ಉಡುಪಿ | ವಾಯುಭಾರ ಕುಸಿತ; ಕರಾವಳಿಯಲ್ಲಿ ಮುಂದಿನ 5 ದಿನ ಹೆಚ್ಚಿನ ಗಾಳಿ, ಮಳೆ ಸಾಧ್ಯತೆ

Date:

Advertisements

ವಾಯುಭಾರ ಕುಸಿತದಿಂದ ಕರಾವಳಿಯಲ್ಲಿ ಮುಂದಿನ 5 ದಿನಗಳ ಕಾಲ ಹೆಚ್ಚಿನ ಗಾಳಿ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉಡುಪಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ಡಾ ಕೆ ವಿದ್ಯಾ ಕುಮಾರಿ ಪ್ರಕಟಣೆ ಹೊರಡಿಸಿದ್ದು, “ಸಮುದ್ರದಲ್ಲಿ ವಾಯುಭಾರ ಕುಸಿತದಿಂದಾಗಿ ಹೆಚ್ಚಿನ ಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆಯಿರುವ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಸಾರ್ವಜನಿಕರು ಕೆಲವು ಸೂಚನೆಗಳನ್ನು ಪಾಲಿಸಬೇಕು” ಎಂದು ಹೇಳಿದರು.

“ಉಡುಪಿ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು, ನಿಯೋಜನೆಗೊಂಡ ನೋಡಲ್ ಅಧಿಕಾರಿಗಳು, ಸ್ಥಳೀಯ ಸಂಸ್ಥೆಯ ವಿಪತ್ತು ನಿರ್ವಹಣಾ ಸಮಿತಿಯ ಸದಸ್ಯರುಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿದ್ದು, ವಿಪತ್ತನ್ನು ನಿಭಾಯಿಸಬೇಕು. ಪ್ರವಾಸಿಗರು, ಸಾರ್ವಜನಿಕರು, ಮೀನುಗಾರರು ನದಿ, ಜಲಪಾತ, ನೀರಿರುವ ಪ್ರದೇಶ ಮತ್ತು ಸಮುದ್ರಕ್ಕೆ ಇಳಿಯದಂತೆ ಕಟ್ಟೆಚ್ಚರ ವಹಿಸಬೇಕು” ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಅಧಿಕಾರಿಗಳಿಗೆ ಸೂಚಿಸಿದೆ.

Advertisements

ಈ ಸುದ್ದಿ ಓದಿದ್ದೀರಾ? ಚಿಕ್ಕಮಗಳೂರು | ಭಾರೀ ಮಳೆಗೆ ನಲುಗಿದ ಏಲಕ್ಕಿ ಬೆಳೆಗಾರರು; ಕಟಾವು ಮಾಡಿದ ಏಲಕ್ಕಿ ಒಣಗಿಸಲು ಪರದಾಟ

“ಈ ಸಂದರ್ಭದಲ್ಲಿ ಮಕ್ಕಳು ಹಾಗೂ ಸಾರ್ವಜನಿಕರು ಅಪಾಯಕಾರಿ ವಿದ್ಯುತ್‌ ಕಂಬದ ಹತ್ತಿರ ಸುಳಿಯಬಾರದು. ತುಂಡಾದ ವಿದ್ಯುತ್ ತಂತಿಗಳಿಂದ ದೂರವಿರಬೇಕು. ದುರ್ಬಲವಾದ, ಹಳೆಯ ಕಟ್ಟಡ ಅಥವಾ ಮರಗಳ ಹತ್ತಿರ ಹಾಗೂ ಮರಗಳ ಕೆಳಗೆ ನಿಲ್ಲಬಾರದು. ಈ ಅಂಶಗಳನ್ನು ಮಳೆಗಾಲದ ಎಲ್ಲ ಸಂದರ್ಭಗಳಲ್ಲಿ ಚಾಚು ತಪ್ಪದೇ ಕಡ್ಡಾಯವಾಗಿ ಪಾಲಿಸಬೇಕು” ಎಂದು ಎಚ್ಚರಿಕೆ ನೀಡಿದೆ.

ತುರ್ತುಸೇವೆಗೆ ಶುಲ್ಕ ರಹಿತ: 1077 ಹಾಗೂ 0820-2574802 ಸಂಪರ್ಕಿಸಬಹುದಾಗಿದೆ ಎಂದು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X