ಚಿಕ್ಕಮಗಳೂರು | ಅಪಾಯದಲ್ಲಿವೆ 5 ಗ್ರಾಮಗಳು; ಜನರ ಸ್ಥಳಾಂತರಕ್ಕೆ ಸೂಚನೆ

Date:

Advertisements

ಚಿಕ್ಕಮಗಳೂರಿನ 5 ಗ್ರಾಮಗಳು ಭೌಗೋಳಿಕವಾಗಿ ಅಪಾಯದಲ್ಲಿವೆ. ಗ್ರಾಮಗಳಲ್ಲಿ ಮತ್ತೆ ಭೂಕುಸಿತವಾಗುವ ಸಾಧ್ಯತೆಗಳು ಹೆಚ್ಚಾಗಿದೆ. ಆ ಗ್ರಾಮಗಳಲ್ಲಿರುವ ಕುಟುಂಬಗಳನ್ನು ಬೇರೆಡೆಗೆ ಸ್ಥಳಾಂತರಿಸಬೇಕೆಂದು ‘ಜಿಯೋಲಾಜಿಕಲ್ ಸರ್ವೇ ಆಫ್ ಇಂಡಿಯಾ’ ಸೂಚನೆ ನೀಡಿದೆ.

ಜಿಯೋಲಾಜಿಕಲ್ ಸರ್ವೇ ತಂಡವು ಚಿಕ್ಕಮಗಳೂರು ಜಿಲ್ಲಾಧಿಕಾರಿಗೆ ಸಮೀಕ್ಷಾ ವರದಿ ಮತ್ತು ಶಿಫಾರಸುಗಳನ್ನು ಸಲ್ಲಿಸಿದೆ. ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಗುಡ್ಡೇತೋಟ, ಬಸರಿಕಟ್ಟೆ, ಶೃಂಗೇರಿ ತಾಲೂಕಿನ ಕೆರೆದಂಡೆ, ಕಳಸ ತಾಲೂಕಿನ ಸೋಮನಕಟ್ಟೆ, ಚನ್ನಹಡ್ಲು ಗ್ರಾಮಗಳು ಭೂಕುಸಿತದ ಅಪಾಯವನ್ನು ಎದುರಿಸುತ್ತಿವೆ ಎಂದು ಹೇಳಿದೆ.

2019ರಲ್ಲಿ ಸುರಿದ ಭಾರೀ ಮಳೆಯಿಂದಾಗಿ ಈ ಐದೂ ಗ್ರಾಮಗಳಲ್ಲಿ ಭೂಕುಸಿತವಾಗಿತ್ತು. ಈಗ ಜೋರು ಮಳೆಯಾದರೆ, ಮತ್ತೆ ಭೂಕುಸಿತವಾಗುವ ಸಾಧ್ಯತೆಗಳು ಹೆಚ್ಚಾಗಿವೆ. ಮುಂದಿನ ಮಳೆಗಾಲ ಆರಂಭವಾಗುವ ಮುನ್ನವೇ ಗ್ರಾಮಗಳ ಜನರನ್ನು ಸ್ಥಳಾಂತರ ಮಾಡಬೇಕು ಎಂದು ವಿಜ್ಞಾನಿಗಳು ಹೇಳಿದ್ದಾರೆ.

Advertisements
ಚಿಕ್ಕಮಗಳೂರು 18

ಸಮೀಕ್ಷಾ ವರದಿಯನ್ನು ಆಧರಿಸಿ ಕ್ರಮ ಕೈಗೊಳ್ಳಲು ಚಿಕ್ಕಮಗಳೂರು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಮುಂದಾಗಿದ್ದಾರೆ. ತ್ವರಿತ ಕ್ರಮಗಳನ್ನು ತೆಗೆದುಕೊಂಡು ಗ್ರಾಮಗಳ ಜನರನ್ನು ಸ್ಥಳಾಂತರಿಸುವಂತೆ ಆಯಾ ತಾಲೂಕು ಆಡಳಿತಗಳಿಗೆ ಸೂಚನೆ ನೀಡಿದ್ದಾರೆ.

“ಗ್ರಾಮಗಳ ಜನರಿಗೆ ಪುನರ್ವಸತಿ ಹಾಗೂ ಪರ್ಯಾಯ ವ್ಯವಸ್ಥೆ ಒದಗಿಸುವ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ಅಧಿಕಾರಿಗಳ ಅಭಿಪ್ರಾಯ, ಸಲಹೆಗಳನ್ನು ಪಡೆದು ತೀರ್ಮಾನ ಕೈಗೊಳ್ಳಲಾಗುವುದು. ಜಿಯೋಲಾಜಿಕಲ್ ಸರ್ವೇ ಆಫ್ ಇಂಡಿಯಾ ವರದಿಯನ್ನು ಸರ್ಕಾರಕ್ಕೆ ಕಳುಹಿಸಿ ಚರ್ಚೆ ನಡೆಸಲಾಗುವುದು. ಸರ್ಕಾರದ ಸೂಚನೆ ಮೇರೆಗೆ ಕ್ರಮ ಕೈಗೊಳ್ಳಲಾಗುವುದು” ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಾಗರ | ಸಿಗಂದೂರು ಸೇತುವೆ ಮೇಲೆ ವ್ಹೀಲಿಂಗ್ ; ಬಿತ್ತು 5,000₹ ದಂಡ

ಸಾಗರದ ಸಿಗಂದೂರು ಸೇತುವೆ ಮೇಲೆ ದುಬಾರಿ ಬೈಕ್‌ನಲ್ಲಿ ವೀಲಿಂಗ್‌ ಮಾಡಿದ ಯುವಕನಿಗೆ...

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

Download Eedina App Android / iOS

X