ರಾಯಚೂರು | ಪಿಡಿಓ, ಅಧಿಕಾರ ದುರ್ಬಳಕೆ ಆರೋಪ: ಕೂಲಿ ಕಾರ್ಮಿಕರು ಧರಣಿ

Date:

Advertisements

ರಾಯಚೂರು ಜಿಲ್ಲೆ ಲಿಂಗಸಗೂರು ತಾಲೂಕಿನ ಸರ್ಜಾಪೂರು ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಶೋಭಾರಾಣಿ ಅಧಿಕಾರ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿ ಗ್ರಾಮೀಣ ಕೂಲಿ ಕಾರ್ಮಿಕರ ಸಂಘಟನೆ ಹಾಗೂ ರಾಜ್ಯ ಮಹಿಳಾ ಒಕ್ಕೂಟದ ವತಿಯಿಂದ ಸಹಾಯಕ ಆಯುಕ್ತ ಕಚೇರಿ ಎದುರು ಅನಿರ್ಧಿಷ್ಟಾವಧಿ ಧರಣಿ ಸತ್ಯಾಗ್ರಹ ನಡೆಸಿದರು.

ಈ ಧರಣಿ ಸತ್ಯಾಗ್ರಹವು ಐದನೇ ದಿನಕ್ಕೆ ಕಾಲಿಟ್ಟಿದ್ದು, ನಿರಂತರ ಸುರಿಯುವ ಜಿಟಿ ಜಿಟಿ ಮಳೆಯಲ್ಲಿಯೂ ಪ್ರತಿಭಟನೆ ಮುಂದುವರೆದಿದೆ. ತಾಲೂಕಿನ ಹಲವು ಗ್ರಾಮಗಳಲ್ಲಿ ಅಭಿವೃದ್ಧಿ ಕುಂಠಿತಗೊಡಿದ್ದು, ಕೂಡಲೆ ಗ್ರಾಮ ಪಂಚಾಯತಿಗಳ ಸಮಸ್ಯೆಗಳನ್ನು ಪರಿಹರಿಸಬೇಕು ಹಾಗೂ ನರೇಗಾ ಸ್ಥಳದಲ್ಲಿ ಕುಡಿಯುವ ನೀರು, ಪ್ರಥಮ ಚಿಕಿತ್ಸೆ, ಇನ್ನಿತರ ಮೂಲಭೂತ ಸೌಲಭ್ಯಗಳನ್ನು ಒದಗಿಸಬೇಕು ಎಂದು ಒತ್ತಾಯಿಸಿದರು.

ಪಿಡಿಓ ಅಧಿಕಾರಿ ಶೋಭಾರಾಣಿ ತಮ್ಮ ಪತಿಯ ಹೊಲದಲ್ಲಿ ಕೃಷಿ ಹೊಂಡ ನಿರ್ಮಾಣ ಮಾಡಿಕೊಂಡು ಅಧಿಕಾರ ದುರ್ಬಳಕೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಸಂಬಂಧ ಪಟ್ಟ ಇಲಾಖೆಯ ಗಮನಕ್ಕೆ ತರಲಾಗಿತ್ತು. ಇದರಿಂದ ಎಚ್ಚೆತ್ತ ಪಿಡಿಓ ಶೋಭಾರಾಣಿ ಸರ್ಕಾರಕ್ಕೆ ಹಣ ಮರುಪಾವತಿ ಮಾಡಿದ್ದಾರೆ. ಆದರೆ, ಪತಿಯ ಹೊಲದಲ್ಲಿ ಕೃಷಿ ಹೊಂಡ ನಿರ್ಮಾಣ ಮಾಡಿದ್ದು ಸಾಬೀತಾದರೂ ಕ್ರಮಕೈಗೊಳ್ಳಲಿಲ್ಲ. ಕೂಡಲೇ ಅವರ ವಿರುದ್ಧ ಮೇಲಾಧಿಕಾರಿಗಳು ಕಾನೂನು ಕ್ರಮ ಕೈಗೊಳ್ಳದಿರುವದು ಖಂಡನೀಯ ಎಂದರು.

Advertisements

ಇನ್ನು ಗ್ರಾಮೀಣ ಕೂಲಿ ಕಾರ್ಮಿಕರಿಗೆ ಸಮಯಕ್ಕೆ ಸರಿಯಾಗಿ ವೇತನ ಪಾವತಿ ಮಾಡದಿರುವ ಪರಿಣಾಮ ಕೂಲಿ ಕಾರ್ಮಿಕರು ತೊಂದರೆ ಅನುಭವಿಸುತ್ತಿದ್ದಾರೆ. ಹೊನ್ನಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ರಾಮನಾಯಕನ ದೊಡ್ಡಿಗೆ ಕುಡಿಯುವ ನೀರಿಗಾಗಿ ತಾಲೂಕು ಪಂಚಾಯತಿ ಅನುದಾನದಲ್ಲಿ ಕೊಳವೆಬಾವಿ ಹಾಕಿಸಿದ್ದು, ದೊಡ್ಡಿಗೆ 24 ಗಂಟೆ ವಿದ್ಯುತ್ ಸಂಪರ್ಕವಿಲ್ಲ. ದೊಡ್ಡಿಯಲ್ಲಿರುವ ಮನೆಗಳಿಗೆ ವಿದ್ಯುತ್ ಮೀಟರ್ ಅಳವಡಿಸಿದ್ದಾರೆ. ಕೂಡಲೇ ಮೀಟರ್ ಅಳವಡಿಸಿದ ಗುತ್ತಿಗೆದಾರ ಹಾಗೂ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಹಾಗೂ ಈ ದೊಡ್ಡಿಗೆ ಮೂಲಭೂತ ಸೌಲಭ್ಯಗಳನ್ನು ಒದಗಿಸಬೇಕು ಎಂದು ಆಗ್ರಹಿಸಿದರು.

ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ತಾಲೂಕು ಪಂಚಾಯತ ಯೋಜನಾಧಿಕಾರಿ ಶರಣಬಸಪ್ಪ ಧರಣಿ ನಿರತರೊಡನೆ ಮಾತುಕತೆ ನಡೆಸಿದರು. ಆದರೆ ಅವರ ಮಾತುಗಳಲ್ಲಿ ಯಾವುದೆ ಸ್ಪಷ್ಟತೆ ಇರದ ಕಾರಣ ಧರಣಿ ಮುಂದುವರೆಸಲಾಯಿತು ಎಂದರು.

ಇದನ್ನು ಓದಿದ್ದೀರಾ? ರಾಯಚೂರು | ಒಳಮೀಸಲಾತಿ ಜಾರಿಗಾಗಿ ಹೋರಾಟಗಾರರಿಂದ ಡಿಸಿ ಕಚೇರಿ ಮುತ್ತಿಗೆ ಯತ್ನ; ಬಂಧನ, ಬಿಡುಗಡೆ

ಈ ಸಂದರ್ಭದಲ್ಲಿ ಗ್ರಾಮೀಣ ಕೂಲಿ ಕಾರ್ಮಿಕರ ಸಂಘಟನೆ ಮುಖಂಡ ಗುಂಡಪ್ಪ ಯರಡೋಣ. ಮಂಜು, ಹನುಮಂತ, ಕುಬೇರು ಕುಪೆಗುಡ್ಡ, ದುರ್ಗಪ್ಪ, ಬಸವಂತಪ್ಪ, ಯಲ್ಲಪ್ಪ, ಶರಣಪ್ಪ ಹಾಗೂ ಶರಣಮ್ಮ, ಇತರರು ಇದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಪೋಕ್ಸೋ ಪ್ರಕರಣ: ಆರೋಪಿಗಳಿಗೆ ದಂಡ, ತಲಾ ಹತ್ತು ವರ್ಷ ಜೈಲು ಶಿಕ್ಷೆ

ಪೋಕ್ಸೋ ಪ್ರಕರಣದಲ್ಲಿ ಇಬ್ಬರು ಆರೋಪಿಗಳಿಗೆ ತಲಾ ಹತ್ತು ವರ್ಷ ಜೈಲು ಶಿಕ್ಷೆ...

ಮಂಗಳೂರು | ಅಲ್‌ ವಫಾ ಟ್ರಸ್ಟ್‌ನಿಂದ 15 ಜೋಡಿಗಳಿಗೆ ಸರಳ ಸಾಮೂಹಿಕ ವಿವಾಹ

ಮಂಗಳೂರಿನ ಅಲ್ ವಫಾ ಚಾರಿಟೆಬಲ್ ಟ್ರಸ್ಟ್ ಹಮ್ಮಿಕೊಂಡಿದ್ದ 15 ಜೋಡಿಗಳ ಸರಳ...

ಚಿಕ್ಕಮಗಳೂರು l ಶೋ ರೂಮ್ ಸಿಬ್ಬಂದಿಯಿಂದಲೇ ಡೀಸೆಲ್ ಕಳ್ಳತನ

ಶೋ ರೂಂ ಸಿಬ್ಬಂದಿಯೇ ಹೊಸ ವಾಹನದ ಡೀಸೆಲ್‌ ಕಳ್ಳತನ ಮಾಡಿದ ಘಟನೆ...

ಗದಗ | ಒಳಮೀಸಲಾತಿ ಜಾರಿ, ಬಹುದಿನಗಳ ಕನಸು ನನಸು ಮಾಡಿದ ಎಲ್ಲರಿಗೂ ಅಭಿನಂದನೆ: ಎಸ್. ಎನ್. ಬಳ್ಳಾರಿ

ಪರಿಶಿಷ್ಟ ಜಾತಿಗಳ ಮೂರು ದಶಕಗಳ ಒಳಮೀಸಲಾತಿ ಹೋರಾಟವನ್ನು ಮಾನ್ಯ ಸುಪ್ರೀಂ ಕೋರ್ಟ್...

Download Eedina App Android / iOS

X