‘ದಿ ಕೇರಳ ಸ್ಟೋರಿ’ ಸಿನಿಮಾ ನಿಷೇಧ ಪ್ರಕರಣ; ಪಶ್ಚಿಮ ಬಂಗಾಳ, ತಮಿಳುನಾಡಿಗೆ ಸುಪ್ರೀಂ ನೋಟಿಸ್

Date:

Advertisements

ವಿವಾದಾತ್ಮಕ ‘ದಿ ಕೇರಳ ಸ್ಟೋರಿ’ ಸಿನಿಮಾ ನಿಷೇಧ ಪ್ರಕರಣಕ್ಕೆ ಸಂಬಂಧಿಸಿ ಪಶ್ಚಿಮ ಬಂಗಾಳ ಹಾಗೂ ತಮಿಳುನಾಡು ರಾಜ್ಯಗಳಿಗೆ ಸುಪ್ರೀಂ ಕೋರ್ಟ್ ನೋಟಿಸ್ ಜಾರಿ ಮಾಡಿದೆ.

ಶುಕ್ರವಾರ ವಿಚಾರಣೆ ಆರಂಭಿಸಿದ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ಅವರ ನೇತೃತ್ವದ ಪೀಠ, ಪ್ರತಿವಾದಿಗಳ ವಾದವನ್ನು ಆಲಿಸದೆ ಚಿತ್ರಕ್ಕೆ ತಡೆ ನೀಡುವ ಯಾವುದೇ ಪ್ರಸ್ತಾಪ ನಿರಾಕರಿಸಿ, ಮುಂದಿನ ವಿಚಾರಣೆಯನ್ನು ಬುಧವಾರಕ್ಕೆ ಮುಂದೂಡಿದೆ.

“ಸಿನಿಮಾವನ್ನು ದೇಶಾದ್ಯಂತ ಪ್ರದರ್ಶಿಸಲಾಗಿದೆ. ಪಶ್ಚಿಮ ಬಂಗಾಳ ಸರ್ಕಾರ ಏಕೆ ಸಿನಿಮಾ ನಿಷೇಧಿಸಿದೆ. ಚಿತ್ರ ಪ್ರದರ್ಶನಕ್ಕೆ ಏಕೆ ಅನುಮತಿ ನೀಡಿಲ್ಲ? ಇದೇ ರೀತಿಯ ವಿವಿಧ ಜನಸಮುದಾಯ ಹೊಂದಿರುವ ದೇಶದ ವಿವಿಧ ರಾಜ್ಯಗಳಲ್ಲಿ ಸಿನಿಮಾ ಪ್ರದರ್ಶಿಸಲಾಗುತ್ತಿದೆ. ಅದು ಒಳ್ಳೆಯದಾಗಿರಬಹುದು ಅಥವಾ ಕೆಟ್ಟದಾಗಿರಬಹುದು, ಸಿನಿಮಾ ನಿಷೇಧಕ್ಕೂ ಹಾಗೂ ಚಿತ್ರದ ಸಿನಿಮೀಯ ಮೌಲ್ಯಕ್ಕೂ ಯಾವುದೇ ಸಂಬಂಧವಿಲ್ಲ” ಎಂದು ಡಿ ವೈ ಚಂದ್ರಚೂಡ್ ತಿಳಿಸಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ‘ದಿ ಕೇರಳ ಸ್ಟೋರಿ’ ಸಿನಿಮಾ ಬಹಿಷ್ಕರಿಸಿ; ಸಿನಿಪ್ರೇಮಿಗಳಿಗೆ ಸಚಿವರ ಮನವಿ

ಕೇರಳದ 32,000 ಮಹಿಳೆಯರು ಐಸಿಸ್‌ಗೆ ಸೇರ್ಪಡೆಗೊಂಡಿದ್ದಾರೆ ಎಂದು ಹೇಳುವ ಚಲನಚಿತ್ರವು ವಿಪಕ್ಷಗಳ ರಾಜ್ಯಗಳಲ್ಲಿ ಅಡೆತಡೆಗಳನ್ನು ಎದುರಿಸಿದರೆ, ಉತ್ತರ ಪ್ರದೇಶ ಮತ್ತು ಮಧ್ಯಪ್ರದೇಶದಂತಹ ಬಿಜೆಪಿ ಆಡಳಿತದ ರಾಜ್ಯಗಳಲ್ಲಿ ತೆರಿಗೆ ವಿನಾಯಿತಿಗಳನ್ನು ಪಡೆದುಕೊಂಡಿದೆ. ಸುದೀಪ್ತೋ ಸೇನ್ ನಿರ್ದೇಶನದ ‘ದಿ ಕೇರಳ ಸ್ಟೋರಿ’ ಚಿತ್ರವನ್ನು ವಿಪುಲ್ ಶಾ ನಿರ್ಮಿಸಿದ್ದಾರೆ.

32,000 ಮಹಿಳೆಯರು ಐಸಿಸ್‌ಗೆ ಸೇರುತ್ತಿರುವುದು ಸುಳ್ಳಿನಿಂದ ಕೂಡಿದ ದುರುದ್ದೇಶದ ಚಿತ್ರ ಎಂದು ವಿಪಕ್ಷಗಳು ದೇಶಾದ್ಯಂತ ಆಕ್ರೋಶ ವ್ಯಕ್ತಪಡಿಸಿವೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

Download Eedina App Android / iOS

X