ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧಿತರಾಗಿದ್ದ ಎಎಪಿಯ ನಾಯಕ ಹಾಗೂ ದೆಹಲಿಯ ಮಾಜಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಅವರಿಗೆ ದೆಹಲಿಯ ಸ್ಥಳೀಯ ಹೈಕೋರ್ಟ್ ಜಾಮೀನು ನೀಡಿದೆ.
ಜೈನ್ ಅವರಿಗೆ ಸ್ಥಳೀಯ ನ್ಯಾಯಾಲಯ ಜಾಮೀನು ನೀಡಿದೆ. ಜೈನ್ ಅವರನ್ನು 18 ತಿಂಗಳ ಹಿಂದೆ ಜಾರಿ ನಿರ್ದೇಶನಾಲಯ (ಇ.ಡಿ) ಬಂಧಿಸಿತ್ತು.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ‘ಮಹಾ’ ಚುನಾವಣೆಗಾಗಿ ಒಂದಾದ ಮನುವಾದಿಗಳು, ಒಂದಾಗದ ಜಾತ್ಯತೀತರು
ವೈದ್ಯಕೀಯ ಕಾರಣಗಳಿಗಾಗಿ ಮೇ 2023 ರಲ್ಲಿ ಸುಪ್ರೀಂ ಕೋರ್ಟ್ ಅವರಿಗೆ ಮಧ್ಯಂತರ ಜಾಮೀನು ನೀಡಿತ್ತು. ಈ ವರ್ಷದ ಮಾರ್ಚ್ನಲ್ಲಿ ಜಾಮೀನು ಕೋರಿಕೆಯನ್ನು ಸುಪ್ರೀಂ ಕೋರ್ಟ್ ನಿರಾಕರಿಸಿದ ನಂತರ ಅವರು ತಿಹಾರ್ ಜೈಲಿಗೆ ಮರಳಿದ್ದರು.
ಸತ್ಯೇಂದ್ರ ಜೈನ್ ಅವರು ಇತ್ತೀಚಿನ ದಿನಗಳಲ್ಲಿ ವಿವಿಧ ಪ್ರಕರಣಗಳಲ್ಲಿ ಜಾಮೀನು ಪಡೆದ ಮೂರನೇ ಎಎಪಿ ನಾಯಕರಾಗಿದ್ದಾರೆ.
