ದಾವಣಗೆರೆ | ಮಳೆಯಿಂದ ನಗರದ ಹಲವೆಡೆ ಅಪಾರ ಹಾನಿ

Date:

Advertisements

ಬುಧವಾರ ಸಂಜೆಯಿಂದ ಪ್ರಾರಂಭವಾಗಿ ರಾತ್ರಿಯಿಡೀ ಸುರಿದ ಮಳೆಗೆ ದಾವಣಗೆರೆ ನಗರ ಸೇರಿದಂತೆ ಜಿಲ್ಲೆಯಲ್ಲಿ ಅಪಾರ ಹಾನಿ ಸಂಭವಿಸಿದೆ.

ವಾಯುಭಾರ ಕುಸಿತದಿಂದ ಕಳೆದೆರಡು ದಿನಗಳಿಂದ ಮಳೆ ಸುರಿಯುತ್ತಿದೆ. ಆದರೆ ಬುಧವಾರ ಸಂಜೆಯಿಂದ ನಿರಂತರವಾಗಿ ಸುರಿದ ಮಳೆಗೆ ಜನಜೀವನ ಅಸ್ತವ್ಯಸ್ತವಾಗಿದೆ. ದಾವಣಗೆರೆ ನಗರ ಸೇರಿದಂತೆ ಜಿಲ್ಲೆಯ ಹಲವೆಡೆ ಮನೆಗಳಿಗೆ ನೀರು ನುಗ್ಗಿದ್ದು ಜನಜೀವನ ಅಸ್ಥವ್ಯಸ್ಥಗೊಂಡಿದೆ.

ದಾವಣಗೆರೆ ನಗರದ ಪಿಸಾಳೆ ಕಾಂಪೌಂಡ್‌ನ ಹತ್ತಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿದ್ದು, ಇಲ್ಲಿನ ನಿವಾಸಿಗಳು ಇಡೀ ರಾತ್ರಿ ಜಾಗರಣೆ ಮಾಡುವಂತಾಗಿದೆ. ಹಳೇ ಪಿಬಿ ರಸ್ತೆಯ ಪಕ್ಕದಲ್ಲೇ ಇರುವ ಪಿಸಾಳೆ ಕಾಂಪೌಂಡ್ ತಗ್ಗು ಪ್ರದೇಶದಲ್ಲಿ ಇರುವ ಕಾರಣ ಮಳೆ ನೀರು ವಸತಿ ಪ್ರದೇಶದೊಳಗೆ ನುಗ್ಗಿ ಅವಾಂತರ ಸೃಷ್ಟಿ ಮಾಡಿದೆ. ಮನೆಯಲ್ಲಿರುವ ಸಾಮಗ್ರಿಗಳು, ದವಸ ಧಾನ್ಯಗಳು ಕೂಡ ನೀರುಪಾಲಾಗಿವೆ.‌ ಮನೆಯಲ್ಲಿದ್ದ ನೀರನ್ನು ಹೊರ ಹಾಕುವ ಕೆಲಸವನ್ನು ಇಲ್ಲಿನ ಸ್ಥಳೀಯರು ಮಾಡುತ್ತಿದ್ದಾರೆ. ಬೈಕ್ ಗಳು ಕೂಡ ಮುಳುಗಡೆಯಾಗಿವೆ.

Advertisements
WhatsApp Image 2024 10 17 at 5.00.11 PM

ಪಿಸಾಳೆ ಕಾಂಪೌಂಡ್‌ನಲ್ಲಿದ್ದ ನೀರನ್ನು ಪಾಲಿಕೆ ಸಿಬ್ಬಂದಿ ಹೊರ ಹಾಕುವಲ್ಲಿ ನಿರತರಾಗಿದ್ದಾರೆ. ಉಳಿದಂತೆ ನಗರದ ಹಲವು ಭಾಗದಲ್ಲಿಯೂ ಮಳೆನೀರು ಮನೆಗಳಿಗೆ ನುಗ್ಗಿದ್ದು ಹಾನಿ ಸಂಭವಿಸಿದೆ.

ಜಗಳೂರು ತಾಲೂಕಿನ ಹಿರೇಮಲ್ಲನಹೊಳೆ ಕೆರೆಯು ತುಂಬಿ ಕೋಡಿ ಹರಿದಿದ್ದು, ಕೆರೆ ಅಂಗಳಕ್ಕೆ ಹೊಂದಿಕೊಂಡಂತಿದ್ದ ಸುಮಾರು 35 ರಿಂದ 40 ಮನೆಗಳಿಗೆ ನೀರು ನುಗ್ಗಿದೆ. ಗ್ರಾಮದ ಸರ್ಕಾರಿ ಪಾಠಶಾಲೆಯಲ್ಲಿ ಗಂಜಿ ಕೇಂದ್ರ ತೆರೆದಿದ್ದು, ಸಂತ್ರಸ್ತ ಕುಟುಂಬಗಳಿಗೆ ಅಲ್ಲಿ ಆಶ್ರಯ ನೀಡಲಾಗಿದೆ. ಜಗಳೂರು ತಾಲೂಕಿನ ಬಹುತೇಕ ಕೆರೆಗಳಿಗೆ ಉತ್ತಮ ಮಳೆಯಿಂದ ನೀರು ಹರಿದಿದ್ದು ತುಂಬುವ ಹಂತದಲ್ಲಿವೆ.

ಜಿಲ್ಲೆಯಾದ್ಯಂತ ಉತ್ತಮ ಮಳೆಯಾಗುತ್ತಿದ್ದು, ಮೂರು ನಾಲ್ಕು ದಿನಗಳು ಮಳೆಯಾಗುವ ಸೂಚನೆಯನ್ನು ಹವಾಮಾನ ಇಲಾಖೆ ತಿಳಿಸಿದ್ದು, ಜನರು ಎಚ್ಚರಿಕೆ ವಹಿಸಲು ಜಿಲ್ಲಾಡಳಿತ ತಿಳಿಸಿದೆ.

WhatsApp Image 2024 10 17 at 5.00.12 PM 2
ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X