ತುರುವೇಕೆಯಲ್ಲಿ ಅ.29 ರಿಂದ ಅಪ್ಪು ಟಿಪಿಎಲ್ ಕ್ರಿಕೆಟ್ ಪಂದ್ಯಾವಳಿ ಆರಂಭ

Date:

Advertisements

ಅಪ್ಪು ಪುಣ್ಯಸ್ಮರಣೆ ಅಂಗವಾಗಿ ತುರುವೇಕೆರೆಯಲ್ಲಿ ಮೊದಲ ಬಾರಿಗೆ ಐಪಿಎಲ್ ಕ್ರಿಕೆಟ್ ಮಾದರಿಯಲ್ಲಿ ನಡೆಯಲಿರುವ ಅಪ್ಪು ತುರುವೇಕೆರೆ ಪ್ರೀಮಿಯರ್ ಕಪ್ ಕ್ರಿಕೆಟ್ ಪಂದ್ಯಾವಳಿಗೆ ಅ 29 ರಂದು ಚಾಲನೆ ನೀಡಲಾಗುವುದು ಎಂದು ಕ್ರಿಕೆಟ್ ಪಂದ್ಯಾವಳಿಯ ವ್ಯವಸ್ಥಾಪಕ ಹಾಗೂ ಆರ್ ಎಸ್ ಅಕ್ಷರ ಅಕಾಡೆಮಿ ಅಧ್ಯಕ್ಷ ಸಿ.ಎಸ್ .ಮೂರ್ತಿ ತಿಳಿಸಿದರು.

ತುರುವೇಕೆರೆ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಅಪ್ಪು ಕಪ್ ಪಂದ್ಯಾವಳಿಯನ್ನು ಆ.29 ರಂದು ತುರುವೇಕೆರೆ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಕ್ರೀಡಾಂಗಣದಲ್ಲಿ ಪಂದ್ಯಾವಳಿಗೆ ಚಾಲನೆ ನೀಡಲಾಗುವುದು. 30 ಹಾಗೂ 31 ರಂದು ವಿವಿಧ ತಂಡಗಳೊಂದಿಗೆ ಸೌಹಾರ್ದಯುತ ಪಂದ್ಯಗಳನ್ನು ಆಡಿಸಲಾಗುತ್ತದೆ ಎಂದರು.

ಈಗಾಗಲೇ ಅಪ್ಪು ಕಪ್ ಚಿಹ್ನೆಯನ್ನು ಬಿಡುಗಡೆಗೊಳಿಸಲಾಗಿದೆ. ತಾಲೂಕಿನ ಗ್ರಾಮೀಣ ಪ್ರತಿಭೆಗಳು ಮತ್ತು ಪಟ್ಟಣದ ಪ್ರತಿಭೆಗಳನ್ನು ಸಮನಾಂತರವಾಗಿ ಗುರುತಿಸುವ ಸಲುವಾಗಿ ತಂಡಗಳ ಆಯ್ಕೆಯ ಸಂಬಂಧ 16 ತಂಡಗಳನ್ನು ಮಾಡಲಾಗಿದೆ. ಈ 16 ತಂಡಗಳ ಮಾಲೀಕರು ತಮಗೆ ಬೇಕಾದ ಕ್ರೀಡಾಪಟುಗಳನ್ನು ಆಯ್ಕೆ ಮಾಡಿಕೊಂಡಿದ್ದಾರೆ. 16 ತಂಡಗಳಿಗೂ ಅಪ್ಪು ಅಭಿನಯಿಸಿರುವ ಚಲನ ಚಿತ್ರಗಳಾದ ಗಂಧದಗುಡಿ, ರಣವಿಕ್ರಮ, ಅಜಯ್, ದೊಡ್ಡಮನೆ ಹುಡುಗ, ವಂಶಿ, ರಾಜಕುಮಾರ, ಬೆಟ್ಟದ ಹೂವು, ಪವರ್, ಅರಸು, ಅಣ್ಣಾ ಬಾಂಡ್, ಯುವರತ್ನ, ಬಿಂದಾಸ್, ಪರಮಾತ್ಮ, ಆಕಾಶ್, ಜೇಮ್ಸ್, ಮಿಲನ ಎಂದು ಹೆಸರಿಡಲಾಗಿದೆ ಎಂದು ಸಿ.ಎಸ್.ಮೂರ್ತಿ ತಿಳಿಸಿದರು.

Advertisements

ತಾಲೂಕಿನಿಂದ ಸುಮಾರು 300 ಕ್ಕೂ ಹೆಚ್ಚು ಆಟಗಾರರು ನೊಂದಣಿ ಮಾಡಿಸಿಕೊಂಡಿದ್ದರು. ಅವರಲ್ಲಿ ಸುಮಾರು 240 ಮಂದಿ ಆಟಗಾರರನ್ನು ಆಯ್ಕೆ ಮಾಡಿಕೊಳ್ಳಲಾಗಿದೆ. ಫ್ರಾಂಚೈಸೀಯವರು ಕ್ರಿಕೆಟ್ ಆಟಗಾರನ್ನು ಬಿಡ್ ಮೂಲಕ ಆಯ್ಕೆ ಮಾಡಿಕೊಂಡಿದ್ದಾರೆ. ರಾಜು, ಅಭಿಷೇಕ್, ಶಿವ, ಕುಶಾಲ್ ಹೆಚ್ಚು ಮೊತ್ತಕ್ಕೆ ಹರಾಜು ಆದ ಆಟಗಾರರಾಗಿದ್ದಾರೆ. ಈ ಕ್ರಿಕೆಟ್ ಪಂದ್ಯಾವಳಿ ಉದ್ದೇಶ ತಾಲೂಕಿನ ಪ್ರತಿಭಾನ್ವಿತ ಆಟಗಾರಿಗೆ ಅವಕಾಶ ದೊರೆಯುವಂತೆ ಮಾಡುವುದು. ತಾಲೂಕಿನ ಎಲ್ಲಾ ಕ್ರೀಡಾ ಪ್ರೇಮಿಗಳು ಆಸಕ್ತರು ಅಭಿಮಾನಿಗಳು ಪಂದ್ಯಾವಳಿಗಳನ್ನು ಯಶಸ್ವಿಯಾಗಿ ನಡೆಯಲು ಸಹಕರಿಸಬೇಕು ಎಂದು ಆರ್ ಎಸ್ ಅಕ್ಷರ ಅಕಾಡೆಮಿ ಅಧ್ಯಕ್ಷ ಸಿ.ಎಸ್. ಮೂರ್ತಿ ವಿನಂತಿಸಿಕೊಂಡರು.

ಪತ್ರಿಕಾಗೋಷ್ಠಿ ಯಲ್ಲಿ ನವೀನ್ ಬಾಬು, ಮಲ್ಲಾಘಟ್ಟ ಪುಟ್ಟಣ್ಣ, ರವಿ, ಅಶೋಕ, ನಂದೀಪ್ ಮಂಜಣ್ಣ, ವಿನೋದ್, ಕಿಟ್ಟಿ, ಬಾಣಸಂದ್ರ ಕೃಷ್ಣ ಮಾದಿಗ, ಚಿರಂಜೀವಿ, ಅರುಣ್ ಕುಮಾರ್, ಗಣೇಶ್, ಉಮೇಶ್, ಕೇಶವ ಇತರರು ಇದ್ದರು

ವರದಿ – ಎಸ್. ನಾಗಭೂಷಣ್ ತುರುವೇಕೆರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X