ಧಾರವಾಡ | ಒಳಮೀಸಲಾತಿ ಜಾರಿಗೆ ಒತ್ತಾಯಿಸಿ ಪ್ರತಿಭಟನೆ

Date:

Advertisements

ಒಳಮೀಸಲಾತಿ ಜಾರಿಗೊಳಿಸಲು ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ಪರಿಶಿಷ್ಟ ಜಾತಿ ಮತ್ತು ಪಂಗಡ ಒಳಮೀಸಲಾತಿ ಜಾರಿ ಹೋರಾಟ ಸಮಿತಿ ವತಿಯಿಂದ ಧರಣಿ ನಡೆಸಿದರು. ನಂತರ ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.

ಈಗಾಗಲೇ ಸರ್ವೋಚ್ಚ ನ್ಯಾಯಾಲಯದ ಏಳು ನ್ಯಾಯಾಧೀಶರ ಪೂರ್ಣ ಪೀಠವು ಎಸ್ ಸಿ ಮೀಸಲಾತಿಯಲ್ಲಿ ಒಳಮೀಸಲಾತಿ ಉಪ ವರ್ಗಿಕರಿಸಲು ಆಯಾ ರಾಜ್ಯ ಸರಕಾರಕ್ಕೆ ಸಂಪೂರ್ಣ ಹಕ್ಕಿದೆ ಎಂಬ ತೀರ್ಪು ನೀಡಿದೆ. ಈಗಾಗಿ 2023 ರ ಸಾರ್ವತ್ರಿಕ ಚುನಾವಣೆಯಲ್ಲಿ ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ 6ನೇ ಗ್ಯಾರಂಟಿ ಘೋಸಿಸಿದಂತೆ ಒಳಮೀಸಲಾತಿ ಜಾರಿಗೊಳಿಸಬೇಕಿದೆ.

ಒಳಮೀಸಲಾತಿ ಸಲುವಾಗಿ ಮೂರು ದಶಕಗಳಿಂದ ಹೋರಾಟಗಳು ನಡೆದಿವೆ. ಹಿಂದಿನ ಬಿಜೆಪಿ ಸರಕಾರವು ಎಸ್ ಸಿ ಮೀಸಲಾತಿಯ ಎಲ್ಲ ಫಲಾನುಭವಿ ಜಾತಿಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಹಲವು ಸುತ್ತಿನ ಮಾತುಕತೆ ನಡೆಸಿ ಜನಸಂಖ್ಯೆಗೆ ಅನುಗುಣವಾಗಿಯೇ ವೈಜ್ಞಾನಿಕವಾದ ಒಳಮೀಸಲಾತಿಯ ಸೂತ್ರವನ್ನು ರೂಪಿಸಿ ಕೇಂದ್ರ ಸರಕಾರಕ್ಕೆ ಶಿಫಾರಸ್ಸಿನ ಮಾನದಂಡವನ್ನು ರಾಜ್ಯ ಸರ್ಕಾರ ಅನುಸರಿಸಬೇಕು.

Advertisements

ಇದನ್ನು ಓದಿದ್ದೀರಾ? ಧಾರವಾಡ | ಭೀಕರ ಅಪಘಾತ: ಇಬ್ಬರ ದೇಹಗಳು ಛಿದ್ರ-ಛಿದ್ರ

ಪ್ರತಿಭನೆಯಲ್ಲಿ ಡಾ.ವಿಜಯ ಗುಂಟ್ರಾಳ, ಹನುಮಂತಪ್ಪ ಅಲ್ಕೋಡ್, ಬಸಪ್ಪ ಮಾದರ, ಮೋಹನ ಹಿರೇಮನಿ, ಅಶೋಕ ದೊಡ್ಡಮನಿ, ವೆಂಕಟೇಶ ಸಗಬಾಲ, ಶಿವು ಪೂಜಾರ, ಮರಿಯಪ್ಪ ರಾಮಯ್ಯನವರ, ರಾಜು ಪಾಮಡಿ, ವಿಜಯ ಮುಲಿಮಾನಿ, ಬಸವರಾಜ ಚಳಗೇರಿ, ರವೀಂದ್ರ ಇಟ್ಟಿಗಾರ, ಕಿರಣಕುಮಾರ್ ಸೋಮರಡ್ಡಿ, ಮಂಜುನಾಥ್ ಮಾದರ, ಬಸವರಾಜ ಮಾದರ, ಸಂಗಮೇಶ ಮಾದರ, ಮಹೇಶ ಹುಲ್ಲೆನವರ ಮುಂತಾದವರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X