿಮಾನವನ್ನು ಭದ್ರತಾ ತಪಾಸಣೆಗಾಗಿ ಕೆನಡಾಕ್ಕೆ ತಿರುಗಿಸಲಾಗಿದೆ ಎಂದು ಫ್ಲೈಟ್-ಟ್ರ್ಯಾಕಿಂಗ್ ವೆಬ್‌ಸೈಟ್‌ ಹೇಳಿದೆ.

ಸೌದಿ ಅರೇಬಿಯಾದಿಂದ ಇಂಡಿಗೋ ವಿಮಾನವು ಬಾಂಬ್ ಬೆದರಿಕೆಯ ನಂತರ ಜೈಪುರದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ ಎಂದು ವಿಮಾನ ನಿಲ್ದಾಣದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈ ಬೆದರಿಕೆಗಳ ಹಿಂದಿರುವ ವ್ಯಕ್ತಿ ಅಥವಾ ಜನರನ್ನು ಪತ್ತೆಹಚ್ಚಲು ಭಾರತೀಯ ಸೈಬರ್-ಸೆಕ್ಯುರಿಟಿ ಏಜೆನ್ಸಿಗಳು ಮತ್ತು ಬ್ಯೂರೋ ಆಫ್ ಸಿವಿಲ್ ಏವಿಯೇಷನ್ ಸೆಕ್ಯುರಿಟಿ (ಬಿಸಿಎಎಸ್) ಸಹಾಯ ಪಡೆಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X