ಗುಬ್ಬಿ | ತಳ ಸಮುದಾಯಕ್ಕೆ ಶೈಕ್ಷಣಿಕ ಪ್ರಗತಿ ಅತ್ಯಗತ್ಯ : ಹಾಸ್ಟೆಲ್ ನಿರ್ಮಾಣಕ್ಕೆ ಶಾಸಕ ಎಸ್.ಆರ್.ಶ್ರೀನಿವಾವಾಸ್ ಸೂಚನೆ

Date:

Advertisements

ಸಮುದಾಯ ಭವನ ನಿರ್ಮಾಣಕ್ಕೆ ಸ್ಥಳ ನೀಡಲು ಕೋರಿರುವ ವಾಲ್ಮೀಕಿ ನಾಯಕ ಸಮಾಜದವರು ಮಕ್ಕಳ ಶಿಕ್ಷಣಕ್ಕೆ ಅನುವು ಆಗುವ ವಸತಿ ನಿಲಯ ಕಟ್ಟಡ ಕಟ್ಟುವುದು ಸೂಕ್ತ ಎಂದು ಶಾಸಕ ಎಸ್.ಆರ್.ಶ್ರೀನಿವಾಸ್ ಸಲಹೆ ನೀಡಿದರು.

ಗುಬ್ಬಿ ಪಟ್ಟಣದ ಬಾಬು ಜಗಜೀವನ ರಾಂ ಭವನದಲ್ಲಿ ಆಯೋಜಿಸಿದ್ದ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಸಮಾಜದ ಪರಿಕಲ್ಪನೆ ಅಂದಿನ ಕಾಲದಲ್ಲೇ ಯೋಚಿಸಿದ್ದ ಮಹರ್ಷಿ ವಾಲ್ಮೀಕಿ ಅವರ ರಾಮಾಯಣ ಸಾಮಾಜಿಕ, ಧಾರ್ಮಿಕ ಹಾಗೂ ರಾಜಕೀಯ ಚಿತ್ರಣ ತಿಳಿಸಿದೆ. ಇದೇ ಮಾರ್ಗಾನುಸಾರ ಪ್ರಸ್ತುತ ಸಮಾಜದಲ್ಲಿ ಶೈಕ್ಷಣಿಕ ಪ್ರಗತಿ ಒಂದೇ ಮುಖ್ಯವಾಹಿನಿಗೆ ಬರಲು ಉತ್ತಮ ಮಾರ್ಗವಾಗಿದೆ. ಈ ನಿಟ್ಟಿನಲ್ಲಿ ಚಿಂತನೆ ಮಾಡಿ ಎಂದು ಕರೆ ನೀಡಿದರು.

ರಾಮಾಯಣ ನಮ್ಮ ಧರ್ಮ ಗ್ರಂಥವಾಗಿದೆ. ಅದರಲ್ಲಿನ ಸಾರ ಉತ್ತಮ ಸಮಾಜ ನಿರ್ಮಾಣಕ್ಕೆ ಮಾರ್ಗದರ್ಶನವಾಗಿದೆ. ವಾಲ್ಮೀಕಿ ಮಹರ್ಷಿಗಳ ಕೊಡುಗೆ ಅಪಾರ ಎಂಬುದು ಜಗತ್ತಿಗೆ ತಿಳಿದಿದೆ. ನಾಯಕ ಸಮಾಜದವರು ಎನ್ನುವ ಹೆಮ್ಮೆಯ ಜೊತೆಗೆ ಈ ಜನಾಂಗ ಸಮಾಜದಲ್ಲಿ ಮುಂದುವರೆಯಬೇಕಿದೆ. ಸರ್ಕಾರ ಕೂಡ ಅವರಿಗೆ ವಿಶೇಷ ಅನುದಾನ, ಕಾರ್ಯಕ್ರಮ, ಪ್ರೋತ್ಸಾಹ, ಸಬ್ಸಿಡಿ ನೀಡುತ್ತಿದೆ. ಇದನ್ನು ಬಳಸಿಕೊಂಡು ಮುಂದಿನ ಪೀಳಿಗೆಗೆ ಉತ್ತಮ ಶಿಕ್ಷಣ ನೀಡಿ ಮುಖ್ಯವಾಹಿನಿಗೆ ಬರಬೇಕು ಎಂದು ಕರೆ ನೀಡಿದರು.

