ಮದ್ದೂರು | ವಾಲ್ಮೀಕಿ ಜಯಂತಿ ಪ್ರಯುಕ್ತ ಮಕ್ಕಳಿಗೆ ಉಚಿತ ಕ್ಷೌರ ಕಾರ್ಯಕ್ರಮ

Date:

Advertisements

ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕು ಅಹಿಂದ ಸಂರಕ್ಷಣಾ ವೇದಿಕೆಯು ವತಿಯಿಂದ ಬಡ ಮಕ್ಕಳಿಗೆ ಉಚಿತ ಕ್ಷೌರ ಕಾರ್ಯಕ್ರಮ ಹಮ್ಮಿಕೊಂಡು ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆಯನ್ನು ವಿಶಿಷ್ಟವಾಗಿ ಆಚರಣೆ ಮಾಡಲಾಯಿತು.

ಮದ್ದೂರು ತಾಲೂಕು ಅಹಿಂದ ಸಂರಕ್ಷಣಾ ವೇದಿಕೆಯ ವತಿಯಿಂದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ಅಂಗವಾಗಿ ವಳಗೆರೆಹಳ್ಳಿ ಗ್ರಾಮದಲ್ಲಿ ನಿರಾಶ್ರಿತರ ಹಾಗೂ ಬಡ ಕುಟುಂಬದ ಮಕ್ಕಳಿಗೆ ಈ ಉಚಿತ ಕ್ಷೌರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಮದ್ದೂರು ತಾಲೂಕು ಅಹಿಂದ ಸಂರಕ್ಷಣಾ ವೇದಿಕೆಯು ಈ ರೀತಿಯಲ್ಲಿ ಬಡ ಮಕ್ಕಳಿಗೆ ಉಚಿತ ಕ್ಷೌರ ಕಾರ್ಯಕ್ರಮವನ್ನು ಹಮ್ಮಿಕೊಂಡಿರುವುದು ತಾಲೂಕಿನಲ್ಲಿ ಎಲ್ಲರೂ ಮೆಚ್ಚುವಂಥದ್ದು. ಸಂಘಟನೆಯ ಅಧ್ಯಕ್ಷರು, ಪದಾಧಿಕಾರಿಗಳು ಈ ಕಾರ್ಯಕ್ರಮ ಹಮ್ಮಿಕೊಂಡಿರುವುದು ಹೆಮ್ಮೆ ಪಡುವ ವಿಚಾರವಾಗಿದೆ ಎಂದು ಕನ್ನಡ ಜನಪರ ವೇದಿಕೆ ಜಿಲ್ಲಾ ಅಧ್ಯಕ್ಷ ಉಮಾಶಂಕರ್ ತಿಳಿಸಿದರು.

Advertisements
1002066720

ಶಿಕ್ಷಕ, ಸಂಘಟಕ ಕೆ ಟಿ ಶಿವಕುಮಾರ್ ಮಾತನಾಡಿ, ಅಹಿಂದ ಸಂರಕ್ಷಣಾ ವೇದಿಕೆಯು ಸವಿತ ಸಮಾಜದ ಒಡಗೂಡಿ ಎಲ್ಲಾ ವರ್ಗದ ಬಡಮಕ್ಕಳಿಗೆ ಉಚಿತ ಕ್ಷೌರವನ್ನು ಮಾಡುವ ಮೂಲಕ ಸಮಾಜಕ್ಕೆ ಮಾದರಿಯಾಗಿದ್ದಾರೆ. ಇದು ಸಮಾಜಕ್ಕೆ ಉತ್ತಮವಾದ ಸಂದೇಶವಾಗಿದೆ. ಈ ರೀತಿಯ ಕಾರ್ಯಕ್ರಮ ರಾಜ್ಯಾದ್ಯಂತ ಅಹಿಂದ ಸಂರಕ್ಷಣಾ ವೇದಿಕೆಯ ಹಮ್ಮಿಕೊಳ್ಳಬೇಕು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಅಹಿಂದ ಸಂರಕ್ಷಣಾ ವೇದಿಕೆಯ ಅಧ್ಯಕ್ಷ ಅತಗೂರು ನಿಂಗಪ್ಪ, ಸಂಘಟನಾ ಕಾರ್ಯದರ್ಶಿ ಶಶಿ ಕುಮಾರ್ ಪಿ, ಕನ್ನಡ ಜನಪರ ವೇದಿಕೆ ಅಧ್ಯಕ್ಷ ಉಮಾಶಂಕರ್, ಶಿಕ್ಷಕ ಸಂಘಟಕ ಕೆ.ಟಿ ಶಿವಕುಮಾರ್, ಮದ್ದೂರು ತಾಲೂಕು ಸವಿತಾ ಸಮಾಜದ ಸಂಘಟನೆ ಕಾರ್ಯದರ್ಶಿ ವಳಗೆರೆಹಳ್ಳಿ ಶ್ರೀ ನಿವಾಸ, ವೆಂಕಟೇಶ್, ಗ್ರಾಮ ಪಂಚಾಯಿತಿ ಸದಸ್ಯರು ವಿ ಎಚ್ ಶಿವಲಿಂಗಯ್ಯ, ವಾಲ್ಮೀಕಿ ಸಮುದಾಯದ ತಾಲೂಕು ಅಧ್ಯಕ್ಷ ವೆಂಕಟೇಶ್, ಮಾಜಿ ಸೈನಿಕ ಶ್ರೀನಿವಾಸ, ಸಿದ್ದರಾಮೇಗೌಡ, ಹಾಗೂ ಇತರರು ಈ ವೇಳೆ ಉಪಸ್ಥಿತರಿದ್ದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X