ತೈವಾನ್ ವಿಚಾರದಲ್ಲಿ ಹಸ್ತಕ್ಷೇಪ ನಿಲ್ಲಿಸಿ: ಭಾರತಕ್ಕೆ ಚೀನಾ ಆಗ್ರಹ

Date:

Advertisements

ಭಾರತ- ಚೀನಾ ಸಂಬಂಧಕ್ಕೆ ಧಕ್ಕೆ ಬಾರದ ರೀತಿಯಲ್ಲಿ ತೈವಾನ್ ವಿಷಯವನ್ನು ವಿವೇಕಯುಕ್ತವಾಗಿ ನಿಭಾಯಿಸಿ ಎಂದು ಭಾರತವನ್ನು ಚೀನಾ ಆಗ್ರಹಿಸಿದೆ. ಮುಂಬೈನಲ್ಲಿ ತೈವಾನ್ ಕಾನ್ಸುಲೇಟ್ ಆರಂಭದ ಹಿನ್ನೆಲೆಯಲ್ಲಿ ಈ ಹೇಳಿಕೆ ನೀಡಿರುವ ಚೀನಾ, ತೈವಾನ್ ವಿಚಾರದಲ್ಲಿ ಯಾವುದೇ ಬಗೆಯ ಹಸ್ತಕ್ಷೇಪ ಮಾಡದಂತೆ ಭಾರತಕ್ಕೆ ಆಗ್ರಹಿಸಿದೆ. ತೈವಾನ್ ಈಗಾಗಲೇ ನವದೆಹಲಿ ಹಾಗೂ ಚೆನ್ನೈನಲ್ಲಿ ರಾಯಭಾರ ಕಚೇರಿಗಳನ್ನು ಹೊಂದಿದೆ.

ಚೀನಾದ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರೆ ಮಾವೋ ನಿಂಗ್ ಈ ಬಗ್ಗೆ ಹೇಳಿಕೆ ನೀಡಿ, ಚೀನಾದ ಜತೆ ರಾಜತಾಂತ್ರಿಕ ಸಂಬಂಧ ಹೊಂದಿರುವ ಯಾವುದೇ ದೇಶ ತೈವಾನ್ ಜತೆಗೆ ಅಧಿಕೃತ ಸಂಪರ್ಕ ಹೊಂದುವುದನ್ನು ಚೀನಾ ವಿರೋಧಿಸುತ್ತದೆ ಎಂದು ಸ್ಪಷ್ಟಪಡಿಸಿದರು.

ಹಿಮಾಲಯನ್ ಗಡಿಯಲ್ಲಿ ಸುದೀರ್ಘ ಕಾಲದಿಂದ ಇರುವ ಸಂಘರ್ಷವನ್ನು ಶಮನಗೊಳಿಸುವ ನಿಟ್ಟಿನಲ್ಲಿ ಉಭಯ ದೇಶಗಳು ಪ್ರಯತ್ನಗಳನ್ನು ನಡೆಸುತ್ತಿರುವ ನಡುವೆಯೇ ತೈವಾನ್ ಹೊಸ ಕಾನ್ಸುಲೇಟ್ ಕಚೇರಿಯನ್ನು ಮುಂಬೈನಲ್ಲಿ ಆರಂಭಿಸಿರುವುದು ಚೀನಾದ ಕೆಂಗಣ್ಣಿಗೆ ಕಾರಣವಾಗಿದೆ.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ‘ಮಹಾ’ ಚುನಾವಣೆಗಾಗಿ ಒಂದಾದ ಮನುವಾದಿಗಳು, ಒಂದಾಗದ ಜಾತ್ಯತೀತರು

ತೈವಾನ್ ದೇಶವನ್ನು ತನ್ನ ಭೂಭಾಗ ಎಂದು ಚೀನಾ ಪರಿಗಣಿಸಿದ್ದು ದ್ವೀಪರಾಷ್ಟ್ರದ ಸುತ್ತಮುತ್ತಲ ಪ್ರದೇಶಗಳಲ್ಲಿ ಇತ್ತೀಚೆಗೆ ಮಿಲಿಟರಿ ತಾಲೀಮು ನಡೆಸಿತ್ತು. ಚೀನಾ ಪ್ರತಿಪಾದನೆಯನ್ನು ತೈವಾನ್ ಅಲ್ಲಗಳೆದಿದ್ದು ತಾನು ಸಾರ್ವಭೌಮ ಸ್ವತಂತ್ರ ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ತನ್ನನ್ನು ಬಿಂಬಿಸಿಕೊಳ್ಳುವ ಹಕ್ಕು ತನಗಿದೆ ಎಂದು ಹೇಳಿಕೊಂಡಿದೆ.

“ತೈವಾನ್ ವಿಚಾರದಲ್ಲಿ ಚೀನಾ ತನ್ನ ಮನವಿಯನ್ನು ಭಾರತಕ್ಕೆ ಸಲ್ಲಿಸಿದೆ’ಎಂದು ಹೇಳಿರುವ ಮಾವೊ ನಿಂಗ್, ‘ಒಂದೇ ಚೀನಾ ತತ್ವವು ಉಭಯ ದೇಶಗಳ ಗಂಭೀರ ರಾಜಕೀಯ ಬದ್ಧತೆಯಾಗಿದ್ದು, ಇದು ಚೀನಾ- ಭಾರತ ಸಂಬಂಧಗಳ ರಾಜಕೀಯ ಅಡಿಪಾಯ ಈ ಬದ್ಧತೆಗೆ ಭಾರತ ಬದ್ಧವಾಗಿರಬೇಕು ಮತ್ತು ತೈವಾನ್ ಸಂಬಂಧಿತ ವಿಚಾರಗಳನ್ನು ವಿವೇಕಯುಕ್ತವಾಗಿ ಹಾಗೂ ಸಮರ್ಪಕವಾಗಿ ನಿಭಾಯಿಸಬೇಕು. ತೈವಾನ್ ಜತೆಗೆ ಯಾವುದೇ ಅಧಿಕೃತ ವಿನಿಮಯವನ್ನು ಮಾಡಿಕೊಳ್ಳಬಾರದು” ಎಂದು ಆಗ್ರಹಿಸಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

3 COMMENTS

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಅಮೆರಿಕದ ‘ಅಕ್ಕರೆಯ ನ್ಯಾಯಾಧೀಶ’ ಫ್ರಾಂಕ್ ಕ್ಯಾಪ್ರಿಯೊ ನಿಧನ

ರೋಡ್ ಐಲ್ಯಾಂಡ್‌ನ ನಿವೃತ್ತ ಮುನಿಸಿಪಲ್ ನ್ಯಾಯಾಧೀಶರಾಗಿದ್ದ, ಸಾಮಾಜಿಕ ಜಾಲತಾಣಗಳಲ್ಲಿ 'ಅಕ್ಕರೆಯ ನ್ಯಾಯಾಧೀಶ'...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

Download Eedina App Android / iOS

X