Advertisements

ಉಪನ್ಯಾಸಕ ಲೋಕೇಶ್ ಮಾತನಾಡಿ ವಾಲ್ಮೀಕಿ ಮೂಲ ಬೇಡನಾಗಿ ನಂತರ ಮಹಾ ತಪಸ್ವಿಯಾದ ಕಥೆ ಸುಮಾರು 2500 ವರ್ಷಗಳ ಹಿಂದೆ ಎಂಬ ಉಲ್ಲೇಖವಿದೆ. ಆದರೆ ಸಂಸ್ಕೃತ ಭಾಷೆಯ ಕಲಿಕೆಗೆ ಅವಕಾಶ ಇಲ್ಲದ ಸಮಯದಲ್ಲಿ ಭಾಷೆಯನ್ನು ಕಲಿತು ಮಹಾ ಗ್ರಂಥ ರಚಿಸಿರುವುದು ಮಹಾ ತಪಸ್ವಿ ಎನ್ನುವುದಕ್ಕೆ ಸಾಕ್ಷಿಯಾಗಿದೆ. ವಲ್ಮೀಕ ಎಂದರೆ ಹುತ್ತ ಎನ್ನುವ ಅರ್ಥವಿದೆ. ತಪಸ್ಸು ಮಾಡುವ ಮಹರ್ಷಿಗಳ ಸುತ್ತ ಬೆಳೆದ ಹುತ್ತದಿಂದಾಗಿ ವಾಲ್ಮೀಕಿ ಹೆಸರು ಬಂತು ಎಂಬ ಅವರ ಚರಿತೆಯಲ್ಲಿ ಬರುತ್ತದೆ. ಅವರ ರಚಿತ ರಾಮಾಯಣ ಅದ್ಬುತ ಎನಿಸಿದೆ. ರಾಮನ ಪಾತ್ರ ಸೇರಿದಂತೆ ಎಲ್ಲಾ ಪಾತ್ರಗಳು ಸಹ ಒಂದೊಂದು ಮಹತ್ವ ಅಂಶ ತಿಳಿಸಿದೆ ಎಂದು ವಿವರಿಸಿದರು.

ಇದೇ ಸಂದರ್ಭದಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಗೌರವಿಸಲಾಯಿತು.

ವೇದಿಕೆಯಲ್ಲಿ ಪಪಂ ಅಧ್ಯಕ್ಷೆ ಮಂಗಳಮ್ಮ, ಉಪಾಧ್ಯಕ್ಷೆ ಮಮತಾ, ಸದಸ್ಯರಾದ ಜಿ.ಎನ್.ಅಣ್ಣಪ್ಪಸ್ವಾಮಿ, ಜಿ.ಆರ್.ಶಿವಕುಮಾರ್, ಶಶಿಕುಮಾರ್, ಮಹಮದ್ ಸಾದಿಕ್, ವಾಲ್ಮೀಕಿ ನಾಯಕ ಸಮಾಜದ ಅಧ್ಯಕ್ಷ ಅಡವೀಶಯ್ಯ, ನರಸಿಂಹಮೂರ್ತಿ, ರಾಮಚಂದ್ರಪ್ಪ, ಸಣ್ಣರಂಗಯ್ಯ, ವಾಲ್ಮೀಕಿ ನಾಯಕ ಮಹಿಳಾ ಘಟಕದ ಅಧ್ಯಕ್ಷೆ ಸೌಭಾಗ್ಯಮ್ಮ, ರಾಘವೇಂದ್ರ, ಚೇಳೂರು ಶಿವನಂಜಯ್ಯ, ತಾಪಂ ಇಓ ಶಿವಪ್ರಕಾಶ್, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರಾದ ವೀಣಾ ಸೇರಿದಂತೆ ಎಲ್ಲಾ ಇಲಾಖಾಧಿಕಾರಿಗಳು ಹಾಜರಿದ್ದರು.

WhatsApp Image 2024 08 09 at 10.52.48 1578a566
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X