ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್: ಟಾಸ್‌ ಗೆದ್ದ ಭಾರತಕ್ಕೆ ಆರಂಭಿಕ ಆಘಾತ

Date:

Advertisements

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ನ್ಯೂಜಿಲೆಂಡ್‌ ವಿರುದ್ಧದ ಮೊದಲ ಟೆಸ್ಟ್‌ ಪಂದ್ಯದ ಎರಡನೇ ದಿನದಂದು ಭಾರತ ಆರಂಭಿಕ ಆಘಾತ ಅನುಭವಿಸಿದೆ. ಟಾಸ್‌ ಗೆದ್ದ ಟೀಂ ಇಂಡಿಯಾ ನಾಯಕ ರೋಹಿತ್‌ ಶರ್ಮಾ ಬ್ಯಾಟಿಂಗ್‌ ಆಯ್ಕೆ ಮಾಡಿಕೊಂಡರು.

ಭಾರತವು 10 ಓವರ್‌ಗಳಲ್ಲಿಯೇ ಪ್ರಮುಖ ಮೂರು ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೀಡಾಗಿದೆ. ನಾಯಕ ರೋಹಿತ್‌ ಶರ್ಮಾ 2 ರನ್‌ಗೆ ಸೌತಿ ಬೌಲಿಂಗ್‌ನಲ್ಲಿ ಬೌಲ್ಡ್‌ ಆದರೆ, ಪ್ರಮುಖ ಬ್ಯಾಟರ್‌ ವಿರಾಟ್‌ ಕೊಹ್ಲಿ ಹಾಗೂ ಬಡ್ತಿ ಪಡೆದು ಬಂದಿದ್ದ ಸರ್ಫರಾಜ್‌ ಖಾನ್‌ ಶೂನ್ಯ ರನ್‌ಗಳಿಗೆ ಪೆವಿಲಿಯನ್‌ಗೆ ತೆರಳಿದರು.

ಬುಧವಾರದಿಂದ ಆರಂಭವಾಗಬೇಕಿದ್ದ ಈ ಪಂದ್ಯದ ಮೊದಲ ದಿನದಾಟವು ಮಳೆಯಿಂದಾಗಿ ರದ್ದಾಗಿತ್ತು.ಈ ಪಂದ್ಯದಿಂದ ಟೀಮ್ ಇಂಡಿಯಾದ ಯುವ ಆಟಗಾರ ಶುಭ್​ಮನ್ ಗಿಲ್ ಹೊರಗುಳಿದಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ತೆಲಂಗಾಣ ಡಿಎಸ್‌ಪಿ ಆಗಿ ಅಧಿಕಾರ ವಹಿಸಿಕೊಂಡ ಕ್ರಿಕೆಟಿಗ ಮೊಹಮ್ಮದ್ ಸಿರಾಜ್‌

ಕತ್ತು ನೋವಿನ ಸಮಸ್ಯೆಯಿಂದ ಬಳಲುತ್ತಿರುವ ಶುಭ್​ಮನ್ ಗಿಲ್​ಗೆ ವಿಶ್ರಾಂತಿ ನೀಡಲಾಗಿದ್ದು, ಅವರ ಬದಲಿಗೆ ಮತ್ತೋರ್ವ ಯುವ ದಾಂಡಿಗ ಸರ್ಫರಾಝ್​ ಖಾನ್​ಗೆ ಆಡುವ ಬಳಗದಲ್ಲಿ ಅವಕಾಶ ನೀಡಲಾಗಿದೆ. ಹಾಗೆಯೇ ಬಾಂಗ್ಲಾದೇಶದ ವಿರುದ್ಧ ಕಣಕ್ಕಿಳಿದಿದ್ದ ಆಕಾಶ್ ದೀಪ್ ಬದಲಿಗೆ ಕುಲ್‌ದೀಪ್‌ ಯಾದವ್ ಸ್ಥಾನ ಪಡೆದಿದ್ದಾರೆ. ಫಿಟ್​ನೆಸ್ ಸಮಸ್ಯೆಯ ಕಾರಣ ಈ ಪಂದ್ಯದಿಂದ ನ್ಯೂಜಿಲೆಂಡ್ ತಂಡದ ಸ್ಟಾರ್ ಆಟಗಾರ ಕೇನ್ ವಿಲಿಯಮ್ಸನ್ ಹೊರಗುಳಿದಿದ್ದಾರೆ

ಉಭಯ ತಂಡಗಳ ಆಡುವ 11ರ ಬಳಗ

ಭಾರತ: ರೋಹಿತ್ ಶರ್ಮಾ, ಯಶಸ್ವಿ ಜೈಸ್ವಾಲ್, ಕೆಎಲ್ ರಾಹುಲ್, ವಿರಾಟ್ ಕೊಹ್ಲಿ, ಸರ್ಫರಾಝ್ ಖಾನ್, ರಿಷಭ್ ಪಂತ್, ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್, ಜಸ್​ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್ ಹಾಗೂ ಕುಲ್ದೀಪ್ ಯಾದವ್.

ನ್ಯೂಜಿಲೆಂಡ್: ಟಾಮ್ ಲ್ಯಾಥಮ್ (ನಾಯಕ), ಡೆವೊನ್ ಕಾನ್ವೇ, ವಿಲ್ ಯಂಗ್, ರಚಿನ್ ರವೀಂದ್ರ, ಡೇರಿಲ್ ಮಿಚೆಲ್, ಟಾಮ್ ಬ್ಲಂಡೆಲ್ (ವಿಕೆಟ್ ಕೀಪರ್), ಗ್ಲೆನ್ ಫಿಲಿಪ್ಸ್, ಮ್ಯಾಟ್ ಹೆನ್ರಿ, ಟಿಮ್ ಸೌಥಿ, ಅಜಾಝ್ ಪಟೇಲ್, ವಿಲಿಯಂ ಒರೋಕ್.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸರ್ಕಾರಿ ಶಾಲೆ ಮಕ್ಕಳಿಗೆ ಸುಸಜ್ಜಿತ ವ್ಯವಸ್ಥೆ ಸಿಕ್ಕರೆ ಅತ್ಯುನ್ನತ ಸಾಧನೆ, ಸಾಮರ್ಥ್ಯ ಅನಾವರಣ

"ಖಾಸಗಿ ಶಾಲೆಗಳಲ್ಲಿ ಓದುವ ಮಕ್ಕಳಿಗಿಂತ ಸರ್ಕಾರಿ ಶಾಲೆಗಳ ಮಕ್ಕಳು ಯಾವುದರಲ್ಲಿಯೂ ಕಡಿಮೆ...

ಸಾಗರ್ ಧನಕರ್ ಹತ್ಯೆ ಪ್ರಕರಣ: ಕುಸ್ತಿಪಟು ಸುಶೀಲ್ ಕುಮಾರ್ ಜಾಮೀನು ರದ್ದು

ಜೂನಿಯರ್ ರಾಷ್ಟ್ರೀಯ ಕುಸ್ತಿ ಚಾಂಪಿಯನ್ ಸಾಗರ್ ಧನಕರ್ ಹತ್ಯೆ ಪ್ರಕರಣದ ಪ್ರಮುಖ...

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

Download Eedina App Android / iOS

X