ಮೈಸೂರು | ಮೇಯರ್ ಶಿವಕುಮಾರ್ ಪಾಲಿಕೆಯ ಘನತೆಗೆ ಧಕ್ಕೆ ತಂದಿದ್ದಾರೆ‌; ಮಾಜಿ ಮೇಯರ್ ಆರೋಪ

Date:

Advertisements
  • ‘ಬಿಜೆಪಿ ಶಾಸಕ, ಸಂಸದರ ಕೈಗೊಂಬೆಯಾಗಿದ್ದಾರೆ ಮೇಯರ್ ಶಿವಕುಮಾರ್’
  • ʼಎಂಸಿಸಿಯಲ್ಲಿ ಶೇ.40ಕ್ಕೂ ಹೆಚ್ಚು ಭ್ರಷ್ಟಾಚಾರ ನಡೆಯುತ್ತಿದೆʼ

ಮೈಸೂರು ಮಹಾನಗರ ಪಾಲಿಕೆ (ಎಂಸಿಸಿ) ಮೇಯರ್ ಶಿವಕುಮಾರ್ ಪದೇ ಪದೇ ಸಭೆಗಳನ್ನು ಮುಂದೂಡುವ ಮೂಲಕ ಮತ್ತು ಸ್ಥಾಯಿ ಸಮಿತಿಗಳ ಚುನಾವಣೆಯನ್ನು ವಿಳಂಬ ಮಾಡುವ ಮೂಲಕ ಪಾಲಿಕೆಯ ಘನತೆಗೆ ಕುಂದು ತಂದಿದ್ದಾರೆ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಮತ್ತು ಮಾಜಿ ಮೇಯರ್ ಅಯೂಬ್ ಖಾನ್ ಹಾಗೂ ಆರಿಫ್ ಹುಸೇನ್ ಆರೋಪಿಸಿದ್ದಾರೆ.

“ಶಿವಕುಮಾರ್ ಅವರು ಬಿಜೆಪಿ ಶಾಸಕ ಮತ್ತು ಸಂಸದರ ಕೈಗೊಂಬೆಯಾಗಿದ್ದಾರೆ. ಬಿಜೆಪಿಯವರ ಇಚ್ಛೆಯಂತೆ ವರ್ತಿಸುತ್ತಿದ್ದಾರೆ” ಎಂದು ಕಾಂಗ್ರೆಸ್ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಶಿವಕುಮಾರ್ ಅವರು ಮೇಯರ್‌ ಸ್ಥಾನ ಪಡೆದು ಆರು ತಿಂಗಳಾಯಿತು. ಈವರೆಗೆ ಕೇವಲ ಎರಡು ಕೌನ್ಸಿಲ್ ಸಭೆಗಳನ್ನು ನಡೆಸಿದ್ದಾರೆ. ಆದರೆ, ಸ್ಥಾಯಿ ಸಮಿತಿಗಳ ಅಧ್ಯಕ್ಷರ ಆಯ್ಕೆ ಸಭೆ ನಡೆದಿಲ್ಲ” ಎಂದು ಆರೋಪಿಸಿದರು.

Advertisements

ಶಿವಕುಮಾರ್ ಅವರು ಸರಿಯಾದ ಕಾರಣಗಳಿಲ್ಲದೆ ಉದ್ದೇಶಪೂರ್ವಕವಾಗಿ ಕೌನ್ಸಿಲ್ ಸಭೆಗಳನ್ನು ಮುಂದೂಡುತ್ತಿದ್ದಾರೆ. ಇದು ಮೈಸೂರಿನ ಅಭಿವೃದ್ಧಿಯ ಮೇಲೆ ಹೆಚ್ಚಿನ ಪರಿಣಾಮ ಬೀರಿದೆ. ಹಣಕಾಸು ಸ್ಥಾಯಿ ಸಮಿತಿ ರಚಿಸದೆ, ಈ ಹಣಕಾಸು ವರ್ಷದಲ್ಲಿ ಹಣಕಾಸು ಯೋಜನೆಯನ್ನು ಮಂಡಿಸಲು ಸಾಧ್ಯವಿಲ್ಲ” ಎಂದು ಅಯೂಬ್ ಖಾನ್ ಸುದ್ದಿಗಾರರಿಗೆ ತಿಳಿಸಿದ್ದಾರೆ.

50 ಲಕ್ಷ ರೂ.ಗಿಂತ ಹೆಚ್ಚಿನ ಅನುದಾನ ವೆಚ್ಚಯಾಗುವ ಯೋಜನಾ ಕಾಮಗಾರಿಗೆ ಸ್ಥಾಯಿ ಸಮಿತಿಯ ಅನುಮೋದನೆ ಬೇಕು. ಬಿಜೆಪಿ ನಾಯಕರು ತಮ್ಮ ಅಗತ್ಯಗಳಿಗೆ ತಕ್ಕಂತೆ ಕೆಲಸವನ್ನು ವಿಭಜಿಸುತ್ತಿದ್ದಾರೆ. ಸಂಬಂಧಪಟ್ಟ ಅಧಿಕಾರಿಗಳ ಅನುಮೋದನೆ ಪಡೆಯುತ್ತಿದ್ದಾರೆ. ಈ ಮೂಲಕ ಪ್ರಜಾಪ್ರಭುತ್ವವನ್ನು ಕಗ್ಗೊಲೆ ಮಾಡುತ್ತಿದ್ದಾರೆ” ಎಂದು ಅಯೂಬ್ ಖಾನ್ ಹೇಳಿದರು.

ಬಿಜೆಪಿ ನಾಯಕರ ಆದೇಶದಂತೆ ಕಾರ್ಯನಿರ್ವಹಿಸುತ್ತಿರುವ ಮೇಯರ್ ಶಿವಕುಮಾರ್ ಸದನದ ಘನತೆಯನ್ನು ಕಡಿಮೆ ಮಾಡಿದ್ದಾರೆ. ಮೈಸೂರು ಮಹಾನಗರ ಪಾಲಿಕೆ(ಎಂಸಿಸಿ)ಯಲ್ಲಿ ಇಂದು ಶೇ.40ಕ್ಕೂ ಹೆಚ್ಚು ಭ್ರಷ್ಟಾಚಾರ ನಡೆಯುತ್ತಿದೆ” ಎಂದು ಮಾಜಿ ಮೇಯರ್ ಆರಿಫ್ ಆರೋಪಿಸಿದರು.

“ಶೇ.90ರಷ್ಟು ಕಾಮಗಾರಿಗಳಿಗೆ ಸ್ಥಾಯಿ ಸಮಿತಿ ಅನುಮೋದನೆ ಅಗತ್ಯವಿದೆ. ಶೇ.24.1ರಷ್ಟು ಮೀಸಲಾತಿ ಇದೆ. ಆದರೆ, ಈ ಬಾರಿ ಇನ್ನೂ ಸ್ಥಾಯಿ ಸಮಿತಿಯ ರಚನೆಯಾಗಿಲ್ಲ” ಎಂದು ಮಾಜಿ ಉಪಮೇಯರ್ ಶ್ರೀಧರ್ ತಿಳಿಸಿದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X