ಮಂಡ್ಯದಲ್ಲಿ ನಡೆಯುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಡಾ.ಜೀಶಂಪ ಸಾಹಿತ್ಯ ವೇದಿಕೆ, ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಫಿಲಂಸ್ಸ್, ಕನ್ನಂಬಾಡಿ ದಿನಪತ್ರಿಕೆ ಇವರ ಸಂಯುಕ್ತಾಶ್ರಯದಲ್ಲಿ ಕನ್ನಡಹಬ್ಬ ಸಂಭ್ರಮ ಅಂಗವಾಗಿ ಅಖಿಲ ಭಾರತ ಸಾಹಿತ್ಯ ಸಮ್ಮೇಳನ ನಿಮಿತ್ತ ನವೆಂಬರ್ 17ರ ಭಾನುವಾರದಂದು ಮಂಡ್ಯ ನಗರ ಗಾಂಧಿಭವನದಲ್ಲಿ 9ನೇ ಕನ್ನಡ ಅಕ್ಷರ ಜಾತ್ರೆಯನ್ನು ಆಯೋಜಿಸಲಾಗಿದೆ. ಈ ಹಿನ್ನೆಲೆಯಲ್ಲಿ ಆಸಕ್ತರಿಂದ ಕವಿಗೋಷ್ಠಿಗೆ ಕವನವನ್ನು ಹಾಗೂ ಸಾಧಕರಿಂದ ವಿವಿಧ ಪ್ರಶಸ್ತಿಗೆ ಅರ್ಜಿಯನ್ನು ಆಹ್ವಾನಿಸಿದೆ.
ಆಸಕ್ತರು 20 ಸಾಲಿನ ಎರಡು ಕವನಗಳು, ಕಿರು ಪರಿಚಯ, ಪೋಟೋ, ಮೊಬೈಲ್ ಸಂಖ್ಯೆ ಹಾಗೂ ವಿಳಾಸವನ್ನು ಆಕ್ಟೋಬರ್ 25ರೊಳಗೆ ವ್ಯಾಟ್ಸಪ್ ಮೂಲಕ ಕಳುಹಿಸಬೇಕು.
ಕವನಗಳು ಯಾವುದಾದರೂ ವಿಷಯವನ್ನು ಒಳಗೊಂಡಿರಬಹುದು. ಆಯ್ಕೆಯಾದ ಕವಿತೆಗಳನ್ನು ಪುಸ್ತಕ ರೂಪದಲ್ಲಿ ಹೊರತರಲಾಗುವುದು. ಐವತ್ತು ಮಂದಿ ಕವಿಗಳಿಗೆ ಕವಿಗೋಷ್ಠಿಯಲ್ಲಿ ಅವಕಾಶ ಕಲ್ಪಿಸಲಾಗುವುದು. ಇಪ್ಪತ್ತು ಉತ್ತಮ ಕವನಗಳಿಗೆ ಕಾವ್ಯಶ್ರೀ, ಇಪ್ಪತ್ತು ಮಂದಿ ಸಾಧಕರಿಗೆ ‘ಕನ್ನಡರತ್ನ, ಐದು ಮಂದಿಗೆ ‘ಕರ್ನಾಟಕ ಸೇವಾರತ್ನ’ ರಾಜ್ಯ ಮಟ್ಟದ ಪ್ರಶಸ್ತಿ ನೀಡಿ ಗೌರವಿಸಲಾಗುವುದು.
ಇದನ್ನು ಓದಿದ್ದೀರಾ? ರಾಮನಗರ | ಕಸಾಪದಿಂದ ಅಗಲಿದ ಉದ್ಯಮಿ ರತನ್ ಟಾಟಾಗೆ ನುಡಿನಮನ
ವಿವಿಧ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದವರು ಸ್ವವಿವರದೊಂದಿಗೆ ಅರ್ಜಿಯನ್ನು ವ್ಯಾಟ್ಸಪ್ ಮೂಲಕ ಕಳುಹಿಸಬೇಕು. ಜೀವಮಾನದಲ್ಲಿ ಅತ್ಯುತ್ತಮ ಸಾಹಿತ್ಯ ಸೇವೆ ಮಾಡಿದ ಸಾಧಕರನ್ನು 9ನೇ ಕನ್ನಡ ಅಕ್ಷರ ಜಾತ್ರೆ ಸಮ್ಮೇಳನಾಧ್ಯಕ್ಷರನ್ನಾಗಿ ಆಯ್ಕೆ ಮಾಡಿ ಗೌರವಿಸಲಾಗುವುದು ಎಂದು ತಿಳಿಸಿದ್ದಾರೆ.
ಹೆಚ್ಚಿನ ವಿವರಕ್ಕಾಗಿ ಕವನಗಳು ಮತ್ತು ಪ್ರಶಸ್ತಿಗೆ ವಿವರಗಳನ್ನು ಎಸ್.ಕೃಷ್ಣಸ್ವರ್ಣಸಂದ್ರ ವ್ಯಾಟ್ಸಾಪ್ ನಂ-9448424380ಗೆ ಕಳುಹಿಸಬೇಕಾಗಿ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
