ರಾಯಚೂರು | ಖಾಸಗಿ ಕ್ಷಣಗಳನ್ನು ವಿಡಿಯೋ ಮಾಡಿಟ್ಟುಕೊಂಡಿದ್ದ ವಿಕೃತ ಸರ್ಕಾರಿ ಅಧಿಕಾರಿ; ಪತ್ನಿಗೆ ಬ್ಲ್ಯಾಕ್‌ಮೇಲ್

Date:

Advertisements

ತಮ್ಮ ಖಾಸಗಿ ಸಮಯವನ್ನು ವಿಡಿಯೋ ಮಾಡಿಟ್ಟುಕೊಂಡಿದ್ದ ಸರ್ಕಾರಿ ಅಧಿಕಾರಿಯೊಬ್ಬ ತನ್ನ ಪತ್ನಿಗೆ ನಿರಂತರವಾಗಿ ಬ್ಲ್ಯಾಕ್‌ಮೇಲ್ ಮಾಡಿರುವ ಪ್ರಕರಣ ರಾಯಚೂರು ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.

ಜಿಲ್ಲೆಯ ಮಾನ್ವಿ ಪೊಲೀಸ್‌ ಠಾಣೆಯಲ್ಲಿ ಮಹಿಳೆಯೊಬ್ಬರು ಸರ್ಕಾರಿ ಅಧಿಕಾರಿಯಾಗಿರುವ ತನ್ನ ಪತಿ ವಿರುದ್ದ ಪ್ರಕರಣ ದಾಖಲಿಸಿದ್ದಾರೆ.

ಇಂಧನ ಇಲಾಖೆಯಲ್ಲಿ ಮೇಲ್ವಿಚಾರಕ ಅಧಿಕಾರಿ ಕಾರ್ಯ ನಿರ್ವಹಿಸುತ್ತಿರುವ ಗುರುರಾಜ್ ಎಂಬಾತನ ವಿರುದ್ಧ ಆತನ ಪತ್ನಿ ದೂರು ದಾಖಲಿಸಿದ್ದಾರೆ. “ಆತ ನನಗೆ ಗೊತ್ತಿಲ್ಲದಂತೆ ನಮ್ಮಿಬ್ಬರ ಖಾಸಗಿ ಕ್ಷಣಗಳನ್ನು ವಿಡಿಯೋ ಮಾಡಿಕೊಟ್ಟುಕೊಂಡಿದ್ದಾನೆ. ತನ್ನ ವಿರುದ್ಧ ಮಾತನಾಡಿದರೆ, ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡುವುದಾಗಿ ಬೆದರಿಕೆ ಹಾಕುತ್ತಿದ್ದಾನೆ” ಎಂದು ಮಹಿಳೆ ದೂರಿನಲ್ಲಿ ವಿವರಿಸಿದ್ದಾರೆ.

Advertisements

ಮಹಿಳೆಗೆ ಆರೋಪಿ ಗುರುರಾಜ್ ಮ್ಯಾಟ್ರಿಮೋನಿಯಲ್ಲಿ ಪರಿಚಿತನಾಗಿದ್ದ. ಸಭ್ಯನಂತೆ ನಡೆದುಕೊಳ್ಳುತ್ತಿದ್ದ. ಆತನನ್ನು ನಂಬಿದ ಮಹಿಳೆ ಇತ್ತೀಚೆಗೆ ಆತನೊಂದಿಗೆ ವಿವಾಹವಾಗಿದ್ದರು. ಆದರೆ, ವಿವಾಹವಾದ ಬಳಿಕ ಆತನ ವಿಕೃತಿ ಬಗ್ಗೆ ಮಹಿಳೆಗೆ ಗೊತ್ತಾಗಿದೆ. ಆತ ತಮ್ಮ ಖಾಸಗಿ ಕ್ಷಣಗಳ ವಿಡಿಯೋವನ್ನು ತನ್ನ ಕಾರು ಚಾಲಕನೂ ಸೇರಿದಂತೆ ಹಲವರಿಗೆ ತೋರಿಸಿದ್ದಾನೆ ಎಂದೂ ಮಹಿಳೆ ಆರೋಪಿಸಿದ್ದಾರೆ.

ಮಾತ್ರವಲ್ಲದೆ, ಹಲವಾರು ಯುವತಿಯರಿಗೆ ಲೈಂಗಿಕ ಕಿರುಕುಳ ನೀಡಿದ್ದಾನೆ. ಯುವತಿಯರಿಗೆ ಸಾಮಾಜಿಕ ಜಾಲತಾಣಗಳಲ್ಲಿ ಅಶ್ಲೀಲ ಸಂದೇಶಗಳನ್ನು ಕಳಿಸಿದ್ದಾನೆ ಎಂದು ಮಹಿಳೆ ಆರೋಪಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

ಕರ್ನಾಟಕ ಕೃಷಿ ಇಲಾಖೆಯಿಂದ ರೈತರಿಗೆ ಡಿಜಿಟಲ್ ಬಲ: ಬಿಇಎಲ್ ಜೊತೆ ಒಡಂಬಡಿಕೆ

ಕೃಷಿ ಸೇವೆಗಳು ರೈತರಿಗೆ ಇನ್ನಷ್ಟು ಸುಲಭವಾಗಿ ದತ್ತಾಂಶ ಆಧಾರಿತವಾಗಿ ಮತ್ತು ಅವಶ್ಯಕತೆಗೆ...

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

Download Eedina App Android / iOS

X