ಕೊಡಗು | ಆಪ್ತಸಮಾಲೋಚಕರ ಹುದ್ದೆಗೆ ಅರ್ಜಿ ಅಹ್ವಾನ; ಅಕ್ಟೋಬರ್‌ 30 ಕೊನೆಯ ದಿನ

Date:

Advertisements

ನವದೆಹಲಿಯ ರಾಷ್ಟ್ರೀಯ ಏಡ್ಸ್ ನಿಯಂತ್ರಣ ಮಂಡಳಿಯಿಂದ ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್‌ಷನ್ ಸೊಸೈಟಿ ಅಡಿಯಲ್ಲಿ ಮಂಜೂರಾಗಿರುವ ಮತ್ತು ಪ್ರಸ್ತುತ ಖಾಲಿ ಇರುವ ಡೆಸಿಗ್ನೇಟೆಡ್ ಎಸ್‌ಟಿಐ/ಆರ್‌ಟಿಐ ಕ್ಲಿನಿಕ್‌ಗಳಲ್ಲಿ ಖಾಲಿ ಇರುವ ಆಪ್ತಸಮಾಲೋಚಕರ ಹುದ್ದೆಗೆ ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ಸೂಚಿಸಲಾಗಿದ್ದು, ಆಪ್ತಸಮಾಲೋಚಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.

ಕೊಡಗಿನ ಮಡಿಕೇರಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ ಸತೀಶ್ ಕುಮಾರ್ ಅವರು ಪತ್ರಿಕೆ ಪ್ರಕಟಣೆಯಲ್ಲಿ ತಿಳಿಸಿದ್ದು, ಅರ್ಜಿ ಆಹ್ವಾನಿಸಿದ್ದಾರೆ.

ಹುದ್ದೆಯ ಹೆಸರು: ಆಪ್ತಸಮಾಲೋಚಕರ ಹುದ್ದೆ ಜಿಲ್ಲಾ ಆಸ್ಪತ್ರೆ, ಮಡಿಕೇರಿ. ಹುದ್ದೆಯ ಸಂಖ್ಯೆ: 1 (ಗುತ್ತಿಗೆ ಆಧಾರದ ಮೇಲೆ 1 ವರ್ಷ ಗುತ್ತಿಗೆ ಆಧಾರ)

Advertisements

ವೇತನಶ್ರೇಣಿ: ಸಂಚಿತ ಮೊತ್ತ ಮಾಸಿಕ ರೂ.21000, ಗರಿಷ್ಠ ವಯೋಮಿತಿ: 60 ವರ್ಷ
ಅರ್ಹತೆ : ಸಮಾಜ ಕಾರ್ಯ, ಮನೋವಿಜ್ಞಾನ, ಸಮಾಜಶಾಸ್ತ್ರ, ಮಾನವ ಶಾಸ್ತ್ರ, ಮಾನವ ಅಭಿವೃದ್ಧಿ, ನರ್ಸಿಂಗ್‌ನಲ್ಲಿ ಸ್ನಾತಕೋತ್ತರ ಪದವಿ ಹೊಂದಿದವರು ಅಥವಾ ಸಮಾಜ ಕಾರ್ಯ, ಮನೋವಿಜ್ಞಾನ, ಸಮಾಜಶಾಸ್ತ್ರ, ಮಾನವ ಶಾಸ್ತ್ರ, ಮಾನವ ಅಭಿವೃದ್ಧಿಯಲ್ಲಿ ಪದವಿ ಹೊಂದಿದವರು, ನರ್ಸಿಂಗ್-ಕೌನ್ಸೆಲಿಂಗ್‌ನಲ್ಲಿ 3 ವರ್ಷಗಳ ಅನುಭವದೊಂದಿಗೆ ಅಥವಾ ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮದ ಅಡಿಯಲ್ಲಿ ಶಿಕ್ಷಣ ಹೊಂದಿದವರು, ಸಮಾಜ ಕಾರ್ಯ, ಮನೋವಿಜ್ಞಾನ ಸಮಾಜಶಾಸ್ತ್ರ, ಮಾನವ ಶಾಸ್ತ್ರ, ಮಾನವ ಅಭಿವೃದ್ಧಿಯಲ್ಲಿ ಪದವಿ ಹೊಂದಿದವರು, ನರ್ಸಿಂಗ್-ಕೌನ್ಸೆಲಿಂಗ್‌ನಲ್ಲಿ ಒಂದು ವರ್ಷದ ಅನುಭವದೊಂದಿಗೆ ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮದ ಅಡಿಯಲ್ಲಿ ಶಿಕ್ಷಣ ಹೊಂದಿದವರು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿ ಹಾಗೂ ಅರ್ಜಿಗಾಗಿ: ಮಡಿಕೇರಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಘಟಕ, ಓಂಕಾರೇಶ್ವರ ದೇವಸ್ಥಾನ ರಸ್ತೆ. ಈ ವಿಳಾಸವನ್ನು ಸಂಪರ್ಕಿಸಬಹುದು.

ಅರ್ಜಿಸಲ್ಲಿಸಲು ಕೊನೆಯ ದಿನಾಂಕ: ಇದೇ ಅಕ್ಟೋಬರ್‌ 30ರ ಸಂಜೆ 5 ಗಂಟೆಯೊಳಗೆ ಅರ್ಜಿ ಮತ್ತು ಮೂಲ ದಾಖಲಾತಿಗಳನ್ನು ಸಲ್ಲಿಸಬೇಕು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಮಾಹಿತಿ ತಂತ್ರಜ್ಞರ ಸೇವೆ ಪಡೆಯಲು ಅರ್ಜಿ ಆಹ್ವಾನ

“ಈ ನೇಮಕಾತಿಯು ರಾಷ್ಟ್ರೀಯ ಏಡ್ಸ್ ನಿಯಂತ್ರಣ ಮಂಡಳಿ(ಎನ್‌ಎಸಿಒ) ನವದೆಹಲಿ ಇವರಿಂದ ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್‌ಷನ್ ಸೊಸೈಟಿ ಎನ್‌ಎಸಿಪಿ-ವಿ ರ ಮಾರ್ಗಸೂಚಿ ಅನ್ವಯ ನೇಮಕಾತಿ ಪ್ರಕ್ರಿಯೆ ನಡೆಸಲಾಗುವುದು. ದೂರವಾಣಿ ಸಂಖ್ಯೆ: 08272-296708ನ್ನು ಸಂಪರ್ಕಿಸಬಹುದು” ಎಂದು ಮಡಿಕೇರಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ ಸತೀಶ್ ಕುಮಾರ್ ಅವರು ತಿಳಿಸಿದ್ದಾರೆಂದು ಇಲಾಖೆ ಮೂಲಗಳಿಂದ ಈ ದಿನ.ಕಾಮ್‌ಗೆ ಮಾಹಿತಿ ದೊರೆತಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X