ಮುಂಜಾನೆ ಸಮಯದಲ್ಲಿ ವಿದ್ಯುತ್ ತಂತಿ ಸ್ಪರ್ಶಿಸಿ ಆನೆ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಬಾಳ್ಳುಪೇಟೆ ಸಮೀಪ ನೆಡೆದಿದೆ.
ತಾಲೂಕಿನ ಬನವಾಸೆ ಗ್ರಾಮದ ಬಳಿ ಬಿಎಸ್ಎನ್ಎಲ್ ಕಚೇರಿ ಸಮೀಪ ವಿದ್ಯುತ್ ಕಂಬದ ಪಕ್ಕದಲ್ಲಿ ಸುಮಾರು 25 ವರ್ಷದ ಕಾಡಾನೆ ಮೃತಪಟ್ಟಿದೆ. ಮೇಲ್ನೋಟಕ್ಕೆ ವಿದ್ಯುತ್ ತಂತಿಗೆ ಆನೆಯ ಸೊಂಡಿಲು ತಗುಲಿ ಮೃತಪಟ್ಟಿರಬಹುದು ಎಂದು ಶಂಕಿಸಲಾಗಿದೆ.
ಈ ಸುದ್ದಿ ಓದಿದ್ದೀರಾ? ಚಿಕ್ಕಬಳ್ಳಾಪುರ | ಒಳಮೀಸಲಾತಿಗೆ ಆಗ್ರಹಿಸಿ ದಲಿತ ಸಂಘಟನೆಗಳ ಬೃಹತ್ ಪ್ರತಿಭಟನೆ
“ಆನೆ ಸಾವನ್ನಪ್ಪಿರುವ ಜಾಗದಲ್ಲಿ ವಿದ್ಯುತ್ ತಂತಿ ಹಾದು ಹೋಗಿದೆ. ಹಾಗಾಗಿ ಆನೆಯು ವಿದ್ಯುತ್ ಪ್ರವಹಿಸಿದ್ದರಿಂದ ಮೃತಪಟ್ಟಿರುವಂತೆ ತೋರುತ್ತಿದ್ದು, ಆನೆಯ ಮರಣೋತ್ತರ ಪರೀಕ್ಷೆಯ ನಂತರ ಸಾವಿಗೆ ನಿಖರ ಕಾರಣ ತಿಳಿದು ಬರಲಿದೆ ಎಂದು ವಲಯ ಅರಣ್ಯಾಧಿಕಾರಿ ಹೇಮಂತ್ ತಿಳಿಸಿದ್ದಾರೆ.